ರಾಮನಗರ | ಕನ್ನಡ ಸಾಹಿತ್ಯ ತೇರಿನ ಮೆರವಣಿಗೆ ಕನಕಪುರಕ್ಕೆ ಪಾದಾರ್ಪಣೆ

Date:

Advertisements

ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕರ್ನಾಟಕ ಸರ್ಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಕನ್ನಡ ಸಾಹಿತ್ಯ ತೇರಿನ ಮೆರವಣಿಗೆ ಕನಕಪುರಕ್ಕೆ ಪಾದಾರ್ಪಣೆ ಮಾಡಿದ್ದು, ತಾಲ್ಲೂಕು ಆಡಳಿತ ಭವ್ಯವಾಗಿ ಸ್ವಾಗತಿಸಿದೆ.

ನಗರದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸರ್ಕಲ್‌ನಿಂದ ಆರಂಭವಾದ ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ಪೂಜಾ ಕುಣಿತ, ಮತ್ತು ತಮಟೆ ಕಲಾತಂಡಗಳ ಆಕರ್ಷಣೆಯೊಂದಿಗೆ ಸಾಗಿತು. ಸರ್ಕಾರದಿಂದ ಆಯೋಜಿಸಿದ್ದ ಸ್ತಬ್ಧಚಿತ್ರದ ಜತೆಗೆ ತಾಲೂಕು ಆಡಳಿತವೂ ಕೂಡಾ ಭುವನೇಶ್ವರಿ ದೇವಿಯ ಮತ್ತೊಂದು ಸ್ತಬ್ಧಚಿತ್ರವನ್ನು ಆಯೋಜಿಸಿದ್ದು ಕಣ್ಮನ ಸೆಳೆಯುವಂತಿತ್ತು.

IMG 20241202 WA0056
ಕನಕಪುಕ್ಕೆ ಬಂದ ಕನ್ನಡ ಸಾಹಿತ್ಯ ತೇರಿನ ಮೆರವಣಿಗೆ

ಅಧಿಕಾರಿ ವೃಂದದವರು ಹಾಗೂ ಕನ್ನಡಪರ ಸಂಘಟನೆಗಳ ಸಮ್ಮುಖದಲ್ಲಿ ತಹಶೀಲ್ದಾರ್ ಮಂಜುನಾಥ್ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು. ಕನ್ನಡಪರ ಜಯಘೋಷಗಳೊಂದಿಗೆ, ಕಲಾತಂಡಗಳ ಪ್ರದರ್ಶನದೊಂದಿಗೆ ಕನಕಪುರದ ರಾಜಪಥದಲ್ಲಿ ಸಾಗಿದ ತೇರನ್ನು ಸಾರ್ವಜನಿಕರು ರಸ್ತೆಯ ಇಕ್ಕೆಲದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಿಂತು ನೋಡಿ ಸಂಭ್ರಮಿಸಿದರು. ಬಳಿಕ ಕನಕಪುರದ ವಾಣಿ ಟಾಕೀಸ್ ಸರ್ಕಲ್‌ನಲ್ಲಿ ಮೆರವಣಿಗೆ ಕೊನೆಗೊಂಡಿತು.

Advertisements

ಪ್ರಗತಿಪರ ಸಂಘಟನೆಗಳ ಅಧ್ಯಕ್ಷ ಕುಮಾರಸ್ವಾಮಿ ಕನ್ನಡ ತೇರನ್ನು ಬೀಳ್ಕೊಡುತ್ತ ಮಾತನಾಡಿ, “ಕನ್ನಡ ನುಡಿಯನ್ನು ಉಳಿಸಿ, ಬೆಳೆಸಿ ಸಿರಿವಂತಗೊಳಿಸುವುದರಲ್ಲಿ ಕನ್ನಡ ಸಾಹಿತ್ಯ ಕ್ಷೇತ್ರದ ಕೊಡುಗೆ ಅಪಾರವಾಗಿದ್ದು, ಸರ್ಕಾರವು ಪ್ರತಿ ವರ್ಷ ಒಂದೊಂದು ಜಿಲ್ಲೆಯನ್ನು ಆಯ್ದು ಸಾಹಿತ್ಯ ಸಮ್ಮೇಳನವನ್ನು ಆಯೋಜಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ” ಎಂದರು.

ಇದನ್ನು ಓದಿದ್ದೀರಾ? ಮಂಡ್ಯ | ಶ್ರಮಜೀವಿ ಪೌರಕಾರ್ಮಿಕರು, ದಿಟವಾದ ಕಾಯಕಯೋಗಿಗಳು: ನಾಗೇಶ್

“ಮಂಡ್ಯದ ಸಂಸ್ಕೃತಿ ಸಾರುವಂತಹ ಸ್ತಬ್ದಚಿತ್ರವನ್ನು ಬಹಳ ಸುಂದರವಾಗಿ ನಿರ್ಮಿಸಿದ್ದು ಅರ್ಥಪೂರ್ಣವಾಗಿತ್ತು. 25 ವರ್ಷಗಳ ಹಿಂದೆ ಕನಕಪುರದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೊಂಡಿತ್ತು. ಕನಕಪುರದಲ್ಲಿ ಮತ್ತೊಮ್ಮೆ ಆಚರಿಸಲು ಸಾಹಿತ್ಯ ಸಮ್ಮೇಳನದಲ್ಲಿ ನಿರ್ಣಯ ಕೈಗೊಳ್ಳಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಈ ಬಗ್ಗೆ ಆಲೋಚಿಸಬೇಕು” ಎಂದು ಒತ್ತಾಯಿಸಿದರು.

IMG 20241202 WA0053

ಕಾರ್ಯಕ್ರಮದಲ್ಲಿ ನಗರಸಭಾ ಅಧ್ಯಕ್ಷೆ ಲಕ್ಷ್ಮಿದೇವಮ್ಮ, ಜೆ.ಎಂ ಶಿವಲಿಂಗಯ್ಯ, ಕಸಾಪ ತಾಲೂಕು ಅಧ್ಯಕ್ಷ ಶಿವನಹಳ್ಳಿ ಶಿವಲಿಂಗಯ್ಯ, ಧಮ್ಮ ದೀವಿಗೆ ಟ್ರಸ್ಟ್‌ನ ಮಲ್ಲಿಕಾರ್ಜುನ್, ಪ್ರಶಾಂತ್ ಹೊಸದುರ್ಗ, ಕನ್ನಡ ಭಾಸ್ಕರ್, ಅಸ್ಗರ್ ಖಾನ್, ಕೂಗಿ ಗಿರಿಯಪ್ಪ, ಗ್ರೇಡ್ 2 ತಹಶೀಲ್ದಾರ್ ಶಿವಕುಮಾರ್, ನಗರಸಭೆ ಆಯುಕ್ತ ಮಹದೇವ್, ಕಾರ್ಯ ನಿರ್ವಾಣಾಧಿಕಾರಿ ಭೈರಪ್ಪ, ಸರ್ಕಾರಿ ನೌಕರರ ತಾಲೂಕು ಅಧ್ಯಕ್ಷ ನಂದೀಶ್, ಸಮಾಜ ಕಲ್ಯಾಣ ಅಧಿಕಾರಿ ಜಯಪ್ರಕಾಶ್, ಡೆಪ್ಯುಟಿ ತಹಶೀಲ್ದಾರ್ ಪ್ರವೀಣ್, ಕೂ ಗಿ ಗಿರಿಯಪ್ಪ, ಕಂದಾಯಾದಿಕಾರಿ ತಂಗರಾಜ್, ಪ್ರದೀಪ್, ವೆಂಕಟೇಶ್ ಗೌಡ , ಶಿವಣ್ಣ ಸೇರಿದಂತೆ ಬಹುತೇಕರು ಭಾಗವಹಿಸಿದ್ದರು.

IMG 20241202 WA0050
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X