ಸಿಂಧನೂರು | ಅಂಬೇಡ್ಕರ್ ವಸತಿ ನಿಲಯದಲ್ಲಿ ಆಹಾರ ಸೇವಿಸಿದ 13 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Date:

ಸಿಂಧನೂರು ಪಟ್ಟಣದ ಅಂಬೇಡ್ಕರ್ ವಸತಿ ನಿಲಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ ವಸತಿ ನಿಲಯದ 13 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ನಡೆದಿದೆ.

- Advertisement -

ಮಂಗಳವಾರ ಬೆಳಗ್ಗೆ ವಸತಿ ನಿಲಯದಲ್ಲಿ ಚಪಾತಿ, ಅನ್ನ ಸಾಂಬಾರು ಆಹಾರ ಸೇವಿಸಿದ ವಿದ್ಯಾರ್ಥಿನಿಯರಿಗೆ ಹೊಟ್ಟೆ ನೋವು, ತಲೆ ಸುತ್ತ ಕಾಣಿಸಿಕೊಂಡಿದೆ. ನಂತರ ವಿದ್ಯಾರ್ಥಿನಿಯರನ್ನು ನಗರದ ತಾಯಿ ಮಕ್ಕಳ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರೆದಿದೆ. ವಸತಿ ನಿಲಯದ ವಾರ್ಡನ್ ಶೋಭಾ ಎನ್ನುವವರು ರಜೆಯಲ್ಲಿದ್ದು, ತಾಲ್ಲೂಕು ಅಧಿಕಾರಿ ನಟರಾಜ್ ಅವರು ಪ್ರಭಾರಿವಹಿಸಲಾಗಿದೆ. ಅಧಿಕಾರಿಗಳ ಲೋಪದಿಂದ ಈ ರೀತಿಯ ಘಟನೆ ನಡೆದಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಕಳೆದ ವಾರ ಅಲ್ಪಸಂಖ್ಯಾತ ವಸತಿ ನಿಲಯದ ವಿದ್ಯಾರ್ಥಿಗಳು ಉಪಹಾರ ಸೇವಿಸಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಖುದ್ದು ಶಾಸಕ ಹಂಪನಗೌಡ ಬಾದರ್ಲಿ ಅವರೇ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ನಂತರ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ ನಿರ್ಮಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಇದೀಗ ನಗರದ ವಿದ್ಯಾರ್ಥಿನಿಯರ ವಸತಿ‌ ನಿಲಯದಲ್ಲಿ ಮತ್ತೊಂದು ಘಟನೆ ನಡೆದಿದ್ದು, ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು ರಾಜಕೀಯದಲ್ಲಿ ಮತ್ತೆ ಹಿನ್ನಡೆ: ಸಚಿವ ಸ್ಥಾನಕ್ಕೆ ಚೊಂಬು, ಜಿಲ್ಲೆಯ ನಿರೀಕ್ಷೆ ಭಗ್ನ

ವಸತಿ ನಿಲಯದ 5 ವಿದ್ಯಾರ್ಥಿಗಳಿಗೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಎಲ್ಲ ವಿದ್ಯಾರ್ಥಿನಿಯರು ಆರೋಗ್ಯವಾಗಿದ್ದಾರೆ ಎಂದು ಸಹಾಯಕ ಉಪನಿರ್ದೇಶಕ ನಟರಾಜ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ...

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...