ರಾಯಚೂರು | ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ವೃತ್ತಿ ಶಿಕ್ಷಣ ಮೇಳ; ಸಿದ್ದಪ್ಪ ಪೂಜಾರಿ ಕರೆ

Date:

ವಿದ್ಯಾರ್ಥಿಗಳಿಗೆ ಶಿಕ್ಷಣದ ನಂತರದ ಸರಿಯಾದ ಮಾರ್ಗವನ್ನು ಆರಿಸಿಕೊಳ್ಳಲು ಮತ್ತು ಉದ್ಯೋಗಾಕಾಂಕ್ಷಿಗಳಿಗೆ ಸೂಕ್ತ ಉದ್ಯೋಗ ಹುಡುಕಲು ಸಹಾಯ ಮಾಡಲು ವೃತ್ತಿ ಶಿಕ್ಷಣ ಮತ್ತು ಪ್ರದರ್ಶನ ಮೇಳ ಆಯೋಜನೆ ಮಾಡಿದ್ದು, ಭವಿಷ್ಯ ರೂಪಿಸಿಕೊಳ್ಳಲು ಮಾಹಿತಿ ನೀಡಲಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಹಾಲ್ ಸಿದ್ದಪ್ಪ ಪೂಜಾರಿ ಹೇಳಿದರು.

- Advertisement -

ಅವರಿಂದು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಸಮಗ್ರ ಶಿಕ್ಷಣ-ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಜಿಲ್ಲಾ ವೃತ್ತಿಪರ ಮತ್ತು ವೃತ್ತಿ ಮಾರ್ಗದರ್ಶನ ಘಟಕ, ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ಕೆರಿಯರ್ ಮೇಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ವಿದ್ಯಾರ್ಥಿಗಳು 10ನೇ ಮತ್ತು ಪಿಯುಸಿ ನಂತರ ಮುಂದೇನು ಹಾಗೂ ವೃತ್ತಿಪರ ಕೋರ್ಸಗಳ ಆಯ್ಕೆಯಲ್ಲಿ ಗೊಂದಲ ಉಂಟಾಗುತ್ತದೆ, ಈ ಗೊಂದಲಗಳಿಗೆ ತೆರೆ ಎಳೆಯಲು ಸರ್ಕಾರ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಸೇಲ್ ಆರಂಭಿಸಿ ಮಾಹಿತಿ ನೀಡಲಿದೆ, ಈ ಮಾಹಿತಿಯನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು ಎಂದರು.

ವಿದ್ಯಾರ್ಥಿಗಳು ಹೆಚ್ಚಿನದಾಗಿ ಮೊಬೈಲ್ ಗೀಳಿಗರ ಹೋಗುತ್ತಿದ್ದು, ಸಕಾರಾತ್ಮಕ ಮಾಹಿತಿಯನ್ನು ಪಡೆಯಬೇಕು, ಫೆಸ್‌ಬುಕ್, ಇಸ್ಟ್ರಾಗ್ರಾಂಗಳಲ್ಲಿ ಶಿಕ್ಷಣ ಮತ್ತು ವೃತ್ತಿಪರ ಮಾಹಿತಿ ಇರುವುದಿಲ್ಲ, ಅದನ್ನು ನಿಷೇಧಿಸಿ ಯೂಟ್ಯೂಬ್‌ಗಳಲ್ಲಿ ಶಿಕ್ಷಣಕ್ಕೆ ಸಂಬಂಧಿಸಿದಂತೆ ಎಲ್ಲಾ ಮಾಹಿತಿ ದೊರೆಯುತ್ತದೆ ಎಂದು ತಿಳಿಸಿದರು.

ಕೃಷಿ, ಇಂಜಿನಿಯರಿಂಗ್ ಆರೋಗ್ಯ ಮತ್ತು ಇ-ಕಾಮರ್ಸ್ಗಳ ಬಗ್ಗೆ ಹೆಚ್ಚಿನದಾಗಿ ತಿಳಿದುಕೊಳ್ಳಿ, ಜೊತೆಗೆ ಮೇಳದಲ್ಲಿ ೨೬ ಮಳಿಗೆಗಳನ್ನು ಹಾಕಲಾಗಿದ್ದು ಎಲ್ಲಾ ಇಲಾಖೆಗಳು ಭಾಗವಹಿಸಿವೆ, ವಿದ್ಯಾರ್ಥಿಗಳು ಮಾಹಿತಿ ಪಡೆದುಕೊಳ್ಳಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ಡಿ.ಬಡಿಗೇರ್, ಮಾತನಾಡಿ, ವಿದ್ಯಾರ್ಥಿಗಳಲ್ಲಿರುವ ಕೌಶಲ್ಯಗಳನ್ನಾಧರಿಸಿ ಮುಂದಿನ ಭವಿಷ್ಯ ರೂಪಿಸಿಕೊಳ್ಳಲು ಮಾರ್ಗದರ್ಶನ ನೀಡಲಿದ್ದು, ಪೋಷಕರು, ಮತ್ತು ಶಿಕ್ಷಕರು ವಿದ್ಯಾರ್ಥಿಗಳಲ್ಲಿರುವ ಕೌಶಲ್ಯವನ್ನು ಗಮನಿಸಿ ಪ್ರೋತ್ಸಾಹ ನೀಡುವ ಕೆಲಸ ಮಾಡಬೇಕು ಎಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸೋಮಶೇಖರಪ್ಪ ಹೊಕ್ರಾಣಿ ಮಾತನಾಡಿ, ಗ್ರಾಮೀಣ ಭಾಗದಲ್ಲಿರುವ ವಿದ್ಯಾರ್ಥಿಗಳಿಗೆ ಮಾಹಿತಿ ಕೊರತೆ ಇದೆ, 10 ತರಗತಿ ಮತ್ತು ಪಿಯುಸಿ ನಂತರ ಮುಂದಿನ ಕೋರ್ಸ್ ಆಯ್ಕೆ ಮಾಡಿಕೊಳ್ಳಲು ಮಾಹಿತಿ ಇರುವುದಿಲ್ಲ, ಗೊಂದಲಗಳು ಉಂಟಾಗುತ್ತವೆ, ವಿದ್ಯಾರ್ಥಿಗಳು ಇಂತಹ ಮೇಳದಿಂದ ಮಾಹಿತಿ ಪಡೆದುಕೊಳ್ಳಬೇಕು. ವಿದ್ಯಾರ್ಥಿಗಳು ಕಂಪ್ಯೂಟರ್ ಜ್ಞಾನ ಪಡೆಯಬೇಕು, ತಂತ್ರಜ್ಞಾನದ ಮಾಹಿತಿಯ ಉಪಯುಕ್ತವಾಗಿದ್ದು, ಮುಂದಿನ ಭವಿಷ್ಯಕ್ಕೆ ಅನುಕೂಲವಾಗಲಿದೆ ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮೂರು ವರ್ಷಗಳಲ್ಲಿ 679 ಮಹಿಳೆ, ಬಾಲಕಿಯರ ನಾಪತ್ತೆ ಪ್ರಕರಣ

ಈ ಸಂದರ್ಭದಲ್ಲಿ ಡಯಟ್ ಪ್ರಾಚಾರ್ಯ ಚಂದ್ರಶೇಖರ ಭಂಡಾರಿ, ಡಯಟ್ ಉಪನ್ಯಾಸಕ ಮಲ್ಲಿಕಾರ್ಜುನ, ಶರಣಪ್ಪ ವಟಗಲ್, ನೋಡಲ್ ಅಧಿಕಾರಿ ಸುಖದೇವ್, ಶಿವಮಣಿ ಸೇರಿದಂತೆ ಅನೇಕರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ನೂರಾರು ವರ್ಷ ಕೃಷಿ ಮಾಡಿದ್ದೇವೆ; ಕಾಯ್ದೆಯಿಂದ ಒಕ್ಕಲೆಬ್ಬಿಸಬೇಡಿ: ಶಾಸಕಿ ನಯನ ಮೋಟಮ್ಮ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿರಂಗನ್ ವರದಿ...

ಚಿಕ್ಕಮಗಳೂರು | ಅರಣ್ಯ ಕಾಯ್ದೆ: ಭೂಮಿ, ವಸತಿ ಇಲ್ಲದೆ ಜನರ ಬದುಕು ಕಷ್ಟ; ಟಿ.ಡಿ ರಾಜೇಗೌಡ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಕಾಪು : ಕೊಬ್ಬರಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಸುಭಾಷ್ ನಗರದಲ್ಲಿರುವ ಕೊಬ್ಬರಿ ಸಂಸ್ಕರಣಾ ಘಟಕವೊಂದರಲ್ಲಿ...

ಉಡುಪಿ | ಕಾಪುವಿನಲ್ಲಿ ಪ್ರಜಾಸೇವಾ ಆಂದೋಲನ: 75 ಅಹವಾಲು ಸ್ವೀಕಾರ, ಅಧಿಕಾರಿಗಳಿಂದ ಪರಿಹಾರದ ಭರವಸೆ

ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡುವ ಉದ್ದೇಶದಿಂದ ಸಚಿವರು, ಜನಪ್ರತಿನಿಧಿಗಳು ಹಾಗೂ...