ಮಂತ್ರಾಕ್ಷತೆ ವಿಚಾರದಲ್ಲಿ ಪರಸ್ಪರ ಬಡಿದಾಡಿಕೊಂಡ ಸಂಘಪರಿವಾರ-ಪುತ್ತಿಲ ಪರಿವಾರ!

Date:

Advertisements

ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ಹಿನ್ನೆಲೆಯಲ್ಲಿ ರಾಮಮಂದಿರದ ಅಕ್ಷತೆ ವಿತರಣೆ ಮಾಡುತ್ತಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತನ ಮೇಲೆ ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡವರು ಎನ್ನಲಾದ ಬೆಂಬಲಿಗರು ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮುಂಡೂರು ಎಂಬಲ್ಲಿ ನಡೆದಿದೆ.

ಸಂತೋಷ್ ಎಂಬಾತ ಹಲ್ಲೆಗೊಳಗಾದ ಹಿಂದೂ ಸಂಘಟನೆಯ ಕಾರ್ಯಕರ್ತ ಎಂದು ಗುರುತಿಸಲಾಗಿದ್ದು, ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಂತೋಷ್ ಮುಂಡೂರು ಗ್ರಾಮದಲ್ಲಿ ರಾಮಮಂದಿರದ ಅಕ್ಷತೆ ಹಂಚುವ ಜವಾಬ್ದಾರಿ ಹೊತ್ತಿದ್ದರು. ಆದರೆ ಇದಕ್ಕೆ ಸ್ಥಳೀಯ ನಿವಾಸಿಗಳಾದ ಪುತ್ತಿಲ ಪರಿವಾರದ ಬೆಂಬಲಿಗರು ಎನ್ನಲಾದ ಧನಂಜಯ್ ಮತ್ತು ತಂಡ ವಿರೋಧ ವ್ಯಕ್ತಪಡಿಸಿದ್ದರು ಎಂದು ಆರೋಪಿಸಲಾಗಿದೆ.

Advertisements

ಈ ವೇಳೆ ಮಾತಿಗೆ ಮಾತು ಬೆಳೆದಿದ್ದು, ಅದೇ ದ್ವೇಷದಲ್ಲಿ ಸಂತೋಷ ಮೇಲೆ ಹಲ್ಲೆ ಮಾಡಿದ್ದಾರೆ. ಈ ವೇಳೆ ತಡೆಯಲು ಬಂದ ಸಂತೋಷ ತಾಯಿಯ ಮೇಲೂ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಹಲ್ಲೆಯಿಂದ ಗಾಯಗೊಂಡ ಸಂತೋಷ್ ಹಾಗೂ ಅವರ ತಾಯಿ ಪುತ್ತೂರಿನ ಆದರ್ಶ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

WhatsApp Image 2024 01 16 at 7.59.38 PM

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಬಳಿಕ ಮಾತನಾಡಿದ ಅವರು, ಇದೊಂದು ರಾಜಕೀಯ ಪ್ರೇರಿತ ಹಲ್ಲೆಯಾಗಿದ್ದು, ಹಲ್ಲೆ ನಡೆಸಿದವರನ್ನು ತಕ್ಷಣವೇ ಬಂಧಿಸುವಂತೆ ಸರಕಾರ ಮತ್ತು ಪೋಲಿಸ್ ಇಲಾಖೆಯನ್ನು ಒತ್ತಾಯಿಸಿದರು. ಘಟನೆ ಕುರಿತಂತೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X