ರಾಯಚೂರು | ನಿವೇಶನ ಹಂಚಿಕೆಗೆ ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ ಆಗ್ರಹ

Date:

Advertisements

ವಾಜಪೇಯಿ ನಗರ ನಿವೇಶನ ಯೋಜನೆಯಲ್ಲಿ ಮಂಜೂರಾದ ನಿವೇಶನಗಳನ್ನು ಅಭಿವೃದ್ದಿಪಡಿಸಿ ನಿವೇಶನ ರಹಿತರಿಗೆ ಹಂಚಿಕೆ ಮಾಡಬೇಕು ಎಂದು ರಾಯಚೂರು ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

“ನಗರದ ಹಲವು ಸ್ಲಂಗಳಲ್ಲಿ ವಾಸಿಸುವ ಸುಮಾರು ಜನರು ನಿವೇಶನ ಇಲ್ಲದೆ ಬಾಡಿಗೆ ಮನೆಯಲ್ಲಿ, ಟೆಂಟ್‌ಗಳಲ್ಲಿ ವಾಸಿಸುವ ಸ್ಥಿತಿ ನಿರ್ಮಾಣವಾಗಿದೆ. ವಾಜಪೇಯಿ ನಗರ ನಿವೇಶನ ಯೋಜನೆಯಲ್ಲಿ 2017ರಲ್ಲಿ ನಿವೇಶನ ಮಂಜೂರಾಗಿದ್ದು, ಸರ್ವೆ ನಂ 581, 929/2, 726/727 ರಲ್ಲಿ ಈವರೆಗೂ ಕೇವಲ ಹಕ್ಕುಪತ್ರ ವಿತರಿಸಿದ್ದಾರೆಯೇ ಹೊರತು ನಿವೇಶನ ಹಂಚಿಕೆ ಮಾಡಿಲ್ಲ” ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಮಲಪ್ರಭಾ ಅಚ್ಚುಕಟ್ಟು; 15 ದಿನಗಳ ಕಾಲ ಕುಡಿಯುವ ನೀರು ಪೂರೈಕೆ

Advertisements

“ಬಡವರಿಗೆ ಮಂಜೂರಾದ ಭೂಮಿಯನ್ನು ಭೂಗಳ್ಳರು ಅತಿಕ್ರಮಿಸಿಕೊಂಡಿದ್ದಾರೆ. ಕೂಡಲೇ ಸದರಿ ಜಮೀನನ್ನು ಸರ್ವೆ ನಡೆಸಿ ಚೆಕ್ ಬಂದಿ ಮಾಡಿ ಜಮೀನು ಅಭಿವೃದ್ದಿಪಡಿಸಿ ನಿವೇಶನ ಹಂಚಿಕೆ ಮಾಡಬೇಕು” ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆ ಅಧ್ಯಕ್ಷ ಜನಾರ್ಧನ ಹಳ್ಳಿಬೆಂಚಿ, ಸಂಘಟನಾ ಕಾರ್ಯದರ್ಶಿ ಬಸವರಾಜ ಹೊಸೂರು, ನೂರ್‌ಜಾನ್, ಜಿ ರಾಜು, ವೆಂಕಟೇಶ ಭಂಡಾರಿ, ವಿರೇಶ, ಜಂಬಣ್ಣ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನವಜಾತ ಶಿಶುವನ್ನು ರಸ್ತೆ ಬದಿ ಬಿಟ್ಟು ಹೋದ ಪೋಷಕರು!

ರಾಯಚೂರು ತಾಲೂಕಿನ ಕಲ್ಮಲಾ ಗ್ರಾಮದ ಕಲ್ಲೂರು ರಸ್ತೆಯ ಬಳಿಯಲ್ಲಿ ಇಂದು ಹೃದಯವಿದ್ರಾವಕ...

ರಾಯಚೂರು | ಗ್ರಾಮವನ್ನು ಪಟ್ಟಣ ಪಂಚಾಯತ್ ಮೇಲ್ದರ್ಜೆಗೆ ಏರಿಸಬಾರದು : ಗ್ರಾಮಸ್ಥರ ಪ್ರತಿಭಟನೆ

ಲಿಂಗಸೂಗೂರು ತಾಲ್ಲೂಕಿನ ಗುರುಗುಂಟ ಗ್ರಾಮವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆರಿಸಬಾರದು ಎಂದು ರಾಜ್ಯ...

ರಾಯಚೂರು | ಶೀಲಹಳ್ಳಿ ಸೇತುವೆ ಮುಳುಗಡೆ : ನಾಲ್ಕು ಗ್ರಾಮಕ್ಕೆ ಸಂಪರ್ಕ ಕಡಿತ

ಲಿಂಗಸುಗೂರು ತಾಲ್ಲೂಕಿನ ಶೀಲಹಳ್ಳಿ ಸೇತುವೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಮುಳುಗಿದ್ದು,...

ರಾಯಚೂರು | ನಿರಂತರ ಮಳೆ : ಸೂರ್ಯಕಾಂತಿ ಬೆಳೆಗೆ ಕೀಟ ಬಾಧೆ

ಜಿಲ್ಲೆಯಲ್ಲಿ ನಿರಂತರ ವಾರದಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆ ಸೂರ್ಯಕಾಂತಿ ಬೆಳೆಗಾರರ...

Download Eedina App Android / iOS

X