ರೈತರಿಗೆ ನೀಡುವ ಹಾಲಿನ ದರದಲ್ಲಿ 1.5 ರೂ. ಕಡಿತ

Date:

Advertisements

ಒಕ್ಕೂಟವು ನಷ್ಟದಲ್ಲಿದೆ ಎಂಬ ಕಾರಣ ನೀಡಿ ಹಾಲು ಉತ್ಪಾದನೆ ಮಾಡುವ ರೈತರು ಮತ್ತು ಹೈನುಕಾರಿಕೆ ನಡೆಸುವವರಿಗೆ ನೀಡುವ ಹಾಲಿನ ದರದಲ್ಲಿ 1.5 ರೂ.ಗಳನ್ನು ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (RBKMUL) ಕಡಿತಗೊಳಿಸಿದೆ. ಈಗಾಗಲೇ, ಜಾನುವಾರುಗಳಿಗೆ ಮೇವು, ಇಂಡಿ-ಬೂಸಾಗಳಂತಹ ಪಶು ಆಹಾರ ದರ ಹೆಚ್ಚಾಗಿದ್ದು, ಅದಕ್ಕಾಗಿಯೇ ಸಾಕಷ್ಟು ಖರ್ಚು ಮಾಡುತ್ತಿರುವ ರೈತರನ್ನು ಬೆಲೆ ಕಡಿತವು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ.

ರೈತರು ಮತ್ತು ಹೈನುಗಾರಿಕೆ ನಡೆಸುವವರಿಂದ ಪ್ರತಿ ಲೀಟರ್ ಹಾಲಿಗೆ 30.50 ರೂ.ಗಳನ್ನು ನೀಡಿ ಒಕ್ಕೂಟವು ಹಾಲು ಖರೀದಿ ಮಾಡುತ್ತಿತ್ತು. ಆದರೆ, ಈಗ 1.5 ರೂ. ಕಡಿಮೆ ಮಾಡಲಾಗಿದ್ದು, ರೈತರಿಗೆ ಪ್ರತಿ ಲೀಟರ್ ಹಾಲಿಗೆ 29 ರೂ. ನಿಗದಿ ಮಾಡಲಾಗಿದೆ. ಬೆಲೆ ಕಡಿತ ಮಾಡಿರುವ ಒಕ್ಕೂಟದ ವಿರುದ್ಧ ನಾಲ್ಕು ಜಿಲ್ಲೆಗಳ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದರ ಕಡಿತ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.

ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಲು ಒಕ್ಕೂಟವು ನಾಲ್ಕೂ ಜಿಲ್ಲೆಗಳಿಂದ ನಿತ್ಯ 2.30 ಲಕ್ಷ ಲೀಟರ್ ಹಾಲು ಖರೀದಿ ಮಾಡುತ್ತಿದೆ. ಈ ಪೈಕಿ, ಹಾಲು, ಮೊಸರು, ಮಜ್ಜಿಗೆಯಂತೆ 1.60 ಲಕ್ಷ ಲೀಟರ್​ ಮಾತ್ರ ಮಾರಾಟವಾಗುತ್ತಿದೆ. ಉಳಿದ 60 ರಿಂದ 70 ಸಾವಿರ ಲೀಟರ್ ಹಾಲನ್ನು ಹಾಲಿನ ಪುಡಿ ತಯಾರಿಕೆಗೆ ಬಳಸಲಾಗುತ್ತಿದೆ. ಆದರೆ, ಹಾಲಿನ ಪುಡಿಗೆ ವಿಶ್ವ ಮಾರುಕಟ್ಟೆಯಲ್ಲಿ 85 ರೂ. ಮಾತ್ರವೇ ಇದೆ. ಹೀಗಾಗಿ, ಒಕ್ಕೂಟ ನಷ್ಟದಲ್ಲಿದೆ. ನಷ್ಟವನ್ನು ಸರಿದೂಗಿಸಲು ದರ ಕಡಿತಗೊಳಿಸಬೇಕಾಗಿದೆ. ಇದು ಅನಿವಾರ್ಯ ಎಂದು ಒಕ್ಕೂಟ ಹೇಳಿದೆ.

Advertisements

ಪಶು ಆಹಾರದ ಬೆಲೆ ನಿರಂತರವಾಗಿ ಹೆಚ್ಚಾಗುತ್ತಲೇ ಇದೆ. ಒಕ್ಕೂಟಗಳು ಗ್ರಾಹಕರಿಗೆ ನೀಡುವ ಹಾಲಿನ ದರವನ್ನೂ ಹೆಚ್ಚಿಸುತ್ತಲೇ ಇವೆ. ಆದರೂ, ರೈತರಿಂದ ಖರೀದಿಸುವ ಹಾಲಿನ ಬೆಲೆಯನ್ನು ಕಡಿತ ಮಾಡಿರುವುದು ರೈತ ವಿರೋಧಿ ನಡೆಯಾಗಿದೆ. ಒಕ್ಕೂಟವನ್ನು ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X