ದಾವಣಗೆರೆ ಜಿಲ್ಲೆಯ ಹಲವೆಡೆ ಸುರಿದ ಮಳೆ; ಸ್ಥಳೀಯರಲ್ಲಿ ಮಂದಹಾಸ

Date:

Advertisements

ಕಳೆದ 8 ದಿನಗಳ ಹಿಂದಷ್ಟೇ ಧಿಡೀರನೆ ಸುರಿದು ಜನರಲ್ಲಿ ಉಲ್ಲಾಸ ಮೂಡಿಸಿದ್ದ ಮಳೆ ಗುರುವಾರ ಸಂಜೆ ದಾವಣಗೆರೆ ತಾಲೂಕಿನ ಹೆಬ್ಬಾಳ್‌ ಗ್ರಾಮ, ಹೆಬ್ಬಾಳ್ ಬಡಾವಣೆ, ಹುಣಸೇಕಟ್ಟೆ, ಮಂಡಲೂರು, ಹಾಲುವರ್ತಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾಧಾರಣ ಮಳೆಯಾಗುವ ಮೂಲಕ ಸ್ಥಳೀಯರಲ್ಲಿ ಖುಷಿ ತಂದಿದೆ.

ಹಾಲುವರ್ತಿ, ಮಂಡಲೂರು, ಹೆಬ್ಬಾಳ್, ಹುಣಸೇಕಟ್ಟೆ ಸುತ್ತಮುತ್ತ ಗುರುವಾರ ಸಂಜೆ ಸುರಿದ ಸಾಧಾರಣ ಮಳೆಯಿಂದಾಗಿ ಸುಮಾರು ಹೊತ್ತು ಭೂಮಿ ನೆನೆಯುವಂತಾಯಿತು.

ಧಿಡೀರ್ ಸುರಿದ ಮಳೆಯಿಂದಾಗಿ ಮನೆಗಳಲ್ಲಿ ಏಕಾಏಕಿ ಮಳೆ ನೀರು ಸೋರುತ್ತಿದ್ದುದರಿಂದ ಹೆಂಚುಗಳನ್ನು ಸರಿಪಡಿಸಲು ಮನೆಗಳ ಪುರುಷರು, ಮಕ್ಕಳು ಏಣಿ ಹಾಕಿಕೊಂಡು, ಹೆಂಚು ಸರಿಪಡಿಸಲು ಮುಂದಾಗಿದ್ದರು. ಸಂಜೆ ದಾವಣಗೆರೆ ನಗರದಲಿ ತಂಪು ಗಾಳಿ ಬೀಸಿ, ಮಳೆ ಮೋಡ ಆವರಿಸಿದ್ದರೂ ಮಳೆಯಾಗಿಲ್ಲ.

Advertisements

ಹವಾಮಾನ ಇಲಾಖೆ ಕೆಲ ದಿನಗಳ ಹಿಂದೆ ಏಪ್ರಿಲ್ 8ರಿಂದ ದಾವಣಗೆರೆ ಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಸೂಚನೆ ನೀಡಿದ್ದರೂ, ಯಾವುದೇ ಮುನ್ಸೂಚನೆ ಕಾಣದೆ ಬಿಸಿಲಿನ ಬೇಗೆಗೆ ಜನ, ರೈತರು ಕಂಗೆಟ್ಟಿದ್ದರು.‌

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಚುನಾವಣೆಯಲ್ಲಿ ಪಂಚಮಸಾಲಿ ಸಮಾಜ ತಟಸ್ಥವಾಗಿರಲು ಸ್ವಾಭಿಮಾನ ಯುವಪಡೆ ಕರೆ

ದಾವಣಗೆರೆ ನಗರದ ಹಲವೆಡೆ ಹಾಗೂ ಜಿಲ್ಲೆಯ ಕೊಡಗನೂರು ಸುತ್ತಮುತ್ತಲಿನ ಗ್ರಾಮಗಳಲ್ಲಿ ಶುಕ್ರವಾರ ಸಂಜೆಯೂ ತುಂತುರು ಮಳೆ ಸ್ಪರ್ಶವಾಗಿದ್ದು, ಜನ ಸಮಾಧಾನದ ನಿಟ್ಟುಸಿರು ಬಿಡುವಂತಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X