ರಾಮನಗರ | ಪುನೀತ್ ಕೆರೆಹಳ್ಳಿ ಪರಾರಿಯಾಗಿದ್ದಾನೆ; ಪತ್ತೆಗಾಗಿ ತಂಡ ರಚಿಸಿದ್ದೇವೆ: ಎಸ್‌ಪಿ

Date:

Advertisements
  • ಇದ್ರೀಸ್‌ ಸಾವು ಪ್ರಕರಣದ ಪ್ರಮುಖ ಆರೋಪಿ ಪುನೀತ್‌ ಕೆರೆಹಳ್ಳಿಗಾಗಿ ಶೋಧ
  • ಸಾತನೂರು ಪೊಲೀಸ್ ಠಾಣೆಯಲ್ಲಿ ಮೂರು ಎಫ್‌ಐಆರ್‌ಗಳು ದಾಖಲು

ಇದ್ರೀಸ್ ಪಾಷ ಸಾವಿನ ಪ್ರಕರಣದ ಪ್ರಮುಖ ಆರೋಪಿ ಪುನೀತ್ ಕೆರೆಹಳ್ಳಿ ತಲೆ ಮರೆಸಿಕೊಂಡಿದ್ದಾನೆ. ಆತನನ್ನು ಪತ್ತೆ ಮಾಡಿ, ಬಂಧಿಸಲು ತಂಡಗಳನ್ನು ರಚಿಸಿದ್ದೇವೆ ಎಂದು ರಾಮನಗರ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಕಾರ್ತಿಕ್‌ ರೆಡ್ಡಿ ಹೇಳಿದ್ದಾರೆ.

ರಾಮನಗರ ಜಿಲ್ಲೆ ಸಾತಾನೂರು ಬಳಿ ಇದ್ರೀಸ್‌ ಪಾಷಾ ಹತ್ಯೆ ಕುರಿತು ಮಂಗಳವಾರ ಕಾರ್ತಿಕ್‌ ರೆಡ್ಡಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. “ಇದ್ರೀಸ್‌ ಪಾಷ ಸಾವಿಗೆ ನಿಖರ ಕಾರಣ ಏನೆಂಬುದು ಮರಣೋತ್ತರ ಪರೀಕ್ಷೆ, ಎಫ್‌ಎಸ್‌ಎಲ್ ವರದಿ ಬಂದ ಬಳಿಕವಷ್ಟೇ ಗೊತ್ತಾಗುತ್ತದೆ. ಪ್ರಕರಣದ ತನಿಖೆ ವಿಚಾರದಲ್ಲಿ ಪೊಲೀಸರಿಗೆ ಯಾವುದೇ ರಾಜಕೀಯ ಒತ್ತಡವಿಲ್ಲ” ಎಂದು ಹೇಳಿದ್ದಾರೆ.

“ಕನಕಪುರದ ವೈದ್ಯರ ತಂಡವು ಇದ್ರೀಸ್ ಅವರ ಮರಣೋತ್ತರ ಪರೀಕ್ಷೆ ನಡೆಸಿದೆ. ಎಫ್‌ಎಸ್‌ಎಲ್‌ ವರದಿಯನ್ನೂ ಪಡೆಯಲಾಗುತ್ತದೆ. ಸದ್ಯ ತನಿಖೆ ಪ್ರಗತಿಯಲ್ಲಿದ್ದು, ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತೇವೆ” ಎಂದು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ರಾಮನಗರ |ನಾನು ತಲೆಮರೆಸಿಕೊಂಡಿಲ್ಲ; ಫೇಸ್‌ಬುಕ್‌ನಲ್ಲಿ ವಿಡಿಯೋ ಹರಿಬಿಟ್ಟ ಪುನೀತ್‌ ಕೆರೆಹಳ್ಳಿ

“ಪ್ರಕರಣದ ಪ್ರಮುಖ ಆರೋಪಿ ಪುನೀತ್‌ ಕೆರೆಹಳ್ಳಿ ಹಾಗೂ ಸಹಚರರ ಬಂಧನಕ್ಕೆ ಈಗಾಗಲೇ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಆರೋಪಿಯು ಇನ್ನೂ ಪತ್ತೆಯಾಗಿಲ್ಲ. ಆತನಿಗಾಗಿ ಶೋಧಕಾರ್ಯ ನಡೆಸಿದ್ದೇವೆ” ಎಂದಿದ್ದಾರೆ.

“ಪ್ರಕರಣ ಸಂಬಂಧ ಸಾತನೂರು ಠಾಣೆಯಲ್ಲಿ ಮೂರು ಎಫ್‌ಐಆರ್‌ಗಳು ದಾಖಲಾಗಿವೆ. ಮೊದಲಿಗೆ ಅಕ್ರಮ ಗೋವು ಸಾಗಣೆಗೆ ಸಂಬಂಧಿಸಿದಂತೆ ಪುನೀತ್‌ ಕೆರೆಹಳ್ಳಿ ದೂರು ನೀಡಿದ್ದರು” ಎಂದು ತಿಳಿಸಿದ್ದಾರೆ.

“ಗೋವು ಸಂರಕ್ಷಣೆ ನೆಪದಲ್ಲಿ ನಮ್ಮ ಮೇಲೆ ದಾಳಿ ಮಾಡಿದ್ದಾರೆಂದು ಕ್ಯಾಂಟರ್‌ ಚಾಲಕ ಪ್ರತಿ ದೂರು ನೀಡಿದ್ದರು. ಮರು ದಿನ ಬೆಳಿಗ್ಗೆ 8ರ ಸುಮಾರಿಗೆ  ಘಟನೆ ನಡೆದ ಸ್ಥಳದ 100 ಮೀಟರ್‌ ದೂರದಲ್ಲಿ ಇದ್ರೀಸ್ ಅವರ ಶವ ಪತ್ತೆ ಆಗಿದ್ದು, ಅವರ ಸಹೋದರ ಯೂನುಸ್‌ ಪಾಷ ನೀಡಿದ ದೂರಿನ ಅನ್ವಯ ಮತ್ತೊಂದು ಎಫ್‌ಐಆರ್‌ ದಾಖಲಿಸಿದ್ದೇವೆ” ಎಂದು ಮಾಹಿತಿ ನೀಡಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X