ಸಿಂಧನೂರು ನಗರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗುರುವಾರ ಬೆಳಗಿನ ಉಪಹಾರ ಸೇವಿಸಿ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಹಿನ್ನಲೆಯಲ್ಲಿ ವಾರ್ಡನ್ ಅಮರಗುಂಡಪ್ಪ ಅವರನ್ನು ಅಮಾನತ್ತುಗೊಳಿಸಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರವೀಣಕುಮಾರ ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ನಗರದ ವಳಬಳ್ಳಾರಿ ರಸ್ತೆಯ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಮಕ್ಕಳು ಬೆಳಗಿನ ಉಪಹಾರ ಸೇವಿಸಿದ ನಂತರ ಏಕಾಏಕಿ ವಾಂತಿ ಬೇಧಿಯಾಗಿ ಮಕ್ಕಳ ಅಸ್ವಸ್ಥರಾಗಿದ್ದರು. ಘಟನೆಗೆ ಸಂಬಂಧಿಸಿದಂತೆ ಶುಕ್ರವಾರ ಶಾಸಕ ಹಂಪನಗೌಡ ಬಾದರ್ಲಿ ಹಾಗೂ ಹಿರಿಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ನಾರಾಯಣಪುರ ಡ್ಯಾಮ್ ನಿಂದ ಭಾರೀ ಪ್ರಮಾಣದ ನೀರು ಬಿಡುಗಡೆ: ಕಾಡ್ಲೂರಿನ ದೇವಸ್ಥಾನ ಜಲಾವೃತ
ಕರ್ತವ್ಯ ಲೋಪದ ಹಿನ್ನಲೆಯಲ್ಲಿ ವಾರ್ಡನ್ರನ್ನು ಅಮಾನತ್ತುಗೊಳಿಸಲಾಗಿದೆ. ಅಡುಗೆದಾರರನ್ನು ಕೂಡ ಬದಲಿಸುವಂತೆ ಉಪನಿರ್ದೇಶಕರು ನೇಮಕಾತಿ ಏಜೆನ್ಸಿಗೆ ಪತ್ರ ಬರೆದಿದ್ದಾರೆ. ಅಲ್ಲದೇ ವಸತಿ ವಾಚ್ಮೆನ್ರನ್ನು ಕೂಡ ಸೇವೆಯಿಂದ ತೆಗೆದು ಹಾಕಲಾಗಿದೆ.




