ಮಳೆಯ ಅಬ್ಬರ; ಟೊಮೆಟೊ ಬೆಲೆ ಮತ್ತಷ್ಟು ಏರಿಕೆ!

Date:

Advertisements

ಇತ್ತೀಚಿನ ದಿನಗಳಲ್ಲಿ, ಬೆಂಗಳೂರಿನ ಬೀದಿ ಬದಿ ಮತ್ತು ತಳ್ಳುಗಾಡಿ ತರಕಾರಿ ವ್ಯಾಪಾರಿಗಳು ಟೊಮೆಟೊ ಮಾರಾಟದ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ತಮ್ಮ ಜೀವನ ನಿರ್ವಹಣೆಗೆ ಒಂದಷ್ಟು ದುಡ್ಡು ನೋಡಲು ಟೊಮೆಟೊ ಬೆಲೆ ನೆರವಾಗುತ್ತಿದೆ ಎಂಬು ಅವರು ಭಾವಿಸಿದ್ದಾರೆ. ಕಳೆದ ವಾರ 110ರಿಂದ 120 ರೂ.ಗೆ ಮಾರಾಟವಾಗುತ್ತಿದ್ದ ಟೊಮೆಟೊ, ಈ ವಾರ 140 ರೂ.ಗೆ ಏರಿಕೆಯಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ, ಟೊಮೆಟೊ ಬೆಲೆ ಮತ್ತಷ್ಟು ಏರಿಕೆಯಾಗಿದೆ ಎಂದು ತರಕಾರಿ ಮಾರಾಟಗಾರರು ಮತ್ತು ಕೃಷಿ ಮಾರುಕಟ್ಟೆ ಅಧಿಕಾರಿಗಳು ಹೇಳುತ್ತಿದ್ದಾರೆ.

ನಿರಂತರ ಮಳೆಯಿಂದಾಗಿ ಮೆಟೊಮೆ ಹೂವು ಮತ್ತು ಕಾಯಿಗಳ ಉದುರುತ್ತಿವೆ. ಜೊತೆಗೆ, ಕೊಯ್ಲು ಕೂಡ ಕಷ್ಟಕರವಾಗಿದೆ. ಈಗಾಗಲೇ ಟೊಮೆಟೊ ಬೇಡಿಕೆ ತಕ್ಕಂತೆ ಪೂರೈಕೆ ಇಲ್ಲವಾಗಿದ್ದು, ಈಗ ಪೂರೈಕೆ ಮತ್ತಷ್ಟು ಕಡಿಮೆಯಾಗಿದೆ. ಪರಿಣಾಮವಾಗಿ ಟೊಮೆಟೊ ಬೆಲೆಯಲ್ಲಿ ಮತ್ತೆ ಏರಿಕೆಯಾಗುತ್ತಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.

“ಕಳೆದ ಒಂದು ತಿಂಗಳಿನಿಂದ ಕೋಲಾರ ಎಪಿಎಂಸಿಯಲ್ಲಿ 15 ಕೆ.ಜಿ ಟೊಮೆಟೊ ಬಾಕ್ಸ್‌ 2,000 ರೂ.ಗೆ ಮಾರಾಟವಾಗುತ್ತಿತ್ತು. ಕಳೆದ ವಾರ, ಬೆಲೆ ಇಳಿಕೆಯಾಗಿ, 1,400-1,900 ರೂಗೆ ಮಾರಾಟವಾಗಿತ್ತು. ಇದೀಗ, ಮತ್ತೆ 2,100 ರೂ.ಗೆ ಏರಿಕೆಯಾಗಿದೆ” ಎಂದು ಟೊಮೆಟೊ ಮಂಡಿಯಲ್ಲಿ ಹರಾಜು ನಡೆಸುವ ಹರೀಶ್‌ ಹೇಳಿದ್ದಾರೆ.

Advertisements

“ಬೆಂಗಳೂರು ಎಪಿಎಂಸಿಗೆ ಬೆಂಗಳೂರು ಗ್ರಾಮಾಂತರದಿಂದ ಟೊಮೆಟೊ ಬರುತ್ತಿದ್ದು, ಪ್ರತಿ ಕೆಜಿ ಟೊಮೆಟೊ ದರ 84-92 ರೂ. ಇದೆ. ಕೋಲಾರದಿಂದ ಬರುತ್ತಿರುವ ಟೊಮೇಟೊ ಬೆಲೆ ಜಾಸ್ತಿಯಾಗಿದೆ. ಆ ಜಿಲ್ಲೆಯಲ್ಲಿ ಮಳೆಯಾಗುತ್ತಿರುವುದರಿಂದ ಬೆಲೆ ಏರಿಕೆಯಾಗಿದೆ. ಬೆಂಗಳೂರು ನಗರಕ್ಕೆ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕುಣಿಗಲ್, ರಾಮನಗರ, ಆನೇಕಲ್ ಮತ್ತು ಕನಕಪುರದಿಂದ ಟೊಮೆಟೊ ಪೂರೈಕೆಯಾಗುತ್ತಿದೆ. ಈ ಎಲ್ಲ ಕಡೆ ಎಡಬಿಡದೆ ಮಳೆಯಾಗುತ್ತಿದ್ದು, ಕಟಾವು ಕಷ್ಟಕರವಾಗಿದೆ. ಜೊತೆಗೆ, ಸಾಗಾಣಿಕೆಯೂ ವಿಳಂಬವಾಗುತ್ತಿದೆ” ಎಂದು ಬಿನ್ನಿಪೇಟೆ ಎಪಿಎಂಸಿ ಕಾರ್ಯದರ್ಶಿ ರಾಜಣ್ಣ ತಿಳಿಸಿದ್ದಾರೆ.

ಕರ್ನಾಟಕ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ಮಾರುಕಟ್ಟೆ ದರದಲ್ಲಿ ಟೊಮೆಟೊಗಳನ್ನು ಖರೀದಿಸಲು ಮತ್ತು ಬೇಡಿಕೆಯನ್ನು ನಿರ್ವಹಿಸಲು ಉತ್ತರ ಭಾರತದ ನಗರಗಳಿಗೆ ಟೊಮೆಟೊ ರಫ್ತು ಮಾಡಲು ಕೇಂದ್ರ ಸರ್ಕಾರವು ಆದೇಶಿಸಿದೆ ಎಂದು ಕೃಷಿ ಮಾರುಕಟ್ಟೆ ಇಲಾಖೆಯ ಮೂಲಗಳು ತಿಳಿಸಿವೆ.

“ಟೊಮೆಟೊಗಳನ್ನು ದಕ್ಷಿಣದ ರಾಜ್ಯಗಳಿಂದ ಖರೀದಿಸಿದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ ಮತ್ತು ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟದಿಂದ 30% ರಿಯಾಯಿತಿಯಲ್ಲಿ ಉತ್ತರದ ರಾಜ್ಯಗಳಿಗೆ ಮಾರಾಟ ಮಾಡಲಾಗುತ್ತಿದೆ. ಆದರೆ, ಕರ್ನಾಟಕದಲ್ಲಿ ಬೆಲೆ ಏರಿಳಿತವನ್ನು ನಿಯಂತ್ರಿಸಲು ಇದುವರೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ” ಎಂದು ತಿಳಿದುಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X