ಮಂಡ್ಯ | ರೋಟರಿ ಕ್ಲಬ್‌ಗಳು ಸಮಾಜಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿದೆ: ಶ್ರೀನಿವಾಸ್ ಮೂರ್ತಿ

Date:

Advertisements

ಪ್ರತಿಯೊಂದು ರೋಟರಿ ಕ್ಲಬ್‌ಗಳು ಸಮಾಜಕ್ಕೆ ಒಂದಲ್ಲ ಒಂದು ರೀತಿ ಕೊಡುಗೆ ನೀಡುತ್ತಾ ಬಂದಿದ್ದು, ಈ ಸೇವಾ ಮನೋಭಾವನೆಯನ್ನು ನೋಡಿ ಹೊಸ ಸದಸ್ಯರುಗಳು ಸೇರ್ಪಡೆಗೊಳ್ಳುತ್ತಿರುವುದು ರೋಟರಿ ಸಂಸ್ಥೆಯ ಗೌರವ ಹೆಚ್ಚಿದೆ ಎಂದು ರೋಟರಿ ಪ್ರಥಮ ಜಿಲ್ಲಾ ಪಾಲಕ ಶ್ರೀನಿವಾಸ್ ಮೂರ್ತಿ ಶ್ಲಾಘಿಸಿದರು.

ಖಾಸಗಿ ಹೋಟೆಲ್‌ನಲ್ಲಿ ರೋಟರಿ ಸಕ್ಕರೆ ನಾಡು ಮಂಡ್ಯ 3192 ವತಿಯಿಂದ ಆಯೋಜಿಸಿದ್ದ 2024–25ನೇ ಸಾಲಿನ ಪದವಿ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಸೇವಾ ಮನೋಭಾವ ಎಂಬುದು ಹೆಚ್ಚಬೇಕಿದೆ. ಅದೇ ರೀತಿ ರೋಟರಿ ಕ್ಲಬ್‌ಗಳಲ್ಲಿ ಸದಸ್ಯತ್ವ ಹೊಂದುವ ಮೂಲಕ ಜನರ ಸಮಸ್ಯೆಗಳಿಗೆ ದನಿಯಾಗಿ ಕೆಲಸ ಮಾಡಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಸಾಗೋಣ ಎಂದು ಮನವಿ ಮಾಡಿದರು.

Advertisements

ರೋಟರಿ ಸಕ್ಕರೆ ನಾಡು 2024-25ನೇ ಸಾಲಿನ ಅಧ್ಯಕ್ಷರಾಗಿ ಎ.ಪಿ.ಸತೀಶ್ ಪದವಿ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಸರ್ಕಾರಿ ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ಶಬ್ಧಕೋಶ ಪುಸ್ತಕಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ರೋಟರಿ ಜಿಲ್ಲಾ ಕಾರ್ಯದರ್ಶಿಗಳಾದ ಕುಮಾರಸ್ವಾಮಿ, ಬಿಳಿಗೆರೆ ಶಿವಕುಮಾರ್, ವಲಯ ಪಾಲಕ ಪ್ರಶಾಂತ್, ಸಹ ಪಾಲಕ ಬರ್ನಾಡಪ್ಪ, ಯೂತ್ ಸರ್ವಿಸ್ ಕೆ.ಎಸ್.ಶ್ರೀಧರ್ ಭಾಗವಹಿಸಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X