ರಾಮನಗರ | ಕಟ್ಟಡ ಕಾರ್ಮಿಕರ ಹಕ್ಕುಗಳ ಕುರಿತ ಕಾರ್ಯಗಾರ: ಸೌಲಭ್ಯ ಪಡೆಯುವ ಅರಿವಿನ ಜಾಗೃತಿ

Date:

Advertisements

ಹಲವಾರು ಕಾರ್ಮಿಕರು ಹದಿನೈದು, ಇಪ್ಪತ್ತು ವರ್ಷಗಳಿಂದ ಕಟ್ಟಡ ನಿರ್ಮಾಣ ಕೆಲಸದಲ್ಲಿ ತೊಡಗಿದ್ದಾರೆ. ಆದರೆ ಕಾರ್ಮಿಕರ ಕಾರ್ಡ್‌ ಮಾಡಿಸಿಲ್ಲ. ಅಲ್ಲದೆ ಯಾವುದೇ ರೀತಿಯ ಸೌಲಭ್ಯವನ್ನೂ ಪಡೆದುಕೊಂಡಿಲ್ಲ. ಸೌಲಭ್ಯಗಳ ಕುರಿತು ಮಾಹಿತಿ ಇಲ್ಲದೇ ಇರುವುದೇ ಇದಕ್ಕೆ ಕಾರಣ ಎಂದು ಕಟ್ಟಡ ಕಾರ್ಮಿಕರ ಸಂಘದ ಸಹ ಕಾರ್ಯದರ್ಶಿ ಶಿವಕುಮಾರ್‌ ತಿಳಿಸಿದರು.

ರಾಮನಗರದ ಸ್ಪೂರ್ತಿನಗರದಲ್ಲಿರುವ ಸ್ಪಂದನ ಸಂಸ್ಥೆಯಲ್ಲಿ ಭಾನುವಾರ ನಡೆದ ಕಟ್ಟಡ ಕಾರ್ಮಿಕರ ಹಕ್ಕುಗಳ ಕುರಿತ ಕಾರ್ಯಗಾರದಲ್ಲಿ ಮಾತನಾಡಿ, ಕಾರ್ಮಿಕರಿಗೆ ಸರ್ಕಾರಿ ಯೋಜನೆಗಳ ಕುರಿತು ಮಾಹಿತಿ ನೀಡಿದರು.

“ರಾಮನಗರದ ಕಟ್ಟಡ ಕಾರ್ಮಿಕರಿಗೆ ಉಚಿತವಾಗಿ ಕಾರ್ಮಿಕರ ಕಾರ್ಡ್‌ ಮಾಡಿಸಬೇಕೆಂದಿದ್ದರೂ ಕೂಡ ಅವರಿಗೆ ಉಚಿತವಾಗಿ ಸೌಲಭ್ಯಗಳು ದೊರೆಯುತ್ತಿಲ್ಲ ಎಂಬುದು ಸ್ಪಂದನ ನಡೆಸಿದ ಸಮೀಕ್ಷೆಯಲ್ಲಿ ತಿಳಿದುಬಂದಿದೆ. ಈ ಕಾರಣದಿಂದಾಗಿ ಕಟ್ಟಡ ಕಾರ್ಮಿಕರಿಗೆ ಅರಿವು ಮೂಡಿಸುವ ಸಲುವಾಗಿ ಕಟ್ಟಡ ಕಾರ್ಮಿಕರ ಹಕ್ಕುಗಳ ಕುರಿತ ಕಾರ್ಯಗಾರವನ್ನು ಏರ್ಪಡಿಸಲಾಗಿದ್ದು, ಸರ್ಕಾರದಿಂದ ಕಾರ್ಮಿಕರಿಗೆ ಇರುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕಾದ ವಿಧಾನ, ಬೇಕಾಗಿರುವ ದಾಖಲೆಗಳ ಕುರಿತು ಕಾರ್ಮಿಕರು ತಿಳಿದುಕೊಳ್ಳಬೇಕು” ಎಂದರು.

Advertisements
ಕಟ್ಟಡ ಕಾರ್ಮಿಕರ ಹಕ್ಕು

“ಕಾರ್ಮಿಕರಿಗೆ ಹಲವಾರು ಯೋಜನೆಗಳು ಇದ್ದು, ಇದನ್ನು ಕಾರ್ಮಿಕರಿಗಿಂತ ಹೆಚ್ಚಾಗಿ ಇತರರು ಬಳಸುತ್ತಿದ್ದಾರೆ. ಆದ್ದರಿಂದ ಕಾರ್ಮಿಕರು ಒಟ್ಟುಗೂಡಿ ಸರ್ಕಾರಿ ಸೌಲಭ್ಯಗಳನ್ನು ಪಡೆಯಬೇಕು ಹಾಗೂ ತಮಗಿರುವ ಹಕ್ಕುಗಳ ಕುರಿತು ಅರಿತುಕೊಳ್ಳಬೇಕು. ಜತೆಗೆ ಕಟ್ಟಡ ನಿರ್ಮಾಣ ಕಾರ್ಮಿಕರಲ್ಲಿ ʼಸಮಾನ ಕೆಲಸಕ್ಕೆ ಸಮಾನ ವೇತನʼ ಎಂಬ ಕಲ್ಪನೆಯೇ ಇಲ್ಲ, ಮಹಿಳೆ ಮತ್ತು ಪುರುಷರಿಗೆ ಸಮಾನ ವೇತನ ದೊರೆಯುವಂತಾಗಬೇಕು. ಇದಕ್ಕಾಗಿ ನಾವೆಲ್ಲರೂ ಜೊತೆಯಾಗಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಅರಸೀಕೆರೆ | ದೇಶದಲ್ಲೇ ರಾಜ್ಯದ ತಲಾ ಆದಾಯ ಹೆಚ್ಚಳಕ್ಕೆ ಪಂಚ ಗ್ಯಾರೆಂಟಿಗಳೇ ಕಾರಣ: ಸಿಎಂ ಸಿದ್ದರಾಮಯ್ಯ

ಕಾರ್ಯಕ್ರಮದಲ್ಲಿ ಸ್ಪಂದನ ಸಂಸ್ಥೆಯ ಮಾಲಿನಿ ಅಂತರ್ಜನಂ, ಸುಪ್ರಿತಾ, ಕಾವ್ಯ, ಯಶೋಧ, ಜಯಶ್ರೀ, ಮಹಾಲಕ್ಷ್ಮಿ, ಮೇಘನಾ, ರಂಗಕರ್ಮಿ ಶ್ರೀನಿವಾಸ್‌ ಹಾಗೂ ರಾಮನಗರದ ವಿವಿಧ ಭಾಗಗಳಿಂದ ಬಂದಿದ್ದ ಐವತ್ತಕ್ಕೂ ಹೆಚ್ಚು ಕಟ್ಟಡ ನಿರ್ಮಾಣ ಕಾರ್ಮಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X