ರಾಯಚೂರು | ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನ ಕಡಿತ; ಟಿಯುಸಿಐ ಖಂಡನೆ

Date:

ಕಲಿಕಾ ಭಾಗ್ಯ ಯೋಜನೆಯಡಿಯಲ್ಲಿ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ನೀಡುತ್ತಿದ್ದ ಶೈಕ್ಷಣಿಕ ಸಹಾಯಧನವನ್ನು ಕಡಿತ ಮಾಡಿರುವುದು ಕಾರ್ಮಿಕ ವಿರೋಧಿ ನೀತಿಯಾಗಿದೆ. ಕಡಿತದ ನಿರ್ಧಾರವನ್ನು ಹಿಂಪಡೆದು, ಸಹಾಯಧನವನ್ನು ಮತ್ತಷ್ಟು ಹೆಚ್ಚಿಸಬೇಕು ಎಂದು ಟಿಯುಸಿಐ ಒತ್ತಾಯಿಸಿದೆ.

- Advertisement -

ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ ಟಿಯುಸಿಐ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನವವನ್ನು ಅಯಾ ತರಗತಿಗಳಿಗೆ ಅನುಗುಣವಾಗಿ 5,000 ರೂ.ನಿಂದ  60 ಸಾವಿರದವರೆಗೆ ನೀಡಲಾಗುತ್ತಿತ್ತು. ಪಿಹೆಚ್ ಡಿ, ಎಂಫಿಲ್‌ಗೂ ಕೂಡ ಸಹಾಯಧನ ದೊರೆಯುತ್ತಿತ್ತು. ಆದರೆ, ಕಾರ್ಮಿಕ ಇಲಾಖೆಯು ಅಕ್ಟೋಬರ್ 30ರಂದು ಹೊಸ ಆದೇಶ ಹೊರಡಿಸಿದ್ದು, ಆದೇಶದಂತೆ 1,100 ರೂ.ನಿಂದ 11 ಸಾವಿರ ರೂ.ಗೆ ಕಡಿತ ಮಾಡಲಾಗಿದೆ. ಇದು ಕಾರ್ಮಿಕ ವಿರೋಧಿ ನಡೆಯಲಾಗಿದೆ. ಮಕ್ಕಳ ಶಿಕ್ಷಣದ ಮೇಲೆ ಪರಿಣಾಮ ಬೀರುತ್ತದೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

“ಕಟ್ಟಡ, ಕಾರ್ಮಿಕ ಇಲಾಖೆಗೆ ಸಂಗ್ರಹವಾಗುವ ಸೆಸ್ ಹಣ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ. ಪ್ರಸ್ತುತ ಮೂಲಗಳ ಪ್ರಕಾರ 10,263 ಕೋಟಿ ರೂ.ಗೂ ಹೆಚ್ಚು ಮೊತ್ತ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿಯಲ್ಲಿದೆ. ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಇದರಿಂದ ಅನೇಕ ಸೌಲಭ್ಯ ನೀಡುತ್ತಿದ್ದು, ಪ್ರತಿ ವರ್ಷ 6,700 ಕೋಟಿ ರೂ.ಗೂ ಹೆಚ್ಚು ಮೊತ್ತ ಉಳಿಯಲಿದೆ. ಇಷ್ಟಾದರೂ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನದ ಮೊತ್ತ ಕಡಿಮೆ ಮಾಡಿರುವುದು ಖಂಡನೀಯ” ಎಂದು ಕಿಡಿಕಾರಿದ್ದಾರೆ.

“ಸಾಮಾಜಿಕ ನ್ಯಾಯ ಕಲ್ಪಿಸಲು ಕಾಂಗ್ರೆಸ್ ಸರ್ಕಾರ ಬದ್ಧ ಎಂದು ತಮ್ಮ ಭಾಷಣಗಳಲ್ಲಿ ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನ ಕಡಿತಗೊಳಿಸಿರುವುದು ಕಳವಳಕಾರಿ ಸಂಗತಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಘಟನೆಯ ಹಕ್ಕೊತ್ತಾಯಗಳು

1) ಕಲಿಕಾ ಭಾಗ್ಯ ಯೋಜನೆಯಡಿ ಸಹಾಯಧನ ಕಡಿತಗೊಳಿಸುವ ಆದೇಶ ಹಿಂಪಡೆದು ಈ ಹಿಂದಿ ನಂತೆಯೇ ಹಣ ನೀಡಬೇಕು.
2) ಹಿಂದೆ ನೀಡುತ್ತಿದ್ದಂತೆ 1ರಿಂದ 4ನೇ ತರಗತಿಗೆ 5,000 ರೂ. ಹಾಗೂ 5ರಿಂದ 8ನೇ ತರಗತಿಗೆ 8,000 ರೂ. ನೀಡಬೇಕು.
3) ಪ್ರಥಮ ಹಾಗೂ ದ್ವಿತೀಯ ಪಿಯುಸಿಗೆ 15,000 ರೂ ನೀಡಬೇಕು. ಪದವಿಗೆ 25,000 ರೂ., ಬಿ.ಟೆಕ್‌ಗೆ 50,000 ರೂ., ನರ್ಸಿಂಗ್ ಪ್ಯಾರಾ ಮೆಡಿಕಲ್‌ಗೆ 40,000 ರೂ., ಬಿ.ಎಡ್‌ಗೆ 35,000 ರೂ., ಎಲ್‌ಎಲ್‌ಬಿಗೆ 30,000 ರೂ., ಪಿಎಚ್‌ಡಿಗೆ 25,000 ರೂ. ನೀಡಬೇಕು.
4) ಕಟ್ಟಡ ಕಾರ್ಮಿಕರಲ್ಲದವರು ಕಾರ್ಮಿಕರ ಗುರುತಿನ ಚೀಟಿ ಪಡೆದಿದ್ದನ್ನು ಪತ್ತೆ ಹಚ್ಚಿ ನಕಲಿ ಕಾರ್ಡು ಪಡೆದವರ ಮೇಲೆ ಕ್ರಮ ಕೈಗೊಳ್ಳಬೇಕು.
5) ಕಟ್ಟಡ ಕಾರ್ಮಿಕರು ನೋಂದಣಿ ಮಾಡುವಾಗ ವೇತನ ಚೀಟಿ, ಹಾಜರಾತಿ ಪಟ್ಟಿ ಕಡ್ಡಾಯವಾಗಿ ಸಲ್ಲಿಸಬೇಕು ಎಂಬ ನಿಯಮ ರದ್ದುಪಡಿಸಬೇಕು.

ಪ್ರತಿಭಟನೆಯಲ್ಲಿ ಜಿ. ಅಮರೇಶ್, ಆರ್ ಹುಚ್ ರೆಡ್ಡಿ , ಅಜೀಜ್ ಜಾಗೀರ್ದಾರ್, ಸೈಯದ್ ಅಬ್ಬಾಸ್ ಅಲಿ, ನಿರಂಜನ್, ಶಿವಯ್ಯ ,ಲಕ್ಷ್ಮಣ, ಆನಂದ, ನಬೀಸಾಬ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...

ಕೋಲಾರ | ಹಾಲು ಉತ್ಪಾದಕರಿಗೆ ಕೋಮುಲ್, ಕೆಎಂಎಫ್ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಚಂಚಿಮಲೆ ರಮೇಶ್

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10ನೇ ವಾರ್ಡ್‌ನ ಹಾರ್ಜೇನಹಳ್ಳಿ...