ರಾಮನಗರ | ಹಾರೋಹಳ್ಳಿ ಪಟ್ಟಣ ಪಂಚಾಯತಿ ಆದಾಯ ಕುಸಿತ; ಅಧಿಕಾರಿಗಳ ನಿರ್ಲಕ್ಷ್ಯ ಆರೋಪ

Date:

Advertisements

ಆದಾಯ ಸಂಗ್ರಹ ಮಾಡಿ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡಬೇಕಾದ ಅಧಿಕಾರಿಗಳು 20 ವರ್ಷದಿಂದ ಅಂಗಡಿಗಳ ಹರಾಜು ಮಾಡದೆ, ಅಸಡ್ಡೆ ತೋರಿದ್ದಾರೆಂದು ಹಾರೋಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನಿವಾಸಿಗಳು ಆರೋಪಿಸಿದ್ದಾರೆ.

“ರಾಮನಗರ ಜಿಲ್ಲೆ ಹಾರೋಹಳ್ಳಿ ಗ್ರಾಮ ಪಂಚಾಯಿತಿಯಿಂದ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿದೆ. ಸುಮಾರು 20 ವರ್ಷಗಳ ಹಿಂದೆ ನಿಗದಿ ಮಾಡಿದ ಬಾಡಿಗೆ ಪಡೆಯುತ್ತಿದೆ. ಈವರೆಗೂ ಹೊಸ ಹರಾಜು ಪ್ರಕ್ರಿಯೆ ಮಾಡಿಲ್ಲ. ಅಧಿಕಾರಿಗಳು ಕೇವಲ ಸಾಬೂಬು ಹೇಳಿಕೊಂಡು ಕಾಲ ಕಳೆಯುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

2003ರಲ್ಲಿ ಹಾರೋಹಳ್ಳಿ ಗ್ರಾಮ ಪಂಚಾಯಿತಿ ಆದ ಸಮಯದಲ್ಲಿ  ಹರಾಜು ಪ್ರಕ್ರಿಯೆ ನಡೆಸಿ ನಿಗದಿಪಡಿಸಿದ್ದ ₹700ರಿಂದ ₹800 ಬಾಡಿಗೆ ಹಣವನ್ನೇ ಇಂದಿಗೂ ತೆರಿಗೆಯಾಗಿ ವಸೂಲಿ ಮಾಡಲಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

Advertisements

“ಹಾರೋಹಳ್ಳಿ ಪಟ್ಟಣದಲ್ಲಿ 262 ವಾಣಿಜ್ಯ ಮಳಿಗೆಗಳಿದ್ದು, ಅದರಲ್ಲಿ 126 ಮಳಿಗೆಗಳು ಸುಸ್ಥಿಯಲ್ಲಿವೆ. ಅವುಗಳಿಗೆ ತಿಂಗಳಿಗೆ ₹12,000ದಿಂದ ₹15,000 ಹಣ ಬಾಡಿಗೆ ಪಡೆದುಕೊಳ್ಳಬೇಕಿತ್ತು. ಆದರೆ, ಹಿಂದೆ ನಿಗದಿಪಡಿಸಿದ ಬಾಡಿಗೆ ದರ ಪಡೆದುಕೊಂಡು ಪಟ್ಟಣ ಪಂಚಾಯತ್ ಬೊಕ್ಕಸಕ್ಕೆ ಇದರಿಂದ ಲಕ್ಷಾಂತರ ರೂಪಾಯಿ ನಷ್ಟವಾಗುತ್ತಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಹಾಗೂ ಎಸ್‌ಸಿ, ಎಸ್‌ಟಿ, ಕುಂದುಕೊರತೆ ಸಭೆಯಲ್ಲಿ ಸದಸ್ಯರು ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆ ಕುರಿತು ಸಭೆಯಲ್ಲಿ ಚರ್ಚೆ ಮಾಡಿ ಸೂಕ್ತ ಕ್ರಮ ವಹಿಸುವಂತೆ ಹಾರೋಹಳ್ಳಿ ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರೂ ಕವಡೆ ಕಾಸಿನ ಕಿಮ್ಮತ್ತು ನೀಡಿಲ್ಲ” ಎಂದು ಜಾಗೃತಿ ಸಮಿತಿ ಸದಸ್ಯರ ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹುಬ್ಬಳ್ಳಿ | ಕಿಮ್ಸ್‌ ನಿರ್ದೇಶಕ ಸ್ಥಾನಕ್ಕೆ ಪೈಪೋಟಿ

ಸುಮಾರು 20 ವರ್ಷಗಳಿಂದ ಅಂಗಡಿ ಮಳಿಗೆಗಳ ಹರಾಜು ಪ್ರಕ್ರಿಯೆ ಮಾಡದೆ ಅಧಿಕಾರಿಗಳು ಪ್ರಭಾವಿಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ಅನೈತಿಕವಾಗಿ ವಸೂಲಿ ಮಾಡುತ್ತಿದ್ದಾರೆ” ಎಂದು ಸಾರ್ವಜನಿಕರು ದೂರಿದ್ದಾರೆ.

ಜಿಲ್ಲಾಧಿಕಾರಿ ಕೂಡಲೇ ಗಮನಹರಿಸಿ ತೆರಿಗೆ ಸೋರಿಕೆ ತಡೆಗಟ್ಟಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X