ರಾಯಚೂರು | ಸಂಪುಟದಿಂದ ಸಚಿವ ಶಿವಾನಂದ ಪಾಟೀಲ್‌ ಕೈಬಿಡಲು ರೈತ ಸಂಘ ಒತ್ತಾಯ

Date:

ರೈತರು ʼಬರಗಾಲ ಬರಲೆಂದು ಕಾಯುತ್ತಾರೆʼ ಎಂದು ಕೀಳು ಮಟ್ಟದ ಹೇಳಿಕೆ ನೀಡಿದ ಸಚಿವ ಶಿವಾನಂದ ಪಾಟೀಲ್‌ ಅವರನ್ನು ಸಂಪುಟದಿಂದ ಕೈಬಿಡುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ ಆಗ್ರಹಿಸಿದರು.

ರಾಯಚೂರು ನಗರದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿ, “ರೈತ ಕುಟುಂಬದಿಂದ ಬಂದಿರುವುದಾಗಿ ಹೇಳುತ್ತಲೇ ಎರಡನೇ ಬಾರಿಗೆ ಸಚಿವರಾದ ಶಿವಾನಂದ ಪಾಟೀಲ್ ರೈತರನ್ನು ಪದೇ ಪದೇ ಅವಮಾನಿಸುತ್ತಿದ್ದಾರೆ. ಈ ಹಿಂದೆ ಸಚಿವ ಶಿವಾನಂದ ಪಾಟೀಲ್‌ ರೈತರು 5 ಲಕ್ಷ ಪರಿಹಾರಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ರೈತ ಸಮುದಾಯಕ್ಕೆ ಅವಮಾನಿಸಿದ್ದರು. ಈಗ ಪರಿಹಾರಕ್ಕಾಗಿ ಬರಗಾಲ ಬರಲಿ ಎಂದು ರೈತರ ನಿರೀಕ್ಷಿಸುತ್ತಿದ್ದಾರೆ ಎಂದು ಹೇಳಿರುವುದು ಖಂಡನೀಯ. ಇಂತಹ ಬೇಜವಾಬ್ದಾರಿಯಾಗಿ ಹೇಳಿಕೆ ನೀಡುವ ಶಾಸಕ, ಸಚಿವರುಗಳಿಗೆ ತರಬೇತಿಯನ್ನಾದರೂ ನೀಡಿ ಬುದ್ದಿ ಕಲಿಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ದುರುದ್ದೇಶದಿಂದ ರೈತರ ವಿರುದ್ದ ಮಾತನಾಡಿದ ಸಚಿವ ಶಿವಾನಂದ ಪಾಟೀಲ್ ಸಚಿವರಾಗಿ ಮುಂದುವರೆಯಲು ಅನರ್ಹರಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಚಿವರ ಹೇಳಿಕೆಯನ್ನು ಸಮರ್ಥಿಸುವುದು ಬಿಟ್ಟು ಕೂಡಲೇ ಅವರನ್ನು ತಮ್ಮ ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಇಲ್ಲವಾದಲ್ಲಿ ರಾಜ್ಯದಾದ್ಯಂತ ಹೋರಾಟ ರೂಪಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನಾರಾಯಣಪುರು ಬಲದಂಡೆ ಮತ್ತು ಎಡದಂಡೆ ಕಾಲುವೆ ವ್ಯಾಪ್ತಿಯಲ್ಲಿ ಬೆಳೆದು ನಿಂತಿರುವ ಮೆಣಸಿನಕಾಯಿ ಬೆಳೆ ರಕ್ಷಣೆಗೆ ಸಮಪರ್ಕಕ ನೀರು ಹರಿಸಬೇಕು. ಕೃಷ್ಣ ಅಚ್ಚುಕಟ್ಟು ಪ್ರಾಧಿಕಾರದವರು ಬರೀ ಹತ್ತು ನಿಮಿಷ ಸಭೆ ನಡೆಸಿ ರೈತರೊಂದಿಗೆ ಚರ್ಚಿಸದೇ ನೀರು ಹರಿಸುವುದನ್ನು ನಿರ್ಧರಿಸಲಾಗಿದೆ. ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಮೆಣಸಿನಕಾಯಿ ಬೆಳೆಗೆ ನೀರು ಹರಿಸದೇ ಹೋದಲ್ಲಿ 400 ಕೋಟಿ ರೂ. ಅಧಿಕ ಮೌಲ್ಯದ ಫಸಲು ಹಾನಿಯಾಗುತ್ತದೆ. ನಾರಾಯಣಪುರ ಜಲಾಶಯದಲ್ಲಿ 51 ಟಿಎಂಸಿ ನೀರು ಸಂಗ್ರಹವಿದೆ. ಆದರೆ ಕೆಬಿಜೆಎನ್‌ಎಲ್ ಅಧಿಕಾರಿಗಳು ಅವೈಜ್ಞಾನಿಕವಾಗಿ ನೀರಿನ ಲೆಕ್ಕ ಹಾಕಿ 13 ಟಿಎಂಸಿ ನೀರು ಆವಿಯಾಗುವದಾಗಿ ಅಂದಾಜಿಸಲಾಗಿದೆ. ಇಷ್ಟೊಂದು ಪ್ರಮಾಣದಲ್ಲಿ ನೀರು ಆವಿಯಾಗುವದಿಲ್ಲ. ಹೂ ಬಿಡುವ ಹಂತದಲ್ಲಿರುವ ಮೆಣಸಿನಕಾಯಿ ಬೆಳೆಗೆ ಅಗತ್ಯವಿರುವ ನೀರು ಹರಿಸಲು ನಿರ್ಧರಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬಿಎಸ್‌ಎಸ್‌ಕೆ ಆಡಳಿತ ಮಂಡಳಿ ವಜಾಕ್ಕೆ ಆಗ್ರಹ

ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ್ ಇಂಗಳದಾಳ, ಬೂದಯ್ಯ ಸ್ವಾಮಿ, ದೇವರಾಜ ನಾಯಕ, ಗೋವಿಂನಾಯಕ, ಭೀಮರೆಡ್ಡಿ, ಗೋಕುಲಸಾಬ್, ಬಸವರಾಜ ಇದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಪೆನ್‌ಡ್ರೈವ್ ಪ್ರಕರಣ | ಸಂಬಂಧಪಟ್ಟವರ ಬಂಧನಕ್ಕೆ ಆಗ್ರಹಿಸಿ ಏ.29ರಂದು ಪ್ರತಿಭಟನೆ

ನೂರಾರು ಅಶ್ಲೀಲ ವಿಡಿಯೋಗಳು, ಚಿತ್ರಗಳು ಇರುವ ಹಾಸನದ ಪೆನ್ ಡ್ರೈವ್ ಲೈಂಗಿಕ...