ರಾಮನಗರ | ದಬ್ಬಾಳಿಕೆಗೆ ಒಳಗಾದ ಮಹಿಳೆಯರು ಸ್ವತಂತ್ರ ಬದುಕು ಕಟ್ಟಿಕೊಳ್ಳಲು ನೆರವು: ಜಿಲ್ಲಾಧಿಕಾರಿ ಯಂಶವತ್ ವಿ ಗುರುಕರ್

Date:

Advertisements

ದಬ್ಬಾಳಿಕೆಗೆ ಒಳಗಾದ ಮಹಿಳೆಯರಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ, ಕೌನ್ಸೆಲಿಂಗ್ ಹಾಗೂ ಕಾನೂನು ನೆರವು ನೀಡಬೇಕು ಎಂದು ರಾಮನಗರ ಜಿಲ್ಲಾಧಿಕಾರಿ ಯಂಶವತ್ ವಿ ಗುರುಕರ್ ಅವರು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ತಿಳಿಸಿದರು.

ಆಗಸ್ಟ್ 28ರ ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಹಾಗೂ ಜಿಲ್ಲಾ ಕೋಶ ಸಮಿತಿ ಸಭೆಯ ಮುಂದಾಳತ್ವ ವಹಿಸಿ ಮಾತನಾಡಿದರು.

“ಮಹಿಳೆಯರು ಸ್ವತಂತ್ರ ಬದುಕು ಕಟ್ಟಿಕೊಳ್ಳಲು ಆಳಿಕೆಯ ಹಮ್ಮುಗೆಗಳ ಜತೆಗೆ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಬೇಕಾದ ತರಬೇತಿ ಕೊಡಿಸಬೇಕು. ಊರುಗಳಲ್ಲಿ ಬಾಲ್ಯವಿವಾಹಗಳು ಗುಟ್ಟಾಗಿ ನಡೆಯುತ್ತವೆ. ಈ ಕುರಿತು ಅಧಿಕಾರಿಗಳ ಗಮನಕ್ಕೆ ಬರುವುದು ಬಹಳ ಸಲ ತಡವಾಗುತ್ತದೆ. ಆ ರೀತಿಯ ಸನ್ನಿವೇಶಗಳು ಎದುರಾಗುವ ಮೊದಲೇ ಎಚ್ಚರಿಕೆ ವಹಿಸಬೇಕು. ಶಾಲೆ-ಕಾಲೇಜುಗಳಿಗೆ ಹೆಚ್ಚು ದಿನ ಗೈರಾಗುವ ಹುಡುಗಿಯರ ಬಗ್ಗೆ ಪ್ರಾಂಶುಪಾಲರು ಗಮನಿಸುತ್ತಿರಬೇಕು. ಒಂದು ವೇಳೆ ಗೈರಾಗುವ ಹುಡುಗಿಯರ ತಂದೆತಾಯಂದಿರು ಮದುವೆ ಮಾಡುತ್ತಿರುವುದು ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಬೇಕು. ಯಾವುದೇ ಒತ್ತಡಗಳಿಗೆ ಅಧಿಕಾರಿಗಳು ಮಣಿಯದೆ ದೂರು ದಾಖಲಿಸಿಕೊಂಡು ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು” ಎಂದು ಎಚ್ಚರಿಕೆ ನೀಡಿದರು.

Advertisements

“ರಾಮನಗರ ಜಿಲ್ಲೆಯಲ್ಲಿರುವ 181 ಮಹಿಳಾ ಸಹಾಯವಾಣಿಗಳ ಮೂಲಕ ಏಪ್ರಿಲ್-2024ರಿಂದ ಜುಲೈ-2024ರವರೆಗೆ 08 ಕರೆಗಳು ಸ್ವೀಕೃತವಾಗಿದ್ದು, ಈ ಪ್ರಕರಣಗಳಿಗೆ ಪೊಲೀಸ್, ಕಾನೂನು ನೆರವು, ಆಪ್ತ ಸಮಲೋಚನೆ ಸೇವೆಯನ್ನು ಕೊಡಲಾಗಿದೆ” ಎಂದು ತಿಳಿಸಿದರು.

“ಸಮಾಜದಲ್ಲಿ ದಬ್ಬಾಳಿಕೆಗೆ ಒಳಗಾದ ಮಹಿಳೆಯರಿಗೆ ಆಳಿಕೆಯಿಂದ ಸಿಗುವ ಎಲ್ಲ ಹಮ್ಮುಗೆಗಳ ಬಗ್ಗೆ ತಿಳುವಳಿಕೆ ಕೊಡಬೇಕು. ಈಗಾಗಲೇ ಕೆಲಸ ಮಾಡುತ್ತಿರುವ ಸಂಘ ಸಂಸ್ಥೆಗಳ ಮುಖಾಂತರ ನೊಂದ ಮಹಿಳೆಯರಿಗೆ ಯೋಜನೆಗಳು ತಲುಪುವಂತೆ ನೋಡಿಕೊಳ್ಳಬೇಕು” ಎಂದರು.

“ಸಮಾಜದಲ್ಲಿ ನೊಂದ ಮಹಿಳೆಯರು ಸ್ವತಂತ್ರ ಬದುಕು ಕಟ್ಟಿಕೊಳ್ಳಲು ಆಳಿಕೆಯ ಏರ್ಪಾಟುಗಳನ್ನು ರೂಪಿಸಿದೆ. ಇವುಗಳಲ್ಲದೆ ಬೇರೆ ಬೇರೆ ಉದ್ದಿಮೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವಂತೆ ಮಾಡಬೇಕು. ಇಲಾಖೆಗಳು ಇದಕ್ಕೆ ಬೇಕಾದ ತರಬೇತಿಯನ್ನು ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ನಡೆಸಬೇಕು. ಅನೇಕರು ಸಂಘ ಸಂಸ್ಥೆಗಳು ನಡೆಸುವ ಗಂಧದಕಡ್ಡಿ, ಮೇಣದಬತ್ತಿ, ಹಪ್ಪಳ, ಸಂಡಿಗೆ ತಯಾರಿಕಾ ಘಟಕಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಪ್ರಾದೇಶಿಕವಾಗಿ ಹೆಚ್ಚು ಮಾನ್ಯತೆ ಸಿಗಬಹುದಾದ ಉದ್ದಿಮೆಗಳಲ್ಲಿ ತಮ್ಮನ್ನು ಹೆಚ್ಚಾಗಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕರ್ತವ್ಯ ಲೋಪ, ಸರ್ಕಾರದ ಹಣ ದುರುಪಯೋಗ : ವೈದ್ಯಾಧಿಕಾರಿ ಅಮಾನತು

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಪ್ರಸನ್ನ ಕುಮಾರ್, ಡಿವೈಎಸ್‌ಪಿ ದಿನಕರ್ ಶೆಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಭಿವೃದ್ಧಿ ನಿರೀಕ್ಷಕಿ ಗಾಯಿತ್ರಿ ದೇವಿ ಬಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಜಿನಿ, ಜಿಲ್ಲೆಯ 5 ತಾಲೂಕುಗಳ ಶಿಶು ಅಭಿವೃದ್ಧಿ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಮತ್ತು ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಉಡುಪಿ | ಬ್ರಹ್ಮಾವರ ಪೊಲೀಸ್ ಠಾಣೆಯ 500ಮೀ ವಾಪ್ತಿಯಲ್ಲಿ ಆ.22ರವರೆಗೆ ನಿಷೇಧಾಜ್ಞೆ: ಜಿಲ್ಲಾಧಿಕಾರಿ

ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025ಕ್ಕೆ ಸಂಬಂಧಿಸಿದಂತೆ ಸಕ್ರಿಯ ಹಿಂದೂ...

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

Download Eedina App Android / iOS

X