ರಾಮನಗರ | ವಿಜಯೇಂದ್ರ ಆಯ್ಕೆ ಇಂದಿನ ಸ್ಥಿತಿಗೆ ಸರಿಯಾಗಿದೆ: ಎಸ್‌ ಟಿ ಸೋಮಶೇಖರ್

Date:

Advertisements

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅವರ ಆಯ್ಕೆ ಇಂದಿನ ಸ್ಥಿತಿಗೆ ನೂರಕ್ಕೆ ನೂರರಷ್ಟು ಸರಿಯಾಗಿದೆ ಎಂದು ಶಾಸಕ ಎಸ್ ಟಿ‌ ಸೋಮಶೇಖರ್ ಹೇಳಿದ್ದಾರೆ.

ರಾಮನಗರ ಜಿಲ್ಲೆಯ ಕುಂಬಳಗೋಡಿನಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿ, “ವಿಜಯೇಂದ್ರ ಅವರು ಹಿಂದೆ ಪಕ್ಷದ ಉಪಾಧ್ಯಕ್ಷರಾಗಿದ್ದರು. ಅವರಿಗೆ ಅನುಭವ ಇದೆ. ಎಲ್ಲ ಜಿಲ್ಲೆಗಳ ನಾಯಕರ ಪರಿಚಯವೂ ಅವರಿಗಿದೆ. ಹೀಗಾಗಿ, ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿ ಅವರ ಆಯ್ಕೆ ಒಳ್ಳೆಯ ಬೆಳವಣಿಗೆ” ಎಂದರು.

“ವಿಜಯೇಂದ್ರ ಅವರ ಆಯ್ಕೆ ಕುಟುಂಬ ರಾಜಕೀಯ ಅಲ್ಲ. ಅವರ ತಂದೆ ಬಿ ಎಸ್ ಯಡಿಯೂರಪ್ಪ ಅವರು ಚುನಾವಣೆಗೆ ಸ್ಪರ್ಧಿಸುವುದಿಲ್ಲವೆಂದ ಮೇಲೆ ಅವರ ಮಗನಿಗೆ ಅಧಿಕಾರ ನೀಡಿದ್ದಾರೆ. ವಿಜಯೇಂದ್ರ ಅವರು ಹಿಂದೆ ಪಕ್ಷದ ಉಪಾಧ್ಯಕ್ಷರಾಗಿದ್ದರು. ಈಗ ಶಾಸಕರಾಗಿದ್ದಾರೆ” ಎಂದು ತಿಳಿಸಿದರು.

Advertisements

“ನನ್ನನ್ನು ಯಾರು ಬೇಕಿದ್ದರೂ ಕಡೆಗಣಿಸಲಿ ಬಿಡಲಿ. ಆದರೆ, ಕ್ಷೇತ್ರದ ಜನ ನನ್ನನು ಕಡೆಗಣಿಸಿಲ್ಲ. ನಾನು ಬಿಜೆಪಿಯಿಂದ ದೂರ ಉಳಿಯುತ್ತಿಲ್ಲ. ನನ್ನ ಕ್ಷೇತ್ರದ ಕೆಲಸ ಮಾಡುತ್ತಿದ್ದೇನೆ” ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ.

“ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರನ್ನು ತಲುಪುತ್ತಿರುವ ಬಗ್ಗೆ ಕ್ಷೇತ್ರದ 40 ಮಹಿಳೆಯರ ಮೂಲಕ ಪರಿಶೀಲನೆ ನಡೆಸುತ್ತಿದ್ದೇನೆ. ಇದನ್ನು ಕೆಲವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ.‌ ಸರ್ಕಾರಿ ಯೋಜನೆಗಳು ಜನರಿಗೆ ತಲುಪಬೇಕು ಎಂಬುದಷ್ಟೇ ನನ್ನ ಉದ್ದೇಶ” ಎಂದರು.

“ಹಿಂದೆ ನಾನು ಮೈಸೂರು ಜಿಲ್ಲೆಯ ಉಸ್ತುವಾರಿ ಸಚಿವನಾಗಿದ್ದಾಗ, ಕೇವಲ ಮೂರು ಕ್ಷೇತ್ರದಲ್ಲಷ್ಟೇ ಬಿಜೆಪಿ ಇತ್ತು. ಹೀಗಿದ್ದರೂ, ಉಳಿದ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದೆ. ಅದೇ ರೀತಿ ಈಗಲೂ ನಡೆಯುತ್ತಿದೆ. ಬಿಜೆಪಿಯಲ್ಲಿ ನಾನು ಗೆದ್ದಿದ್ದೇನೆ. ಹಾಗಾಗಿ ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮ ಮಾಡಬಾರದಾ” ಎಂದು ಪ್ರಶ್ನಿಸಿದರು.

“ಎಸ್ ಎಂ ಕೃಷ್ಣ ಅವರು ಬಿಜೆಪಿ ಸೇರಿದ್ದರು. ಆದರೆ, ಅವರಿಗೆ ನೀಡಿದ್ದ ಅಶ್ವಾಸನೆಗಳನ್ನು ಬಿಜೆಪಿ ಈಡೇರಿಸಿಲ್ಲ. ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸಿದ ಹಾಗೂ ಹಿಂದೆ ಸಚಿವರಾಗಿದ್ದ ಶಂಕರ್, ಬಿ ಸಿ ನಾಗೇಶ್ ಸೇರಿದಂತೆ ಅನೇಕರಿಗೆ ಕೊಟ್ಟ ಭರವಸೆ ಈಡೇರಿಸಿಲ್ಲ. ಹಾಗಾಗಿ, ನನ್ನೊಂದಿಗೆ ಬಿಜೆಪಿ ಸೇರಿದವರ ಪರಿಸ್ಥಿತಿ ಕುರಿತು ಬಿಜೆಪಿಯವರು ಮೊದಲು ಜಾಮೂನು ನೀಡಿ ಬಳಿಕ ವಿಷ ನೀಡುತ್ತಾರೆಂಬ ಹೇಳಿಕೆ ನೀಡಿದ್ದೆ. ಈ ಹೇಳಿಕೆ ವೈಯಕ್ತಿಕವಾಗಿರಲಿಲ್ಲ. ನನಗೆ ಮಂತ್ರಿ ಸ್ಥಾನ ನೀಡಿದ್ದರು. ಏಳೆಂಟು ಜನರಿಗೆ ಸ್ಥಾನ ಸಿಕ್ಕಿರಲಿಲ್ಲ‌” ಎಂದರು.

ಈ ಸುದ್ದಿ ಓದಿದ್ದೀರಾ? ಗೌರಿಶಂಕರ್-ಮಂಜುನಾಥ್ ಸೇರ್ಪಡೆ | ಜೆಡಿಎಸ್ ಈಗ ಕೇವಲ ಕುಟುಂಬದ ಪಕ್ಷವಾಗಿದೆ: ಸಿಎಂ ಸಿದ್ದರಾಮಯ್ಯ

ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ತಮ್ಮ ಪುಸ್ತಕದಲ್ಲಿ ಸಮ್ಮಿಶ್ರ ಸರ್ಕಾರ ಉರುಳುವಾಗ ಕೆಲ ಶಾಸಕರು ಹಣ ಪಡೆದ ಬಗ್ಗೆ ಉಲ್ಲೆಖ ಮಾಡುವುದಾಗಿ ಹೇಳಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಸೋಮಶೇಖರ್, “ಬುಕ್ ಏಕೆ? ಧರ್ಮಸ್ಥಳ, ಚಾಮುಂಡಿ ಬೆಟ್ಟದಲ್ಲಿ ಕುಳಿತುಕೊಂಡು, ಅಲ್ಲೇ ಬುಕ್ ಬರೆದು ಓದಲಿ. ಅವರು ಚಾಮುಂಡಿ ಬೆಟ್ಟಕ್ಕೆ ಹೆಚ್ಚಾಗಿ ಹೋಗುತ್ತಾರಲ್ಲ. ಅಲ್ಲೆ ಕುಳಿತು ಬುಕ್ ಓದಲಿ. ಅವರಿಗೂ ಬಿಜೆಪಿಯಲ್ಲಿ ಮಂತ್ರಿ ಸ್ಥಾನ ಸಿಗಲಿಲ್ಲ ಅಲ್ಲವೇ” ಎಂದು ವ್ಯಂಗ್ಯವಾಡಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

Download Eedina App Android / iOS

X