ರಾಮನಗರ | ಮಕ್ಕಳಿಗೆ ಗೂಡ್ಸ್‌ ವಾಹನ ಢಿಕ್ಕಿ ಪ್ರಕರಣ; ರಸ್ತೆ ಮಧ್ಯೆ ಬಾಲಕಿ ಶವವಿಟ್ಟು ಪ್ರತಿಭಟನೆ

Date:

Advertisements

ರಾಮನಗರ ತಾಲೂಕಿನ ಗೊಲ್ಲರದೊಡ್ಡಿಯಲ್ಲಿ ಮಕ್ಕಳಿಗೆ ಗೂಡ್ಸ್ ವಾಹನ ಢಿಕ್ಕಿ ಹೊಡೆದ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಬಾಲಕಿ ಭಾನುವಾರ ರಾತ್ರಿ ಮೃತಪಟ್ಟಿದ್ದಾಳೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಸೋಮವಾರ ಬೆಳಿಗ್ಗೆ ಬಾಲಕಿ ಶವವನ್ನು ರಸ್ತೆ ಮಧ್ಯೆ ಇಟ್ಟು ಪ್ರತಿಭಟನೆ ನಡೆಸಿದರು.

ಗ್ರಾಮದ ರಾಜಣ್ಣ ಮತ್ತು ಶಾಂತಮ್ಮ ದಂಪತಿಯ ಎರಡನೇಯ ಪುತ್ರಿ, ಒಂದನೇ ತರಗತಿಯಲ್ಲಿ ಓದುತ್ತಿದ್ದ ಜ್ಞಾನವಿ (7) ಮೃತ ಬಾಲಕಿ. ಘಟನೆ ನಡೆದ ದಿನವೇ ಅವರ ಮೊದಲ ಪುತ್ರಿ ಶಾಲಿನಿ (9) ಕೊನೆಯುಸಿರೆಳೆದಿದ್ದಳು. ಇದರೊಂದಿಗೆ ಘಟನೆಯಲ್ಲಿ ಮೃತರಾಗಿರುವ ಮಕ್ಕಳ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಗದಗ | ಯುವಜನತೆಯ ಕ್ರಿಯಾಶೀಲತೆಗೆ ಬಹುಶಿಸ್ತೀಯ ಪ್ರದರ್ಶನ ಪೂರಕ: ಪ್ರೊ. ಎಸ್ ವಿ ಸಂಕನೂರು

Advertisements

ಬೆಳಿಗ್ಗೆಯೇ ರಸ್ತೆ ಮಧ್ಯೆ ಶವವಿಟ್ಟು ಜಮಾಯಿಸಿದ ಗ್ರಾಮಸ್ಥರು, ಟೈಯರ್‌ಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. “ನಾಲ್ವರು ಮಕ್ಕಳನ್ನು ಬಲಿ ಪಡೆದ ಗೂಡ್ಸ್ ವಾಹನದ ಚಾಲಕನಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಜನಪ್ರತಿನಿಧಿಗಳು ಸ್ಥಳಕ್ಕೆ ಬಂದು ಅಳಲು ಆಲಿಸಬೇಕು. ಮೃತ ಮಕ್ಕಳ ಕುಟುಂಬಕ್ಕೆ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X