ರಾಯಚೂರು | ಅಲ್ಪಸಂಖ್ಯಾತ ಸಂಶೋಧನಾ ವಿದ್ಯಾರ್ಥಿಗಳ ಫೆಲೋಶಿಪ್ ಕಡಿತ; ಎಐಆರ್‌ಎಸ್‌ಒ ಖಂಡನೆ

Date:

Advertisements

ಅಲ್ಪಸಂಖ್ಯಾತರ ಸಮುದಾಯದ ಪಿಎಚ್‌ಡಿ ಮತ್ತು ಎಂಫಿಲ್ ವ್ಯಾಸಂಗ ಮಾಡುವ ಸಂಶೋಧನಾರ್ಥಿಗಳಿಗೆ ಪ್ರತಿ ವರ್ಷ ನೀಡುವ ಫೆಲೋಶಿಪ್ ಹಣ ಕಡಿತಗೊಳಿಸಿದ್ದನ್ನು ಖಂಡಿಸಿ ಅಖಿಲ ಭಾರತ ಕ್ರಾಂತಿಕಾರಿ ವಿದ್ಯಾರ್ಥಿ ಸಂಘಟನೆ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿತು.

2019 ಮತ್ತು 2020ರಲ್ಲಿ ಪಿಎಚ್ ಡಿ ಅಭ್ಯರ್ಥಿಗಳಿಗೆ ಮೂರು ವರ್ಷ ಮತ್ತು ಎಂಫಿಲ್ ಅಭ್ಯರ್ಥಿಗಳಿಗೆ ಎರಡು ವರ್ಷಕ್ಕೆ ಪ್ರತಿ ತಿಂಗಳು 25 ಸಾವಿರ ರೂ.ಗಳನ್ನು ಜೆಆರ್‌ಎಫ್ ಮಾದರಿಯಲ್ಲಿ ನೀಡಲಾಗುತ್ತಿತ್ತು. ಹತ್ತು ಸಾವಿರ ನಿರ್ವಹಣಾ ವೆಚ್ಚವಾಗಿ ಭರಿಸಲಾಗುತ್ತಿತ್ತು. ಆದರೆ, ಈ ಬಾರಿ ಹಿಂದೆ ನೀಡಿದ ಫೆಲೋಶಿಪ್‌ಗಿಂತ ತುಂಬಾ ಕಡಿಮೆ ನೀಡುತ್ತಿರುವುದನ್ನು ಸರ್ಕಾರದ ಆದೇಶದಲ್ಲಿ ನೋಡಬಹುದು.

ಅಂದರೆ, 28.06.2022, 05.08.2022ರ ಆದೇಶದ ಅನ್ವಯ, 2022–23ನೇ ಸಾಲಿನಿಂದ ಜಾರಿಗೆ  ಬರುವಂತೆ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೂರ್ಣಕಾಲಿಕ ಪಿಎಚ್‌ಡಿ ವ್ಯಾಸಂಗ ಮಾಡುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮೂರು ವರ್ಷಗಳ ಅವಧಿಗೆ ಮತ್ತು ಎಂಫಿಲ್ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಎರಡು ವರ್ಷದ ಅವಧಿಗೆ ಒಂದು ಕೋರ್ಸ್ ಗೆ ಒಂದು ಬಾರಿ ಮಾತ್ರ ಪ್ರತಿ ತಿಂಗಳು 10 ಸಾವಿರಗಳನ‌ನು ಜೆಆರ್‌ಎಫ್ ಮಾದರಿಯಲ್ಲಿ ಫೆಲೋಶಿಪ್ ನೀಡಲು ಸರ್ಕಾರ ಆದೇಶಿಸಿದ್ದು ಇದು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಆರ್ಥಿಕ ಹೊರೆಯಾಗಲಿದೆ ಎಂದು ಅವರು ಮನವಿ ಪತ್ರದಲ್ಲಿ ಆರೋಪಿಸಿದ್ದಾರೆ.

Advertisements

ಈ ಮೊದಲು ನೀಡುತ್ತಿದ್ದ 25 ಸಾವಿರ ಅಭ್ಯರ್ಥಿಗಳಿಗೆ ಸಾಕಾಗುತ್ತಿರಲಿಲ್ಲ. ಅಂಥದರಲ್ಲಿ ಎರಡು ವರ್ಷಗಳಿಗೆ 10 ಸಾವಿರ ನೀಡುತ್ತಿರುವುದು ಸರಿಯಲ್ಲ. ಕಾಂಗ್ರೆಸ್ ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದು ಮಾದರಿಯಾಗಿದೆ. ಆದರೆ, ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಬದಲು ಅನುದಾನ ಕಡಿತಗೊಳಿಸುತ್ತಿರುವುದು ಸಮರ್ಥನೀಯವಲ್ಲ.

ಕಳೆದ ವಿಧಾನಸಭಾ ಚುನಾವನೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಅಲ್ಪಸಂಖ್ಯಾತರು ಅದರಲ್ಲಿ ಮುಸ್ಲಿಮರೇ ನಿರ್ಣಯಕ ಪಾತ್ರ ವಹಿಸಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ದನ್ನು ರಾಜ್ಯದ ಜನರಿಗೆ ಗೊತ್ತಿರುವಂತಹದ್ದು ಈ ನಿಟ್ಟಿನಲ್ಲಿ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಈ ಹಿಂದೆ ನೀಡುತ್ತಿದ್ದ 25 ಸಾವಿರ ನೀಡುತ್ತಿದ್ದ ಮೊತ್ತ 30 ಸಾವಿರ ಹೆಚ್ಚಿಸಿ ನಿರ್ವಾಹಣ ವೆಚ್ಚ 10 ಸಾವಿರ ನೀಡಬೇಕು ಎಂದು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಅಜೀಜ್ ಜಾಗೀರ್ದಾರ್, ಜಿ ಅಂಬರೀಶ್, ನಿರಂಜನ್ ಕುಮಾರ್, ವೆಂಕಟೇಶ್, ವಿನಯ್ ಕುಮಾರ್, ಲಕ್ಷ್ಮಣ್ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X