ರಾಮನಗರ | ಕಸಾಪದಿಂದ ಅಗಲಿದ ಉದ್ಯಮಿ ರತನ್ ಟಾಟಾಗೆ ನುಡಿನಮನ

Date:

Advertisements

ಹಲವು ಕ್ಷೇತ್ರಗಳಲ್ಲಿ ಹಲವಾರು ಉತ್ಪನ್ನಗಳ ಮೂಲಕ ತಮ್ಮದೇ ಆದಂತಹ ಹೊಸ ಛಾಪನ್ನು ಮೂಡಿಸಿದಂತಹವರು ರತನ್ ಟಾಟಾ. ಅವರು ಸದಾ ಬಡವರಿಗಾಗಿ ತುಡಿಯುತ್ತಿದ್ದಂತಹ ಮನಸ್ಸು. ಶ್ರೀಸಾಮಾನ್ಯ ವ್ಯಕ್ತಿಗೂ ದಕ್ಕುವ ದರಗಳಲ್ಲಿ ಅವರ ಉತ್ಪನ್ನಗಳು ದೊರೆಯುತ್ತಿದ್ದವು. ರೈತರೂ ಕಾರಿನಲ್ಲಿ ಓಡಾಡುವ ಕನಸು ಕಂಡಂತಹ ಭಾರತದ ಹೆಮ್ಮೆಯ ಪುತ್ರ ಎಂದು ರಾಮನಗರ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಬಿ.ಟಿ.ದಿನೇಶ್ ಬಿಳಗುಂಬ ತಿಳಿಸಿದರು.

ರಾಮನಗರದಲ್ಲಿ ರಾಮನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಆಯೋಜಿಸಿಕೊಂಡಿದ್ದಂತಹ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪರಿಸರ ಪ್ರೇಮಿ ಬಿ.ಟಿ. ರಾಜೇಂದ್ರ ಮಾತನಾಡಿ, ಮದ್ಯಪಾನ, ಧೂಮಪಾನ ಹೊರತುಪಡಿಸಿ ಮಿಕ್ಕುಳಿದ ಎಲ್ಲಾ ಉತ್ಪನ್ನಗಳಲ್ಲಿಯೂ ತಮ್ಮದೇ ಹೊಸ ಬ್ರಾಂಡ್ ಕಟ್ಟಿಕೊಟ್ಟವರು ರತನ್ ಟಾಟಾ ಎಂದು ತಿಳಿಸಿದರು.

Advertisements

ಸಮದ್ ಮಾತನಾಡಿ, ನನ್ನ ಸ್ನೇಹಿತ ಟಾಟಾ ಎಸ್ ಗಾಡಿ ತಗೊಂಡು ಬದುಕು ರೂಪಿಸಿ ಇಂದು ಮೂರು ಮಹಡಿಯ ಮನೆ ನಿರ್ಮಿಸಿದ್ದಾನೆ. ಅಂತಹ ಬ್ರಾಂಡ್ ನಮ್ಮ ಉದ್ಯಮಿಗಳು ಕಟ್ಟಿಕೊಟ್ಟಿದ್ದಾರೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಸೇಡಂ | ಕುಡಿಯುವ ನೀರಿಗಾಗಿ ಪರದಾಟ: ಸ್ಲಮ್‌ಬೋರ್ಡ್ ಬಡಾವಣೆ ನಿವಾಸಿಗಳ ಗೋಳು ಕೇಳದ ಅಧಿಕಾರಿಗಳು!

ಕಾರ್ಯಕ್ರಮದಲ್ಲಿ ಮಾತನಾಡಿದ ಅರುಣ್ ಕವಣಾಪುರ, ರತನ್ ಟಾಟಾರ ಬದುಕು ಪ್ರತಿಯೊಬ್ಬರಿಗೂ ಸ್ಪೂರ್ತಿದಾಯಕ. ಅವರ ಸಂಪಾದನೆಯಲ್ಲಿ ಶೇಕಡಾ ಅರವತ್ತು ಭಾಗ ದೇಶಕ್ಕಾಗಿ ಮುಡಿಪಿಟ್ಟವರು. ನವ ಭಾರತದ ಕನಸನ್ನು ಸಾಕಾರಗೊಳಿಸುವ ಕೆಲಸವನ್ನು ಮುಂದಿನ ಉದ್ಯಮಿಗಳಾದರೂ ಮಾಡಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಾನಪದ ವಿದ್ವಾಂಸ ಡಾ.ಎಂ.ಬೈರೇಗೌಡರು, ಲಕ್ಕಸಂದ್ರ ಮಹದೇವು, ಆರೋಗ್ಯ ಇಲಾಖೆಯ ಸುರೇಶ್, ಸಮಾಜ ಸೇವಕಿ ವೀಣಾ, ನಂಜುಂಡಿ ಬಾನಂದೂರು, ಪ್ರಕಾಶ್ ಮುಂತಾದವರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X