ಬಂಧಿತ ಮಹಿಳಾ ಕುಸ್ತಿಪಟುಗಳನ್ನು ತಕ್ಷಣ ಬಿಡುಗಡೆ ಮಾಡಿ, ನ್ಯಾಯ ಒದಗಿಸಿ: ಸಿಎಂ ಸಿದ್ದರಾಮಯ್ಯ ಆಗ್ರಹ

Date:

ಲೈಂಗಿಕ ದೌರ್ಜನ್ಯ ಎಸಗಿರುವ ಭಾರತ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೋರಾಡುತ್ತಿರುವ ಮಹಿಳಾ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿ ದೌರ್ಜನ್ಯ ಎಸಗಿರುವುದು ಖಂಡನೀಯ. ತಕ್ಷಣ ಬಂಧಿತ ಮಹಿಳಾ ಕುಸ್ತಿಪಟುಗಳನ್ನು ಬಿಡುಗಡೆಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಕರಿತು ಟ್ವೀಟ್‌ ಮಾಡಿರುವ ಅವರು, “ನೂತನ ಸಂಸತ್ ಭವನದ ಉದ್ಘಾಟನೆಯನ್ನು ಪ್ರಜಾಪ್ರಭುತ್ವದ ಹಬ್ಬ ಎಂಬಂತೆ ಸಂಭ್ರಮಿಸುತ್ತಿರುವ ನರೇಂದ್ರ ಮೋದಿ ಸರ್ಕಾರ, ಅಲ್ಲಿಂದ ಕೂಗಳತೆಯ ದೂರದಲ್ಲಿ ಧರಣಿ ನಡೆಸುತ್ತಿರುವ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆಯ ಪ್ರಜಾಸತ್ತಾತ್ಮಕ ಹಕ್ಕನ್ನು ಪೊಲೀಸರ ಮೂಲಕ ಹತ್ತಿಕ್ಕಲು ಹೊರಟಿರುವುದು ಆತ್ಮವಂಚನಾ ನಡವಳಿಕೆಯ ಪ್ರತೀಕ” ಎಂದು ಟೀಕಿಸಿದ್ದಾರೆ.

“ಕೇಂದ್ರ ಸರ್ಕಾರ ತಕ್ಷಣ ಲೈಂಗಿಕ ದೌರ್ಜನ್ಯದ ಆರೋಪಕ್ಕೊಳಗಾಗಿರುವ ಭಾರತೀಯ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಸಿಂಗ್ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಿ, ನೊಂದ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಭ್ರಷ್ಟಾಚಾರ ಲೀಗಲೈಜ್ ಮಾಡಿದ್ದೇ ಬಿಜೆಪಿ: ಕಂದಾಯ ಸಚಿವ ಕೃಷ್ಣ ಭೈರೇಗೌಡ ಕಿಡಿ

ಭ್ರಷ್ಟಾಚಾರವನ್ನು ಲೀಗಲೈಜ್ ಮಾಡಿದ್ದು, ಬಿಜೆಪಿಯವರು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ...

ತುಮಕೂರು | ಪ್ರಧಾನಿ ಆಗಲು ಯೋಗ್ಯರಾದ ಸಾಕಷ್ಟು ಮುಖಂಡರು ಕಾಂಗ್ರೆಸ್‌ನಲ್ಲಿ ಇದ್ದಾರೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ನಲ್ಲಿ ಪ್ರಧಾನಿಯಾಗಲು ಯಾರಿದ್ದಾರೆ? ನರೇಂದ್ರಮೋದಿ ಬಿಟ್ಟರೆ ಪ್ರಧಾನಿ ಆಗುವ ಅರ್ಹತೆ ಯಾರಿಗೂ...

ಹಾಸನ ಯುವ ನಾಯಕನ ಕಾಮಕೃತ್ಯದ ಪೆನ್‌ಡ್ರೈವ್ ಆರೋಪ; ಮೌನ ಮುರಿಯದ ಮಾಜಿ ಪ್ರಧಾನಿ

ಕಳೆದ ನಾಲ್ಕೈದು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ಪೆನ್‌ಡ್ರೈವ್ ಭಾರೀ ಸುದ್ದಿ ಮಾಡ್ತಾ...

ಕಾಂಗ್ರೆಸ್ ಪಕ್ಷ ಬೆಂಬಲಿಸಲು ಪಿಟಿಸಿಎಲ್ ಹೋರಾಟ ಸಮಿತಿ ನಿರ್ಧಾರ

ಬೆಂಗಳೂರು: ದಲಿತರು, ಸಂವಿಧಾನ ವಿರೋಧಿ, ಸಾಂವಿಧಾನಿಕ ಸಂಸ್ಥೆಗಳ ಮೇಲೆ ಪ್ರಭಾವ ಬೀರಿ...