ಯಾದಗಿರಿ | ಸತತ ಮಳೆಯಿಂದಾಗಿ ರೈತರ ಬೆಳೆ, ಮನೆಗಳಿಗೆ ಹಾನಿ: ಸೂಕ್ತ ಪರಿಹಾರ ನೀಡಲು ಒತ್ತಾಯ

Date:

Advertisements

ಯಾದಗಿರಿ ಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದ ಜಿಲ್ಲೆಯಲ್ಲಿ ಹಲವಾರು ಸಮಸ್ಯೆಗಳು ಸೃಷ್ಟಿಯಾಗಿದೆ. ಸತತ ಮಳೆಯಿಂದಾಗಿ ಬೆಳೆ ಹಾಗೂ ಮನೆಗಳಿಗೆ ಹಾನಿಯುಂಟಾಗಿದೆ.

ಯಾದಗಿರಿ ತಾಲೂಕಿನ ಪಗಲಾಪುರ ಗ್ರಾಮದ ಕಿರು ಸೇತುವೆ ಸಂಪೂರ್ಣ ‌ಮುಳುಗಡೆಯಾಗಿದೆ. ಯಾದಗಿರಿಯಿಂದ ರಾಯಚೂರಿಗೆ ಸಂಪರ್ಕ ಕಲ್ಪಿಸುವ ಮಾರ್ಗ ಇದಾಗಿದ್ದು, ಈಗ ಮುಳುಗಡೆಯಾಗಿರುವುದರಿಂದ ಸಾರ್ವಜನಿಕರಿಗೆ ಸಂಕಷ್ಟ ಎದುರಾಗಿದೆ.

ಅಷ್ಟೇ ಅಲ್ಲದೆ, ನಗರದ ಪ್ರಮುಖ ರಸ್ತೆಗಳಿಗೆ ಸಂಪರ್ಕ ಕಲ್ಪಿಸುವ ಕೊಯಿಲೂರ ಸೇತುವೆಯೂ ಮುಳುಗಡೆ ಆಗಿದೆ. ಸೇತುವೆ ನೀರು ಜಮೀನಿಗೆ ‌ನುಗ್ಗಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದ ಬೆಳೆ ನೀರು ಪಾಲಾಗಿದ್ದು, ರೈತರ ಬದುಕು ಕಂಗಾಲಾಗಿದೆ.

Advertisements

ದೋರಣಹಳ್ಳಿ, ಪಗಲಾಪುರ, ಸೇರಿ ಹಲವು ಗ್ರಾಮಕ್ಕೆ ‌ಮಳೆ ನೀರು ನುಗ್ಗಿವೆ. ಮಳೆ ನೀರು ನುಗ್ಗಿದ ಪರಿಣಾಮ ರಸ್ತೆ ಸಂಪರ್ಕ ಸ್ಥಗ್ಗಿತಗೊಂಡಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ವಾಹನ ಸವಾರರು ದಿಕ್ಕು ತೋಚದೆ ಸೇತುವೆ ಬದಿಯಲ್ಲಿ ನಿಂತು, ನೀರಿನ ಪ್ರಮಾಣ ಕಡಿಮೆಯಾದರೆ ಸಾಕು ಎಂದು ಗಂಟೆಗಟ್ಟಲೆ ಕಾದು ನಿಂತಿರುವ ದೃಶ್ಯ ಕಂಡು ಬಂತು.

ಜಿಲ್ಲಾಡಳಿತವು ಕೂಡಲೇ ರೈತರ ಬೆಳೆ ಹಾನಿಗೆ ಪರಿಹಾರ ಹಾಗೂ ಸಂತ್ರಸ್ತರಾದ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಸಾಮಾಜಿಕ ಹೋರಾಟಗಾರ ಉಮೇಶ್ ಮುದ್ನಾಳ್ ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಮನೆ ಮೇಲೆ ಗುಡ್ಡ ಕುಸಿದು ಅಪಾರ ಹಾನಿ: ಮನೆಮಂದಿ ಪ್ರಾಣಾಪಾಯದಿಂದ ಪಾರು

ಪಗಲಾಪುರ ಸೇತುವೆ ಕುಸಿದು ವಾರಗಳೇ ಕಳೆದಿವೆ. ಆದ್ರೂ ಅಧಿಕಾರಿಗಳು ದುರಸ್ತಿ ಮಾಡುವ ಕೆಲಸಕ್ಕೆ ‌ಮುಂದಾಗಿಲ್ಲ. ಅಧಿಕಾರಿಗಳು ಎಚ್ಚೆತ್ತು ಸೇತುವೆ ಮೇಲ್ದರ್ಜೆಗೆ ಏರಿಸಬೇಕು. ಇಲ್ಲದಿದ್ದರೆ ಯಾದಗಿರಿ ನಗರದ ಪ್ರಮುಖ ವೃತ್ತದಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X