ರಾಮನಗರ | ಮೇಕೆದಾಟು ಅಣೆಕಟ್ಟೆಗೆ ನಿರಂತರ ಹೋರಾಟದ ಸಂಕಲ್ಪ: ರಮೇಶ್‌ಗೌಡ

Date:

Advertisements

ತೆಂಗಿನ ಸಸಿ ನೆಟ್ಟರೆ ಕುಟುಂಬದ ಹತ್ತಾರು ತಲೆಮಾರಿಗೆ ಕಲ್ಪವೃಕ್ಷವಾಗುವಂತೆ ಮೇಕೆದಾಟು ಅಣೆಕಟ್ಟೆ ನಿರ್ಮಾಣವಾದರೆ ಹತ್ತಾರು ತಲೆಮಾರಿಗೆ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಮೇಕೆದಾಟು ಅಣೆಕಟ್ಟೆ ನಿರ್ಮಾಣಕ್ಕೆ ನಿರಂತರ ಹೋರಾಟದ ಸಂಕಲ್ಪ ಮಾಡುತ್ತೇವೆ ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್‌ಗೌಡ ತಿಳಿಸಿದರು.

ಕಾವೇರಿ ನದಿ ನೀರಿನ ಹಂಚಿಕೆಯಲ್ಲಿ ಸಂಕಷ್ಟ ಸೂತ್ರ ರಚಿಸುವ ಜೊತೆಗೆ ಮೇಕೆದಾಟು ಯೋಜನೆಗೆ ಅಡಿಗಲ್ಲು ಹಾಕುವಂತೆ ಹಾಗೂ ಸತ್ತೇಗಾಲ ಯೋಜನೆಯನ್ನು ಶೀಘ್ರವಾಗಿ ಮುಕ್ತಾಯ ಮಾಡುವಂತೆ ಆಗ್ರಹಿಸಿ ರಾಮನಗರದ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯಿಂದ ನಡೆದ ಹೋರಾಟ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ, ರೈತರಿಗೆ 365 ತೆಂಗಿನ ಸಸಿಗಳನ್ನು ವಿತರಿಸಿ ಮಾತನಾಡಿದರು.

“ಮೇಕೆದಾಟು ಅಣೆಕಟ್ಟೆ ನಿರ್ಮಾಣದಿಂದ 6 ಜಿಲ್ಲೆಗಳಿಗೆ ನೀರಿನ ತೊಡಕು ಪರಿಹಾರವಾಗಲಿದೆ ಮತ್ತು ಜಲವಿದ್ಯುತ್ ಉತ್ಪಾದನೆಗೆ ಸಹಕಾರಿಯಾಗಲಿದೆ. ಈ ಯೋಜನೆಗೆ ಸರ್ಕಾರದಲ್ಲಿ ಉತ್ಕಟ ಇಚ್ಚಾಶಕ್ತಿ ಕಾಣುತ್ತಿಲ್ಲ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಈ ವರ್ಷ 70 ಟಿಎಂಸಿ ನೀರು ಸಮುದ್ರದ ಪಾಲಾಗಿದೆ. ಜತೆಗೆ ಜನತೆಯ ಬೆಂಬಲದ ಕೊರತೆಯಿಂದ ಹೋರಾಟಕ್ಕೆ ತೊಡಗಲು ಸವಾಲುಗಳಿವೆ” ಎಂದು ಅಭಿಪ್ರಾಯಪಟ್ಟರು.

Advertisements

ರೈತ ಮುಖಂಡ ಹೊನ್ನಾಯ್ಕನಹಳ್ಳಿ ಕೃಷ್ಣಪ್ಪ ಮಾತನಾಡಿ, “ನಿರಂತರ ಹೋರಾಟ ಮಾಡುವುದು ಸುಲಭದ ಮಾತಲ್ಲ. ರಮೇಶ್‌ಗೌಡ ಕಳೆದ ಒಂದು ವರ್ಷದಿಂದ ಮೇಕೆದಾಟು ಅಣೆಕಟ್ಟೆಗಾಗಿ ಹೋರಾಟ ಮಾಡಿರುವುದು ಶ್ಲಾಘನೀಯ. ನಮ್ಮ ಹಕ್ಕಿಗಾಗಿ ಹೋರಾಟ ಮಾಡದಿದ್ದರೆ, ಅಧಿಕಾರಿಗಳು ದಬ್ಬಾಳಿಕೆ ಮುಂದುವರೆಸುತ್ತಾರೆ” ಎಂದರು.

ಡಿಎಸ್‌ಎಸ್‌ ಸಂಚಾಲಕ ವೆಂಕಟೇಶ್‌(ಸೇಟು) ಮಾತನಾಡಿ, “ಮೇಕೆದಾಟು ಅಣೆಕಟ್ಟೆ ನಿರ್ಮಾಣದ ಹೋರಾಟ ಒಂದು ವರ್ಷ ಪೂರೈಸಿದ್ದು, ಇದು ಜನಪರ ವೇದಿಕೆಯ ಮಹತ್ವದ ಹೋರಾಟವಾಗಿದೆ. ಎಲ್ಲ ಶಾಸಕರು ಮತ್ತು ಸಂಸದರು ಒಟ್ಟಾಗಿ ಈ ಯೋಜನೆಗೆ ಬೆಂಬಲ ನೀಡಬೇಕಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ʼಸೀತಾಫಲʼ ಹಣ್ಣಿಗೆ ಭಾರಿ ಬೇಡಿಕೆ; ಬೇಕಿದೆ ಸೂಕ್ತ ಮಾರುಕಟ್ಟೆ

ತಾ.ಪಂ. ಮಾಜಿ ಸದಸ್ಯ ಮತ್ತೀಕೆರೆ ಹನುಮಂತಯ್ಯ ಮಾತನಾಡಿ, “ಮೇಕೆದಾಟು ಅಣೆಕಟ್ಟೆಯಿಂದ ಕುಡಿಯುವ ನೀರಿನ ಜತೆಗೆ ಜಲವಿದ್ಯುತ್ ಉತ್ಪಾದನೆಗೂ ಸಹಕಾರಿಯಾಗಲಿದೆ. ರಮೇಶ್‌ಗೌಡ ಅವರು ಹೋರಾಟ ನಡೆಸುತ್ತಿರುವುದು ಮಹತ್ವದ್ದಾಗಿದೆ” ಎಂದು ಹೇಳಿದರು.

ವೇದಿಕೆ ರಾಜ್ಯ ಉಪಾಧ್ಯಕ್ಷ ರಂಜಿತ್‌ಗೌಡ, ನಗರಸಭಾ ಮಾಜಿ ಸದಸ್ಯ ಜೆಸಿಬಿ ಲೋಕೇಶ್, ತೋಟಗಾರಿಕಾ ಇಲಾಖೆ ನಿವೃತ್ತ ಅಧಿಕಾರಿ ಪುಟ್ಟಸ್ವಾಮಿ, ಶಿಕ್ಷಕ ಪುಟ್ಟಪ್ಪಾಜಿ, ಮೆಣಸಿಗನಹಳ್ಳಿ ರಾಮಕೃಷ್ಣಪ್ಪ, ರೈತ ಮುಖಂಡ ಗೌಡಗೆರೆ ತಿಮ್ಮೇಗೌಡ, ರ‍್ಯಾಂಬೋ ಸೂರಿ, ಪಾನಿಪುರಿ ಚನ್ನಪ್ಪ, ರಾಜು ಹೋಟೆಲ್, ಮೆಣಸಿನಗಹಳ್ಳಿ ಮಹೇಶ್, ಭೀಮಯ್ಯ, ಬೋರ್‌ವೆಲ್ ಪುಟ್ಟು, ಉಮೇಶ್, ರಾಜಸ್ಥಾನಿ ಸಂಘದ ಪದಾಧಿಕಾರಿಗಳು ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X