ಉಡುಪಿ | ಮಳೆಯಿಂದ ಹಾಳಾದ ರಸ್ತೆಯ ದುರಸ್ಥಿ ಕಾರ್ಯಗಳನ್ನು ತ್ವರಿತವಾಗಿ ಮಾಡಿಕೊಡಿ – ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ

Date:

ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ಹಾಳಾದ ರಸ್ತೆಯ ದುರಸ್ಥಿ ಕಾರ್ಯಗಳನ್ನು ತ್ವರಿತವಾಗಿ ಮಾಡುವುದರೊಂದಿಗೆ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಕಾರ್ಮಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

- Advertisement -

ಹವಾಮಾನ ಇಲಾಖೆಯಿಂದ ಪ್ರತಿದಿನ ನೀಡುವ ಹವಾಮಾನ ಮುನ್ಸೂಚನೆಯ ಮಾಹಿತಿಯನ್ನು ಸಾರ್ವಜನಿಕರಿಗೆ ಹಾಗೂ ವಿಶೇಷವಾಗಿ ಮೀನುಗಾರಿಕೆಗೆ ತೆರಳುವ ಮೀನುಗಾರರುಗಳಿಗೆ ಒದಗಿಸಬೇಕು. ಮೀನುಗಾರರು ಸಮುದ್ರದಲ್ಲಿ ಮೀನುಗಾರಿಕೆ ಚಟುವಟಿಕೆಗಳಿಗೆ ಹೋಗುವಾಗ ಕಡ್ಡಾಯವಾಗಿ ಲೈಫ್ ಜಾಕೆಟ್‌ಗಳನ್ನು ಬಳಸುವಂತೆ ಮನವೊಲಿಸಬೇಕು. ಸಮುದ್ರದಲ್ಲಿ ಪ್ರಕ್ಷಬ್ಧ ವಾತಾವರಣವಿದ್ದಲ್ಲಿ ಮೀನುಗಾರಿಕೆಗೆ ಹೋಗದಂತೆ ಎಚ್ಚರವಹಿಸಬೇಕು ಎಂದರು.
ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ಬಂದರಿನ ವಿಸ್ತರಣೆಗೆ ಯೋಜನೆಯನ್ನು ರೂಪಿಸಬೇಕು. ನೂತನ ಹೆಜಮಾಡಿ ಬಂದರಿನಲ್ಲಿ ಮೀನುಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...
Reveiw meeting 1

ಕರಾವಳಿ ಭಾಗಗಳಲ್ಲಿ ಕಡಲಕೊರೆತ ಪ್ರತಿ ವರ್ಷವೂ ಉಂಟಾಗುತ್ತಿದೆ. ಇವುಗಳ ತಡೆಗೆ ಶಾಶ್ವತ ವೈಜ್ಞಾನಿಕ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಮುಂದಾಗಬೇಕು. ಮಳೆಯಿಂದ ಭತ್ತದ ಬೆಳೆ ಹಾಗೂ ತೋಟಗಾರಿಕೆ ಹಾನಿಗಳನ್ನು ನಿಖರವಾಗಿ ಗುರುತಿಸಿ, ರೈತರಿಗೆ ಪರಿಹಾರವನ್ನು ಒದಗಿಸಬೇಕು ಎಂದರು. ಈಗಾಗಲೇ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕೈಗೊಂಡಿರುವ ಕಾಲುಸಂಕ ನಿರ್ಮಾಣ ಕಾಮಗಾರಿಗಳನ್ನು ಮಳೆ ಕಡಿಮೆಯಾದ ಕೂಡಲೇ ಪುನರಾರಂಭಿಸಿ, ತ್ವರಿತವಾಗಿ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದರು. ಜಿಲ್ಲೆಯಲ್ಲಿ ಸಾರ್ವಜನಿಕರು ನೂತನ ಕಟ್ಟಡ ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯವಿರುವ 9/11 ಎ ದಾಖಲೆಗಳನ್ನು ಪಡೆಯಲು
ಕೆಲವು ನಿಯಮಾವಳಿಗಳಿಂದ ತೊಂದರೆ ಉಂಟಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿವೆ. ನಿಯಮಾವಳಿಯಲ್ಲಿ ಕೆಲವೊಂದು ವಿನಾಯಿತಿ ನೀಡಿದ್ದಲ್ಲಿ ಸಮಸ್ಯೆಗಳು ಪರಿಹರಿಸಬಹುದಾಗಿದೆ. ಈ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆಯನ್ನು ಕೂಡಲೇ ಕಳುಹಿಸಿ ಎಂದರು. ಜಲಜೀವನ್ ಮಿಷನ್ ಅಡಿಯಲ್ಲಿ ಗ್ರಾಮಪಂಚಾಯತಿ ವ್ಯಾಪ್ತಿಯ ಮನೆಮನೆಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ 525 ನಳ ಸಂಪರ್ಕ ಕಾಮಗಾರಿಗಳಲ್ಲಿ 487 ಪೂರ್ಣಗೊಳಿಸಲಾಗಿದೆ. ಪ್ರಗತಿಯಲ್ಲಿರುವ 38 ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದರು.

ಸಭೆಯಲ್ಲಿ ಸಂಸದ ಕೋಟಾ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...