ರಾಮನಗರ | ಇದ್ರೀಸ್‌ ಪಾಷಾ ಸಾವು ಪ್ರಕರಣ; ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ಪೊಲೀಸರು

Date:

ಗೋವು ಸಾಗಾಣಿಕೆ ವೇಳೆ ಇದ್ರೀಷ್ ಪಾಷ ಅನುಮಾನಸ್ಪದವಾಗಿ ಸಾವನ್ನಪ್ಪಿದ ಪ್ರಕರಣ ಸಂಬಂಧ ರಾಜಸ್ಥಾನದಲ್ಲಿ ಬಂಧಿಸಲಾಗಿದ್ದ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರು ಆರೋಪಿಗಳನ್ನು ಸಾತನೂರು ಪೊಲೀಸರು ಕನಕಪುರಕ್ಕೆ ಕರೆತಂದಿದ್ದು, ಏಪ್ರಿಲ್‌ 9ರಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.

ರಾಷ್ಟ್ರೀಯ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ, ಸುರೇಶ್ ಕುಮಾರ್, ಗೋಪಿ, ಪವನ್ ಕುಮಾರ್, ಪಿಲ್ಲಿಂಗ್ ಅಂಬಿಗಾರ್‌ ಬಂಧಿತ ಆರೋಪಿಗಳು.

ಎಫ್ಐಆರ್ ದಾಖಲಾದ ಐವರು ಆರೋಪಿಗಳನ್ನು ಕನಕಪುರದ ಜೆಎಂಎಫ್‌ಸಿ ನ್ಯಾಯಾಧೀಶರ ಮನೆಯಲ್ಲಿ ವಿಚಾರಣೆ ನಡೆಸಿದ್ದು, ಶಿವಮೊಗ್ಗದ ಇಬ್ಬರು ವಕೀಲರು ಪುನೀತ್ ಕೆರೆಹಳ್ಳಿ ತಂಡದ ಪರವಾಗಿ ವಕಾಲತ್ತು ವಹಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬೆಂಗಳೂರು ಮೂಲದ ನಿಶಾಂತ್ ಕುಶಾಲಪ್ಪ, ಉಮಾಶಂಕರ್ ಎಂಬ ವಕೀಲರು ವಕಾಲತ್ತು ವಹಿಸಿದ್ದು, ವಿಚಾರಣೆ ನಡೆಸಲಾಗಿದೆ. ಬಳಿಕ ಆರೋಪಿಗಳನ್ನು ಏಳು ದಿನಗಳ ಕಾಲ ಪೊಲೀಸ್‌ ವಶಕ್ಕೆ ಪಡೆಯಲಾಗಿದೆ.

ಪ್ರಧಾನ ಸಿವಿಲ್ ನ್ಯಾಯಾಧೀಶರು ಅಪ್ಪಣ್ಣ ಸವದಿ ಎದುರು ಆರೋಪಿಗಳನ್ನು ಹಾಜರುಪಡಿಸಿದ್ದು, ಹೆಚ್ಚಿನ ವಿಚಾರಣೆಗೆ ಪೊಲೀಸ್ ಕಸ್ಟಡಿಗೆ ಪಡೆದಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಘಟನೆ ಹಿನ್ನೆಲೆ

ಕನಕಪುರ ತಾಲೂಕಿನ ಸಾತನೂರು ಬಳಿ ಮಾ.31ರ ರಾತ್ರಿ ಮಂಡ್ಯದಿಂದ ಗೋವುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ವಾಹನವನ್ನು ಪುನೀತ್ ಕೆರೆಹಳ್ಳಿ ಹಾಗೂ ಸಂಗಡಿಗರು ತಡೆದಿದ್ದರು. ಈ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ರಾಮನಗರ | ಇದ್ರೀಸ್‌ ಪಾಷಾ ಸಾವು ಪ್ರಕರಣ: ‘ಬೆಕ್ಕು ಮತ್ತು ಇಲಿ ಆಟ ಮುಗಿದಿದೆ’ ಎಂದ ಅಲೋಕ್‌ ಕುಮಾರ್

ಈ ವೇಳೆ ಕ್ಯಾಂಟರ್​ನಲ್ಲಿದ್ದ ಚಾಲಕ ಹಾಗೂ ಮತ್ತೊಬ್ಬ ಪರಾರಿಯಾಗಿದ್ದರೆ, ವಾಹನದಲ್ಲಿದ್ದ ಇದ್ರೀಷ್ ಪಾಷ ಎಂಬುವರ ಮೃತ ದೇಹ ಘಟನೆ ನಡೆದ 200 ಮೀಟರ್ ದೂರದಲ್ಲಿ ಪತ್ತೆಯಾಗಿತ್ತು. ಈ ಪ್ರಕರಣ ಸಂಬಂಧ ಪುನೀತ್ ಕೆರೆಹಳ್ಳಿ ನೈತಿಕ ಪೊಲೀಸ್‌ಗಿರಿ ಮಾಡಿ ಇದ್ರಿಷ್ ಪಾಷಾರನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಪ್ರಕರಣ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ 3 ಎಫ್‍ಐಆರ್ ದಾಖಲಾಗಿತ್ತು. ಮೃತನ ಸಹೋದರನ ದೂರಿನಂತೆ ಪೊಲೀಸರು ಐಪಿಸಿ ಸೆಕ್ಷನ್ 341, 504, 506, 324, 302, 34ರ ಅಡಿ ಪ್ರಕರಣ ದಾಖಲಿಸಿದ್ದರು.

ದೂರು ದಾಖಲಾಗುತ್ತಿದ್ದಂತೆಯೇ ಪುನೀತ್ ಕೆರೆಹಳ್ಳಿ ಹಾಗೂ ಇತರೆ ಆರೋಪಿಗಳು ನಾಪತ್ತೆಯಾಗಿದ್ದರು. ಸಾತನೂರು ಪೊಲೀಸರು ನಿರಂತರ ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಬುಧವಾರ (ಏ.5) ರಾಜಸ್ಥಾನದಲ್ಲಿ ಬಂಧಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ತುಮಕೂರು | ‘ದಲಿತರ ಸಂವಿಧಾನ’ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ ಬಿ ಸುರೇಶ್ ಗೌಡ

ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ...

ಬೆಂಗಳೂರು | ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ; ನ್ಯಾಯಕ್ಕಾಗಿ ರಾಷ್ಟ್ರಪತಿಗೆ ಕರವೇ ಮನವಿ

ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಯರು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು...