ರಾಮನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಹೃದಯಾಘಾತವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನ ಮನೆಯಲ್ಲಿದ್ದಾಗ ಶಾಸಕರಿಗೆ ಶನಿವಾರ ಬೆಳಗ್ಗೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ವೈದೇಹಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇದೀಗ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ.
ಇದನ್ನೂ ಓದಿದ್ದೀರಾ? ದಾಂಡೇಲಿ | ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಗ್ರಾಮ ಸ್ವರಾಜ್ಯ ಕರ್ನಾಟಕ ಆಗ್ರಹ
“ಶಾಸಕರು ಎದೆನೋವು ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆಗೆ ದಾಖಲಾದರು. ಡಯಾಬಿಟಿಸ್ ಕೂಡಾ ಇದೆ. ಕೂಡಲೇ ಆಂಜಿಯೋಗ್ರಾಮ್ ಮಾಡಿಸಿದಾಗ ಹೃದಯದಲ್ಲಿ ಮೂರು ಬ್ಲಾಕ್ಗಳಿರುವುದು ಕಂಡುಬಂದಿದೆ. ಹಾಗಾಗಿ ಇನ್ನೆರೆಡು ಮೂರು ದಿನಗಳಲ್ಲಿ ಓಪನ್ ಹಾರ್ಟ್ ಸರ್ಜರಿ ಮಾಡಬೇಕಿದೆ. ಇದಕ್ಕೆ ಕುಟುಂಬಸ್ಥರೂ ಒಪ್ಪಿಗೆ ಸೂಚಿಸಿದ್ದಾರೆ” ಎಂದು ವೈದ್ಯ ವಿ ಕೆ ಶ್ರೀನಿವಾಸ್ ತಿಳಿಸಿದ್ದಾರೆ.
ಆಸ್ಪತ್ರೆಗೆ ಸಿಎಂ ಡಿ ಕೆ ಶಿವಕುಮಾರ್ ಆಗಮಿಸಿ ಆರೋಗ್ಯ ವಿಚಾರಿಸಲಿದ್ದಾರೆ ಎಂಬ ಮಾಹಿತಿ ದೊರೆತಿದೆ.





