ರಾಮನಗರ | ಪಿಡಿಒ ವಿರುದ್ಧ ಹಣ ದುರ್ಬಳಕೆ ಆರೋಪ; ತನಿಖೆಗೆ ಸಿದ್ಧ ಎಂದ ಪಿಡಿಒ

Date:

ಚರಂಡಿ ನೈರ್ಮಲ್ಯ, ಸ್ವಚ್ಛತೆ ಹಾಗೂ ನೀರು ಸರಬರಾಜು ಉಪಕರಣ ಖರೀದಿ ಹೆಸರಲ್ಲಿ ಸುಮಾರು 80 ಲಕ್ಷ ರೂಪಾಯಿ ದುರುಪಯೋಗವಾಗಿದೆ. ಗ್ರಾಮ ಪಂಚಾಯತಿ ಪಿಡಿಒ ಈ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ ಸಿ. ಮಹದೇವಯ್ಯ ಆರೋಪಿಸಿದ್ದಾರೆ.

- Advertisement -

ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು. ಮಾಗಡಿ ತಾಲೂಕಿನ ಅಜ್ಜನಹಳ್ಳಿ ಗ್ರಾಮ ಪಂಚಾಯತಿ ಪಿಡಿಒ ಗಂಗಯ್ಯ ವಿರುದ್ಧ ಹಣ ದುರ್ಬಳಕೆ ಆರೋಪ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಅಜ್ಜನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಚರಂಡಿಗಳನ್ನು ಪಂಚಾಯತಿ ನೌಕರರೇ ಸ್ವಚ್ಛತೆ ಮಾಡಿದ್ದಾರೆ. ಆದರೂ, ಗುತ್ತಿಗೆದಾರರಿಂದ ಸ್ವಚ್ಛತೆ ಮಾಡಿಸಲಾಗಿದೆ ಎಂದು ನಕಲಿ ಬಿಲ್‌ ತಯಾರಿಸಿದ್ದಾರೆ. ಅನಕ್ಷರಸ್ಥ ಅದ್ಯಕ್ಷರಿಂದ ಬಿಲ್‌ಗೆ ಸಹಿ ಪಡೆದು ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ಚರಂಡಿ ಸ್ವಚ್ಛತೆ ಕಾಮಗಾರಿಗಳನ್ನು ಮಾಡಿಸಿರುವುದಾಗಿ ವೆಂಕಟೇಶ್‌ ಮೂರ್ತಿ ಮತ್ತು ಸುರೇಶ್‌ ಟಿ.ಜಿ ಎಂಬ ಗುತ್ತಿಗೆದಾರರ ಹೆಸರಿನಲ್ಲಿ ನಕಲಿ ಬಿಲ್‌ಗಳನ್ನು ಪಿಡಿಒ ತಯಾರಿಸಿದ್ದಾರೆ. ಕಿರಿಯ ಅಭಿಯಂತರರು ಮನರೇಗಾ ಯೋಜನೆಯಡಿ ಮಾಡಿಸಿರುವ ಅಭಿವೃದ್ದಿ ಕಾಮಗಾರಿಗಳಿಗೆ ಎಂ.ಬಿ ಪುಸ್ತಕದಲ್ಲಿ ಬಿಲ್‌ ಬರೆದಿದ್ದಾರೆ. ಆದರೆ, ದಿನಾಂಕ ಬರೆದಿಲ್ಲ. ಹಣ ಡ್ರಾ ಮಾಡಿದ ಚೆಕ್‌ ನೀಡಿದ ದಿನಾಂಕ ನಮೂದಿಸಿಲ್ಲ” ಎಂದು ದೂರಿದ್ದಾರೆ.

“ಪಿಡಿಒ ಗಂಗಯ್ಯ ಇದೇ ವರ್ಷ ಡಿಸೆಂಬರ್‌ನಲ್ಲಿ ನಿವೃತ್ತಿ ಹೊಂದಲಿದ್ದಾರೆ. ಆದರೆ, ಅವರು ಈಗಲೇ ರಜೆ ಮೇಲೆ ತೆರಳಿದ್ದಾರೆ. ಹಣ ದುರ್ಬಳಕೆಯ ಕುರಿತು ತಾಲೂಕು ಪಂಚಾಯಿತಿ ಇಒ ಮತ್ತು ಜಿಲ್ಲಾ ಪಂಚಾಯಿತಿ ಸಿಇಒ ಅವರ ಗಮನಕ್ಕೆ ತಂದಿದ್ದೇವೆ. ಆದರೂ ಪ್ರಯೋಜನವಾಗಿಲ್ಲ. ಪಿಡಿಒ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ತಮ್ಮ ಮೇಲಿನ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಪಿಡಿಒ ಗಂಗಯ್ಯ, “ಪಂಚಾಯತಿ ವ್ಯಾಪ್ತಿಯಲ್ಲಿ ಚರಂಡಿ ಸ್ವಚ್ಚತಾ ಕಾಮಗಾರಿಗಳನ್ನು ಪಂಚಾಯತ್‌ ರಾಜ್‌ ಅಧಿನಿಯಮದಂತೆ ನಡೆಸಲಾಗಿದೆ. ಕಾಮಗಾರಿಗಳಲ್ಲಿ ಯಾವುದೇ ಅವ್ಯವಹಾರ ನಡೆಸಿಲ್ಲ. ಮಹದೇವಯ್ಯ ಮಾಡುತ್ತಿರುವ ಆರೋಪಗಳು ಸತ್ಯಕ್ಕೆ ದೂರವಾಗಿವೆ. ಯಾವುದೇ ರೀತಿಯ ತನಿಖೆಗೂ ನಾನು ಸಿದ್ದನಿದ್ದೇನೆ” ಎಂದು ಗಂಗಯ್ಯ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...