ರಾಜ್ಯದಲ್ಲೇ ದಾಖಲೆ ಮುಂಗಾರು ಮಳೆ ಆಗುಂಬೆಯಲ್ಲಿ;ತುಂಗಾ ಜಲಾಶಯ ಭರ್ತಿ

Date:

Advertisements

ಮಲೆನಾಡಿನಲ್ಲಿ ಮುಂಗಾರು ಚುರುಕಾಗಿದೆ. ನದಿ, ಹಳ್ಳ, ಕೆರೆಗಳು ತುಂಬಲಾರಂಭಿಸಿದೆ. ಈಗಾಗಲೇ ತುಂಗ ನದಿ ಜಲಾಶಯ ಭರ್ತಿಯಾಗಿದೆ. ಅದರಂತೆ ಲಿಂಗನಮಕ್ಕಿ ಜಲಾಶಯಕ್ಕೆ ಒಳಹರಿವು ತೀವ್ರಗೊಂಡಿದೆ.

ಕಳೆದ 24 ಗಂಟೆಯಲ್ಲಿ ಆಗುಂಬೆಯಲ್ಲಿ ಅತಿಹೆಚ್ಚಿನ ಮಳೆಯಾಗಿರುವುದು ದಾಖಲಾಗಿದೆ. ಆಗುಂಬೆಯಲ್ಲಿ 184.5 ಮಿಮಿ ಮಳೆಯಾದರೆ, ಶೃಂಗೇರಿಯಲ್ಲಿ 102.02 ಮಿಮಿ, ಹುಂಚದಕಟ್ಟೆ 67 ಮಿಮಿ, ತ್ಯಾಗರ್ತಿ 18.4 ಮಿಮಿ, ಭದ್ರಾವತಿಯಲ್ಲಿ 15.8 ಮಳೆಯಾಗಿದೆ. ಆಗುಂಬೆಯಲ್ಲೆ ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾಗಿದೆ.

ಇದು ಬಿಟ್ಟರೆ ಕೊಡಗಿನ ಭಾಗಮಂಡಲದಲ್ಲಿ 168 .2 ಮಿಮಿ ಮಳೆಯಾಗಿದೆ.ಜಿಲ್ಲೆಯಲ್ಲಿ ಪ್ರಮುಖ ಜಲಾಶಯಗಳಾದ ತುಂಗ, ಭದ್ರ ಮತ್ತು ಲಿಂಗನಮಕ್ಕಿಗಳಿಗೆ ನೀರಿನ ಒಳಹರಿವು ಹೆಚ್ಚಾಗಿದೆ. ತುಂಗ ಜಲಾಶಯ ಭರ್ತಿಯಾಗಿ ನದಿಗೆ ನೀರು ಹರಿಸಲಾಗಿದೆ. 588.24 ಅಡಿ ಜಲಾಶಯದ ಸಾಮರ್ಥ್ಯವಿದ್ದು 588.24 ಅಡಿ ನೀರು ಸಂಗ್ರಹವಾಗಿದೆ.

Advertisements
1001659261

ಭದ್ರದಲ್ಲಿ 186 ಅಡಿ ಸಾಮರ್ಥ್ಯದ ಜಲಾಶಯದಲ್ಲಿ 136 ಅಡಿ ನೀರು ಸಂಗ್ರಹವಾಗಿದೆ. ಲಿಂಗನಮಕ್ಕಿಗೆ 10,900 ಕ್ಯೂಸೆಕ್ ನೀರು ಹರಿದು ಬರುತ್ತಿದೆ.1819 ಅಡಿ ಸಾಮರ್ಥ್ಯ ಲಿಂಗನ ಮಕ್ಕಿಯಲ್ಲಿ ಇಂದು 1764 ಅಡಿ ನೀರು ಸಂಗ್ರಹವಾಗಿದೆ. ಕಳೆದ ವರ್ಷ ಜೂನ್ ಅಂತ್ಯಕ್ಕೆ ಜಲಾಶಯದ ಸಾಮರ್ಥ್ಯ ಇಷ್ಟಿತ್ತೆಂದು ತಿಳಿದುಬಂದಿದೆ.

ಜಲಾನಯನ ಪ್ರದೇಶದಲ್ಲಿ ಹಗಲಿರುಳು ಸುರಿಯುತ್ತಿರುವ ಮಳೆಗೆ ತುಂಗ ನದಿಗೆ ಕಟ್ಟಲಾದ ಗಾಜನೂರು ಜಲಾಶಯ ಭರ್ತಿಯಾಗಿದೆ. ಈಗಾಗಲೇ ಯಾವಕ್ಷಣದಲ್ಲಾದರೂ ಜಲಾಶಯದ ನೀರು ನದಿಗೆ ಹರಿಸುವುದಾಗಿ ಪ್ರಕಟಣೆ ತಿಳಿಸಿದ್ದ ನೀರಾವರಿ ಇಲಾಖೆ, ಈಗ ಪವರ್ ಹೌಸ್ ಮೂಲಕ ನದಿಗೆ ನೀರು ಹರಿಸಲು ನಿರ್ಧರಿಸಲಾಗಿದೆ.

588.24 ಸಾಮರ್ಥ್ಯದ ಜಲಾಶಯ ಮುಂಗಾರು ಪೂರ್ವದಲ್ಲಿಯೇ ಭರ್ತಿಯಾಗಿದೆ. 3.71 ಟಿಎಂಸಿ ನೀರಿನ ಸಾಮರ್ಥ್ಯದ ಜಲಾಶಯಕ್ಜೆ 2000 ಕ್ಯೂ ಸೆಕ್ ನೀರು ಹರಿದು ಬರುತ್ತಿದ್ದು, ಮಧ್ಯಾಹ್ನದ ವೇಳೆಗೆ 800 ಕ್ಯೂಸೆಕ್ ನೀರನ್ನ ಪವರ್ ಹೌಸ್ ನಿಂದ ಹರಿಬಿಡಲಾಗುತ್ತದೆ.‌ 800 ರಿಂದ 5000 ಕ್ಯೂಸೆಕ್ ವರೆಗೂ ಪವರ್ ಹೌಸ್ ಮೂಲಕವೇ ನದಿಗೆ ನೀರು ಹರಿಸಲಾಗುತ್ತದೆ.

ಒಂದು ವೇಳೆ ಒಳಹರಿವು ಹೆಚ್ಚಾದಲ್ಲಿ ಜಲಾಶಯದ ಮುಖ್ಯ ಗೇಟ್ ಗಳನ್ನ ತೆರೆದು ಜಲಾಶಯದಿಂದ ನದಿಗೆ ನೀರು ಹರಿಸಲಾಗುವುದು. ತುಂಗ ಜಲಾಶಯ ರಾಜ್ಯದಲ್ಲಿಯೇ ಅತಿ ಸಣ್ಣ ಜಲಾಶಯವಾಗಿದ್ದು ಮುಂಗಾರು ಪೂರ್ವ ಮಳೆಗೆ ಭರ್ತಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X