ರಾಮನಗರ | ಏ.13, 14ಕ್ಕೆ ಮನೆ ಮನೆ ಮತದಾನ: ಸಹಾಯಕ ಚುನಾವಣಾಧಿಕಾರಿ

Date:

Advertisements

ಚುನಾವಣೆಯಲ್ಲಿ ವಿಕಲಚೇತನರು ಮತ್ತು 85 ವರ್ಷ ದಾಟಿದ ನಾಗರಿಕರಿಗೆ ಮನೆಯಲ್ಲಿ ಮತದಾನಕ್ಕೆ ಅವಕಾಶ ಮಾಡಿಕೊಟ್ಟಿದ್ದು, ತಾಲೂಕಿನ 352 ಮಂದಿ ನೋಂದಣಿ ಮಾಡಿಸಿದ್ದಾರೆ ಎಂದು ಸಹಾಯಕ ಚುನಾವಣಾಧಿಕಾರಿ ರಾಘವೇಂದ್ರ ತಿಳಿಸಿದರು.

ರಾಮನಗರ ಜಿಲ್ಲೆ ಕನಕಪುರ ತಾಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು.

“ವಿಕಲಚೇತನರು ಮತ್ತು ಹಿರಿಯ ನಾಗರಿಕರ ಮತವನ್ನು ಏಪ್ರಿಲ್‌ 13 ಮತ್ತು 14 ರಂದು ಚುನಾವಣಾ ತಂಡವು ಮನೆಗೆ ಭೇಟಿ ನೀಡಿ ಪಡೆಯಲಿದೆ. ತಾಲೂಕಿನಲ್ಲಿ ಒಟ್ಟು 10 ತಂಡಗಳನ್ನು ಮಾಡಿದ್ದು, ಬೆಳಿಗ್ಗೆ 7.30ಕ್ಕೆ ಮನೆಗೆ ಭೇಟಿ ನೀಡಿ ಕಾರ್ಯ ನಿರ್ವಹಿಸಲಿದ್ದಾರೆ” ಎಂದರು.

Advertisements

“ಮನೆಗೆ ಭೇಟಿ ನೀಡಿ ಮತದಾನ ಮಾಡಿಸುವ ತಂಡಕ್ಕೆ ತರಬೇತಿ ನೀಡಲಾಗಿದೆ. ಮನೆ ಮತದಾನವನ್ನು ವಿಡಿಯೋ ಮಾಡಲಾಗುವುದು. ಮತದಾನಕ್ಕೆ ಮನೆಗಳಿಗೆ ಬರುವ ತಂಡಕ್ಕೆ ಸಂಪೂರ್ಣ ಸಹಕಾರ ನೀಡಬೇಕು” ಎಂದು ಮನವಿ ಮಾಡಿದರು.

ಕನಕಪುರ ತಾಕಿನಲ್ಲಿ ಒಟ್ಟು 2,31,262 ಮಂದಿ ಮತದಾರರಿದ್ದಾರೆ. ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,72,896 ಮಂದಿ ಮತದಾರರಿದ್ದು, ಶೇ.85ರಷ್ಟು ಮತದಾನದ ಹಕ್ಕು ಪಡೆದಿದ್ದಾರೆ” ಎಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಮನಗರ | ನಾಮಪತ್ರ ವಾಪಸ್‌ ಪಡೆದ ಬಿಎಸ್‌ಪಿ ಅಭ್ಯರ್ಥಿ; ಪಕ್ಷದಿಂದ ಉಚ್ಛಾಟನೆ

“ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 297 ಮತಗಟ್ಟೆ ಕೇಂದ್ರಗಳನ್ನು ಮಾಡಿದ್ದು, ಅದರಲ್ಲಿ 61 ಮತಗಟ್ಟೆಗಳು ಸೂಕ್ಷ್ಮ ಮತಗಟ್ಟೆಗಳಾದರೆ ಕೋಡಿಹಳ್ಳಿ ಹೋಬಳಿಯ ಹಲಸೂರು ಮತ್ತು ಕಸಬಾ ಹೋಬಳಿಯ ನಾರಾಯಣಪುರ ಅತಿಸೂಕ್ಷ್ಮ ಮತಗಟ್ಟೆಗಳಾಗಿವೆ” ಎಂದರು.

ತಹಶೀಲ್ದಾರ್‌ ಡಾ ಸ್ಮಿತಾರಾಮ್‌ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X