ರೋಹಿಣಿ V/S ರೂಪಾ | ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ನ್ಯಾಯಮೂರ್ತಿ

Date:

Advertisements

ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ರದ್ದುಡಿಸುವಂತೆ ಕೋರಿ ಎಪಿಎಸ್‌ ಅಧಿಕಾರಿ ಡಿ ರೂಪಾ ಮೌದ್ಗಿಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲು ಹೈಕೋರ್ಟ್‌ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಹಿಂದೆ ಸರಿದಿದ್ದಾರೆ.

ಕಳೆದ ಫೆಬ್ರವರಿಯಲ್ಲಿ ಡಿ ರೂಪ ಅವರು ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಹಲವಾರು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು, ಅವಹೇಳನಕಾರಿಯಾಗಿ ಬರೆದುಕೊಂಡಿದ್ದರು. ಬಳಿಕ, ಸಿಂಧೂರಿ ವಿರುದ್ಧ ಮಾಧ್ಯಮಗಳ ಮೂಲಕ ಹಲವು ಆರೋಪ ಮಾಡಿದ್ದರು.

ಡಿ ರೂಪ ಅವರ ಆರೋಪಿಗಳು ತಮ್ಮ ತೇಜೋವಧೆ ಮಾಡಿವೆ ಎಂದು ರೋಹಿಣಿ ಸಿಂಧೂರಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. “ಡಿ ರೂಪಾ ಅವರ ಪೋಸ್ಟ್ ಮತ್ತು ಹೇಳಿಕೆಗಳು ನನ್ನ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಜೀವನದ ಮೇಲೆ ಪರಿಣಾಮ ಬೀರಿವೆ. ನಾನು ಮಾನಸಿಕವಾಗಿ ಯಾತನೆ ಪಡುವಂತಾಗಿದೆ. ಡಿ ರೂಪ ಅವರು ಪರಿಹಾರವಾಗಿ ಒಂದು ಕೋಟಿ ರೂ. ನೀಡುವಂತೆ ಆದೇಶಿಸಬೇಕು ಮತ್ತು ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಕೋರ್ಟ್‌ನಲ್ಲಿ ಮನವಿ ಮಾಡಿದ್ದರು.

Advertisements

ಈ ಸುದ್ದಿ ಓದಿದ್ದೀರಾ?: ಜನರ ಸಮಸ್ಯೆಗೆ ಅಧಿಕಾರಿಗಳಿಂದ ಉಡಾಫೆ ಸಲ್ಲದು: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಸಿಂಧೂರಿ ದಾಖಲಿಸಿರುವ ಖಾಸಗಿ ದೂರನ್ನು ವಜಾಗೊಳಿಸಬೇಕೆಂದು ಡಿ ರೂಪ ಕೂಡ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ, ಅವರ ಅರ್ಜಿಯ ವಿಚಾರಣೆ ನಡೆಸಲು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಹಿಂದೆ ಸರಿಸಿದ್ದಾರೆ.

“ತಾವು ವಕೀಲರಾಗಿದ್ದಾಗ ರೋಹಿಣಿ ಸಿಂಧೂರಿ ಅವರ ಪರವಾಗಿ ಪ್ರಕರಣ ಒಂದರಲ್ಲಿ ವಾದಿಸಿದ್ದೆ. ಹಾಗಾಗಿ, ಈ ಪ್ರಕರಣದ ವಿಚಾರಣೆಯನ್ನು ನಾನು ನಡೆಸುದಿಲ್ಲ” ಎಂದು ನ್ಯಾಯಮೂರ್ತಿ ಹೇಳಿದ್ದಾರೆ. ಬೇರೊಂದು ಪೀಠಕ್ಕೆ ವರ್ಗಾಯಿಸುವಂತೆ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X