ಅತ್ಯಾಚಾರ ಆರೋಪಿ ಮುರುಘಾ ಬಂಧನಕ್ಕೆ ತಡೆ; ಬಿಡುಗಡೆಗೆ ಹೈಕೋರ್ಟ್‌ ಸೂಚನೆ

Date:

Advertisements

ಶಿವಮೂರ್ತಿ ಮುರುಘಾ ವಿರುದ್ಧದ 2ನೇ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಅವರನ್ನು ಸೋಮವಾರ ಬಂಧಿಸಲಾಗಿದೆ. ಆದರೆ, ಅವರ ಬಂಧನಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಶಿವಮೂರ್ತಿ ಮುರುಘಾ ಅವರನ್ನು ಬಿಡುಗಡೆ ಮಾಡುವಂತೆ ಆದೇಶಿಸಿದೆ.

ಶಿವಮೂರ್ತಿ ಮುರುಘಾ ಅವರ ಬಂಧನವನ್ನು ಪ್ರಶ್ನಿಸಿ ಅವರ ವಕೀಲ ಉಮೇಶ್ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಅವರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್‌ರವರಿದ್ದ ಪೀಠ, “ಮುರುಘಾ ಅವರ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್​ ನೀಡಿರುವುದು ಹೈಕೋರ್ಟ್‌ ಆದೇಶದ ಉಲ್ಲಂಘನೆಯಾಗಿದೆ. ಅವರನ್ನು ಬಿಡುಗಡೆಗೊಳಿಸಬೇಕು” ಎಂದು ಚಿತ್ರದುರ್ಗ ಜಿಲ್ಲಾ ಕಾರಾಗೃಹಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

“ಮುಂದಿನ ಆದೇಶದವರೆಗೂ 2ನೇ ಪೋಕ್ಸೋ ಪ್ರಕರಣದ ವಿಚಾರಣೆ ಮುಂದೂಡಬೇಕು” ಎಂದು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯಕ್ಕೆ ಸೂಚನೆ ನೀಡಿದೆ.

Advertisements

ಚಿತ್ರದುರ್ಗಕ್ಕೆ ಪ್ರವೇಶಿಸದಂತೆ ಹೈಕೋರ್ಟ್‌ ಆದೇಶವಿದೆ. ಆದರೂ, ಅರವನ್ನು ಬಂಧಿಸಿ ಚಿತ್ರದುರ್ಗಕ್ಕೆ ಕರೆತಂದಿರುವುದು ಆದೇಶ ಉಲ್ಲಂಘನೆಯಾಗಿದೆ. ಹೈಕೋರ್ಟ್ ಆದೇಶದಂತೆ 2ನೇ ಪೋಕ್ಸೋ ಪ್ರಕರಣದ ವಿಚಾರಣೆಯನ್ನು ಮುಂದೂಡಬೇಕಿತ್ತು. ಆದರೆ, ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ. ಕೇಸ್ ಬೇರೆಯದಾದರೂ ನಿರ್ಬಂಧ ಬದಲಾಗುವುದಿಲ್ಲ” ಎಂದು ಹೈಕೋರ್ಟ್‌ ಹೇಳಿದೆ.

“ಶಿವಮೂರ್ತಿ ಮುರುಘಾ ಅವರನ್ನು ಬಿಡುಗಡೆ ಮಾಡುವಂತೆ ಚಿತ್ರದುರ್ಗ ಕಾರಾಗೃಹಕ್ಕೆ ಹೈಕೋರ್ಟ್‌ ಆದೇಶಿಸಿದೆ. ಅದೇಶವನ್ನು ಪರಿಶೀಲಿಸಿ ಬಿಡುಗಡೆ ಮಾಡುವ ಸಾಧ್ಯತೆ ಇದೆ” ಎಂದು ಶಿವಮೂರ್ತಿ ಮುರುಘಾ ಅವರ ವಕೀಲರು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

Download Eedina App Android / iOS

X