ರಾಮದುರ್ಗ | ಸಂಪೂರ್ಣ ಹದಗೆಟ್ಟ ಹಲಗತ್ತಿ ಗ್ರಾಮದ ರಸ್ತೆ; ಶಾಸಕ ಅಶೋಕ ಪಟ್ಟಣ ವಿರುದ್ಧ ಸಾರ್ವಜನಿಕರ ಆಕ್ರೋಶ

Date:

Advertisements

“ಶಾಸಕ ಅಶೋಕ ಪಟ್ಟಣ ಅವರು ಇದೇ ರಸ್ತೆಯಲ್ಲಿ ಓಡಾಡ್ತ ಇರ್ತಾರೆ. ಆದರೂ, ರಸ್ತೆ ಸರಿ ಮಾಡಬೇಕು ಅಂತ ಅವರಿಗೆ ಅನ್ನಿಸಿಲ್ಲ. ಇದಕ್ಕಿಂತ ದೌರ್ಭಾಗ್ಯ ನಮಗೆ ಇನ್ನೇನಿದೆ”…ಹೀಗಂತ ಆಕ್ರೋಶ ಹೊರ ಹಾಕಿರುವುದು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದ ಜನ.

ಹೌದು. ಹಲಗತ್ತಿ ಗ್ರಾಮದ ರಸ್ತೆ ಸಂಪೂರ್ಣವಾಗಿ ಹಾಳಾಗಿ ವರ್ಷಗಳೇ ಕಳೆದಿದೆ. ಆದರೂ, ರಸ್ತೆಯನ್ನು ದುರಸ್ತಿ ಮಾಡುವ ಕಾರ್ಯಕ್ಕೆ ಜನಪ್ರತಿನಿಧಿಗಳಾಗಲೀ, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಾಗಲೀ ಮುಂದಾಗಿಲ್ಲ. ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಬಗ್ಗೆ ಈ ದಿನ.ಕಾಮ್ ಜೊತೆಗೆ ಮಾತನಾಡಿದ ಹಲಗತ್ತಿ ಗ್ರಾಮದ ವಿಜಯಲಕ್ಷ್ಮಿ, “ಈ ರಸ್ತೆಯಲ್ಲಿ ಬೇರೆ ಬೇರೆ ಜಿಲ್ಲೆಯ ವಾಹನಗಳು ಸಂಚಾರ ಮಾಡುತ್ತವೆ. ಇದು ಮುಖ್ಯ ರಸ್ತೆ ಬೆರೆ. ಶಾಸಕರು ಇದೇ ರಸ್ತೆಯಲ್ಲಿ ಓಡಾಡುತ್ತಾರೆ. ಎಲೆಕ್ಷನ್ ಬಂದಾಗ ಓಟು ಹಾಕಿಸಿಕೊಳ್ಳುತ್ತಾರೆ. ಆಮೇಲೆ ನಾಪತ್ತೆಯಾಗ್ತಾರೆ. ಜನರು ಪ್ರತಿಭಟನೆ ನಡೆಸಿದಾಗ, ರಸ್ತೆಗೆ ಮಣ್ಣು ಹಾಕಿ ಪ್ಯಾಚ್ ವರ್ಕ್ ಮಾಡ್ತಾರೆ. ಅದು ಮತ್ತೆ ಹಾಳಾಗುತ್ತದೆ. ಹಲವು ವರ್ಷಗಳಿಂದ ಇದುವೇ ಪುನರಾವರ್ತನೆಯಾಗ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements
ಬೆಳಗಾಬಿ

ಈ ಕುರಿತು ಕೊರಿಯರ್ ಕೆಲಸ ಮಾಡುವ ಫಾರೂಕ್ ಜೈನೆಖಾನ ಮಾತನಾಡಿ, “ನಾನು ಕೊರಿಯರ್ ಕೆಲಸ ಮಾಡುತ್ತಿರುವುದರಿಂದ ದಿನನಿತ್ಯ ಇದೇ ರಸ್ತೆಯಲ್ಲಿ ಓಡಾಡುತ್ತೇನೆ. ರಸ್ತೆ ಸಂಪೂರ್ಣ ಹಾಳಾಗಿದ್ದು, ಇಲ್ಲಿ ಓಡಾಡುವುದೇ ಬಹಳ ತ್ರಾಸದ ಕೆಲಸ” ಎಂದು ತಿಳಿಸಿದ್ದಾರೆ.

“ರಸ್ತೆ ಹಾಳಾಗಿರುವುದರಿಂದ ನಮ್ಮ ವಾಹನಗಳು ಸಹ ಹಾಳಾಗುತ್ತಿವೆ. ನಾವು ಓಟು ಹಾಕಿದ್ದೆಲ್ಲ ವ್ಯರ್ಥವಾಗಿದೆ. ಈ ರಸ್ತೆಯ ಸಮಸ್ಯೆಯ ಕುರಿತು ವಿಡಿಯೋ ಮಾಡಿ, ಫೇಸ್‌ಬುಕ್, ಟ್ವಿಟ್ಟರ್ ಸೇರಿದಂತೆ ಸೋಷಿಯಲ್ ಮೀಡಿಯಾಗಳಲ್ಲಿ ಹಾಕಿದ್ದಲ್ಲದೇ, ಶಾಸಕರು, ಸಂಸದರು ಹಾಗೂ ಪ್ರಧಾನಿಯವರಿಗೂ ಟ್ಯಾಗ್ ಮಾಡಿದ್ದೇನೆ. ಆದರೂ ಈವರೆಗೆ ಯಾರೂ ಕೂಡ ಸ್ಪಂದಿಸಿಲ್ಲ. ನಿಮ್ಮ ಸುದ್ದಿಯನ್ನು ನೋಡಿದ ಮೇಲಾದರೂ ರಸ್ತೆ ದುರಸ್ತಿ ಮಾಡಲಿ” ಎಂದು ಫಾರೂಕ್ ಆಗ್ರಹ ವ್ಯಕ್ತಪಡಿಸಿದ್ದಾರೆ.

ಫಾರೂಕ್

ಹಲಗತ್ತಿಯ ಮಾರ್ಗವಾಗಿ ವಿಜಯಪೂರ, ಬಾಗಲಕೋಟೆ, ಧಾರವಾಡ ಮತ್ತು ರಾಮದುರ್ಗ ತಾಲೂಕಿನ ಹಳ್ಳಿಗಳಿಗೆ ದಿನ ನಿತ್ಯ ನೂರಾರು ವಾಹನಗಳು ಓಡಾಡುತ್ತವೆ. ಆದರೆ ರಸ್ತೆಯು ಸಂಪೂರ್ಣವಾಗಿ ಹಾಳಾಗಿದ್ದು ರಸ್ತೆಯ ತುಂಬೆಲ್ಲಾ ಗುಂಡಿಗಳೇ ತುಂಬಿ ಹೋಗಿವೆ.

ಇದನ್ನು ಓದಿದ್ದೀರಾ? ಬೇಲೆಕೇರಿ ಅದಿರು ಪ್ರಕರಣ | ಕಾಂಗ್ರೆಸ್ ಶಾಸಕ ​ಸತೀಶ್​ ಸೈಲ್​​ಗೆ ಏಳು ವರ್ಷ ಜೈಲು ಶಿಕ್ಷೆ, 9 ಕೋಟಿ ದಂಡ

ಮಳೆ ಬಂದರೆ ಈ ರಸ್ತೆಯಲ್ಲಿ ಓಡಾಡಬೇಕಾದರೆ, ವಾಹನ ಸವಾರರು ಹರಸಾಹಸ ಮಾಡಬೇಕಾಗುತ್ತದೆ. ಆದರೆ, ಕೆಲವೊಮ್ಮೆ ಮಣ್ಣು ಹಾಕಿ ಗುಂಡಿಗಳನ್ನು ಮುಚ್ಚುತ್ತಾರೆ. ಮಳೆ ನಂತರ ಮತ್ತೆ ರಸ್ತೆ ಹಾಳಾಗುತ್ತದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಆದಷ್ಟು ಬೇಗನೆ ರಾಮದುರ್ಗ ತಾಲೂಕಿನ ಶಾಸಕರಾದ ಅಶೋಕ ಪಟ್ಟಣ ರಸ್ತೆ ದುರಸ್ತಿ ಮಾಡಲಿ ಎನ್ನುವುದು ಸ್ಥಳೀಯರ ಆಗ್ರಹವಾಗಿದೆ. ಈ ವರದಿಯ ಬಳಿಕ ದುರಸ್ತಿ ಮಾಡುವ ಕಾರ್ಯಕ್ಕೆ ಜನಪ್ರತಿನಿಧಿಗಳಾಗಲೀ, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಾಗಲೀ ಸ್ಪಂದಿಸುತ್ತಾರಾ ಕಾದು ನೋಡಬೇಕಿದೆ.

ಸುನಿಲ್
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X