ರಾಯಚೂರು | ವೈದ್ಯರ ಕಾರಿನ ಮೇಲೆ ಗುಂಡಿನ ದಾಳಿ; ಆರೋಪಿಗಳ ಬಂಧನಕ್ಕೆ ಐಎಂಎ ಆಗ್ರಹ

Date:

Advertisements

ಭಾರತೀಯ ವೈದ್ಯಕೀಯ ಸಂಘದ ಹಿರಿಯ ಸದಸ್ಯ ಡಾ ಜಯಪ್ರಕಾಶ ಪಾಟಿಲ್ ಬೆಟ್ಟದೂರು ಇವರ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆಯನ್ನು ಖಂಡಿಸಿ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಭಯಮುಕ್ತ ವ್ಯವಸ್ಥೆ ರೂಪಿಸಬೇಕು ಎಂದು ಐಎಂಎ ಸಂಘದ ಕಾರ್ಯಕರ್ತರು ಆಗ್ರಹಿಸಿದರು.

ವೈದ್ಯರು ಪ್ರತಿಭಟನೆ ನಡೆಸಿದ್ದು, ದುಷ್ಕರ್ಮಿಗಳನ್ನು ಬಂಧಿಸುವಂತೆ ರಾಯಚೂರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

“ಗುರುವಾರ ಮಧ್ಯಾಹ್ನ ಮಾನ್ವಿಗೆ ತೆರಳುತ್ತಿದ್ದಾಗ ಬೈಕ್ ನಲ್ಲಿ ಬಂದಿದ್ದ ಇಬ್ಬರು ಅನಾಮಿಕರು ಗುಂಡಿನ ದಾಳಿ ನಡೆಸಿದ್ದು, ಜೀವಾಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ರಾಜ್ಯಾದ್ಯಂತ ವೈದ್ಯರು ಆಘಾತಕ್ಕೆ ಒಳಗಾಗಿದ್ದಾರೆ” ಎಂದರು.

Advertisements

“ಕಳೆದ ಮೂರು ತಿಂಗಳ ಹಿಂದೆಯೇ ಡಾ.ಜಯಪ್ರಕಾಶ ಪಾಟೀಲ್‌ರಿಗೆ ಬೆದರಿಕೆ ಕರೆ ಬಂದಿದ್ದು, ನೇತಾಜಿನಗರ ಠಾಣೆಯಲ್ಲಿ ಪ್ರಕರಣವನ್ನೂ ದಾಖಲಿಸಿದ್ದಾರೆ. ಘಟನೆಯಿಂದ ನಗರದ ಜನತೆ ಅದರಲ್ಲಿಯೂ ವೈದ್ಯರು ಭಯದ ಭೀತಿಗೆ ಒಳಗಾಗಿದ್ದಾರೆ. ಕೂಡಲೇ ಸಂಬಂಧಿಸಿದ ಆರೋಪಿಗಳನ್ನು ಬಂಧಿಸಿ ವೈದ್ಯರ ಕುಟುಂಬಕ್ಕೆ ರಕ್ಷಣೆ ನೀಡಬೇಕು. ಜಿಲ್ಲಾಡಳಿತ ಕೂಡಲೇ ಕ್ರಮಕ್ಕೆ ಮುಂದಾಗಬೇಕು. ಇಲ್ಲದಿದ್ದಲ್ಲಿ ವೈದ್ಯಕೀಯ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸೂಕ್ತ ಸೌಲಭ್ಯ, ಗೌರವಧನ ಒದಗಿಸಲು ಬೆಳೆ ಸಮೀಕ್ಷೆದಾರರ ಒಕ್ಕೂಟ ಒತ್ತಾಯ

ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಪ್ರಭುರಾಜ ಗದ್ದಿಕೇರಿ, ಉಪಾಧ್ಯಕ್ಷ ಡಾ.ಅನಿರುದ್ದ ಕುಲಕರ್ಣಿ, ಕಾರ್ಯದರ್ಶಿ ಹರ್ಷ ಪಾಟೀಲ್, ಡಾ ರಾಮಪ್ಪ, ಡಾ ವಿ ಎ ಮಾಲಿಪಾಟೀಲ್, ಡಾ.ನಾರಾಯಣ, ಡಾ.ನಾಗರಾಜ, ಡಾ.ಸುರೇಶ ಸಗರದ, ಡಾ.ಅಮರೇಶ ಪಾಟೀಲ್, ಡಾ. ಮನೋಹರ ಪತ್ತಾರ ಸೇರಿದಂತೆ ಮಹಿಳಾ ವೈದ್ಯರು ಸೇರಿದಂತೆ ಅನೇಕ ವೈದ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗ್ರಾಮವನ್ನು ಪಟ್ಟಣ ಪಂಚಾಯತ್ ಮೇಲ್ದರ್ಜೆಗೆ ಏರಿಸಬಾರದು : ಗ್ರಾಮಸ್ಥರ ಪ್ರತಿಭಟನೆ

ಲಿಂಗಸೂಗೂರು ತಾಲ್ಲೂಕಿನ ಗುರುಗುಂಟ ಗ್ರಾಮವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆರಿಸಬಾರದು ಎಂದು ರಾಜ್ಯ...

ರಾಯಚೂರು | ಶೀಲಹಳ್ಳಿ ಸೇತುವೆ ಮುಳುಗಡೆ : ನಾಲ್ಕು ಗ್ರಾಮಕ್ಕೆ ಸಂಪರ್ಕ ಕಡಿತ

ಲಿಂಗಸುಗೂರು ತಾಲ್ಲೂಕಿನ ಶೀಲಹಳ್ಳಿ ಸೇತುವೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಮುಳುಗಿದ್ದು,...

ರಾಯಚೂರು | ನಿರಂತರ ಮಳೆ : ಸೂರ್ಯಕಾಂತಿ ಬೆಳೆಗೆ ಕೀಟ ಬಾಧೆ

ಜಿಲ್ಲೆಯಲ್ಲಿ ನಿರಂತರ ವಾರದಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆ ಸೂರ್ಯಕಾಂತಿ ಬೆಳೆಗಾರರ...

ರಾಯಚೂರು | ಪಾಳುಬಿದ್ದ ದಾದಿಯರ ವಸತಿ ಗೃಹಗಳು; ಸ್ಥಳೀಯ ಆಡಳಿತದ ನಿರ್ಲಕ್ಷ್ಯ ಆರೋಪ

ರಾಯಚೂರಿನ ಸಿರವಾರ ನಗರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಲಾಗಿರುವ ದಾದಿಯರ ವಸತಿ...

Download Eedina App Android / iOS

X