ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಅವಾಂತರ; ಒಂದೇ ದಿನ ಮೂರು ಜೀವ ಬಲಿ

Date:

Advertisements

ರಾಜ್ಯದ ವಿವಿಧ ಭಾಗಗಳಲ್ಲಿ ಭಾನುವಾರ ಸಂಜೆ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಕಲಬುರಗಿ, ಯಾದಗಿರಿ ಜಿಲ್ಲೆಯ ಪ್ರತ್ಯೇಕ ಕಡೆಗಳಲ್ಲಿ ಮಳೆಯ ಅವಾಂತರಕ್ಕೆ ಮೂರು ಜೀವ ಬಲಿಯಾದ ಘಟನೆ ನಡೆದಿದೆ.

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ಸಿಡಿಲು ಬಡಿದು  ಇಬ್ಬರು ಮೃತಪಟ್ಟಿದ್ದಾರೆ.

ವಾಡಿ ಪಟ್ಟಣದ ರೈಲ್ವೆ ಕಾಲೋನಿಯ ಏಕನಾಥ್ ವಾಘಮೂಡೆ (55), ಸತೀಶ್ ಶಳಕೆ (40) ಮೃತರು. ಗುಡುಗು ಸಹಿತ ಮಳೆ ಆರಂಭವಾದ ವೇಳೆ ರಕ್ಷಣೆಗಾಗಿ ಮರದಡಿ ನಿಂತಿದ್ದಾಗ ಸಿಡಿಲು ಬಡಿದು ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

Advertisements

ಮೊಬೈಲ್ ಟವರ್ ರಾಡ್ ಕಳಚಿ ಬಿದ್ದು ವಿದ್ಯಾರ್ಥಿನಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ನಡೆದಿದೆ. ಸುಮಾ ಗಾಯಗೊಂಡ ಯುವತಿ. ಈಕೆಯನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಳೆ ಅವಾಂತರಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ: 

ಯಾದಗಿರಿ ಜಿಲ್ಲೆಯ ಗುರುಮಠಕಲ್‌ ತಾಲೂಕಿನಾದ್ಯಂತ ಭಾನುವಾರ ಸಂಜೆ ಗಾಳಿ, ಗುಡುಗು, ಸಿಡಿಲು ಸಹಿತ ಸುರಿದ ಭಾರಿ ಮಳೆಯಿಂದಾಗಿ ನಾಲ್ಕು ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ.

ಗುರುಮಠಕಲ್ ಪಟ್ಟಣದ ಉಪ್ಪಾರಗಡ್ಡಾ ಬಡಾವಣೆ ನಿವಾಸಿ ತಿಮ್ಮಪ್ಪಾ ಯಾದವ ಎಂಬುವರ ಪುತ್ರಿ ಮಾನಸಿ (4) ಗಾಳಿಯ ರಭಸಕ್ಕೆ ಮನೆಯ ತಗಡಿನ ಶೀಟ್‌ ಮೇಲೆಟ್ಟಿದ್ದ ಕಲ್ಲು ತಲೆ ಮೇಲೆ ಬಿದ್ದ ಪರಿಣಾಮ ಸ್ಥಳದಲ್ಲೇ ಸಾವನಪ್ಪಿದ್ದಾಳೆ.

ಈ ಸುದ್ದಿ ಓದಿದ್ದೀರಾ? ಮೋದಿ ಆತ್ಮಸ್ಥೈರ್ಯ ಕಳೆದುಕೊಂಡು ಭಾಷಣ ಮಾಡುವಾಗ ತೊದಲುತ್ತಿದ್ದಾರೆ: ಅಖಿಲೇಶ್ ಯಾದವ್

ಮೃತ ಬಾಲಕಿ ಮನೆಗೆ ತಹಸೀಲ್ದಾರ್‌ ಶ್ರೀನಿವಾಸ ಚಾಪೆಲ್‌ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದು, ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X