ಚುನಾವಣೆ ಸಮಯದಲ್ಲಿ ಹಂಚಿದ್ದ ಕುಕ್ಕರ್ ಸ್ಫೋಟಗೊಂಡು ಬಾಲಕಿಯೊಬ್ಬಳು ಗಂಭೀರ ಗಾಯಗೊಂಡಿರುವ ಘಟನೆ ರಾಮನಗರ ತಾಲೂಕಿನ ಕೂನಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗಾಯಾಳು ಬಾಲಕಿ ಮಹಾಲಕ್ಷ್ಮಿ(17) ಶುಕ್ರವಾರ ಬೆಳಗ್ಗೆ ಅನ್ನ ಮಾಡಲೆಂದು ಕುಕ್ಕರ್ಗೆ ಅಕ್ಕಿ ಹಾಕಿದ್ದಾಳೆ. ಸ್ಟವ್ ಮೇಲೆ ಇಟ್ಟ ಸ್ವಲ್ಪ ಸಮಯದಲ್ಲೇ ಕುಕ್ಕರ್ ಸ್ಫೋಟಗೊಂಡಿದೆ. ಕುಕ್ಕರ್ ಸಿಡಿದ ಪರಿಣಾಮ ಬಾಲಕಿಯ ಮುಖದ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಗಾಯಾಳು ಬಾಲಕಿಯನ್ನು ರಾಮನಗರದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಕಲುಷಿತ ನೀರು ಕುಡಿದು 30 ಮಂದಿ ಅಸ್ವಸ್ಥ
“ವಿಧಾನಸಭೆ ಚುನಾವಣೆ ವೇಳೆ ಅಭ್ಯರ್ಥಿಯೊಬ್ಬರು ಮನೆ ಮನೆಗೆ ಕುಕ್ಕರ್ ಹಂಚಿದ್ದರು. ಚುನಾವಣೆಯಲ್ಲಿ ನೀಡಿದ್ದ ಕುಕ್ಕರ್ನಲ್ಲಿ ಅಡುಗೆ ಮಾಡಲು ಹೋಗಿ ಈ ಅವಘಡ ನಡೆದಿದೆ. ಕಳಪೆ ಕುಕ್ಕರ್ ನೀಡಿದ್ದರಿಂದ ಅನಾಹುತ ಸಂಭವಿಸಿದೆ” ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.