ಧಾರವಾಡ-ಹುಬ್ಬಳ್ಳಿ | ಚೌತಿ, ಮೀಲಾದುನ್ನಬಿ: ರೌಡಿಶೀಟರ್‌ಗಳ ಪರೇಡ್ ನಡೆಸಿದ ಕಮಿಷನರ್ ಶಶಿಕುಮಾರ್

Date:

ಹುಬ್ಬಳ್ಳಿ ಧಾರವಾಡ ನಗರ ವ್ಯಾಪ್ತಿಯಲ್ಲಿ ಮುಂಬರುವ ಗಣೇಶ ಚತುರ್ಥಿ ಮತ್ತು ಮೀಲಾದುನ್ನಬಿ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಸಾರ್ವಜನಿಕರ ಶಾಂತಿ, ಸುರಕ್ಷತೆ ಮತ್ತು ಭದ್ರತೆ ಸೇರಿದಂತೆ ಕಾನೂನು ವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಮಿಷನರೇಟ್ ವ್ಯಾಪ್ತಿಯ ಎಲ್ಲ ಪೊಲೀಸ್‌ ಠಾಣೆಗಳಲ್ಲಿ ರೌಡಿಶೀಟರ್‌ಗಳ ಪರೇಡ್‌ ನಡೆಯಿತು.

- Advertisement -

ಪೊಲೀಸ್ ಆಯುಕ್ತ ಎನ್ ಶಶಿಕುಮಾರ್, ಎಲ್ಲ ಪೊಲಿಸ್ ಠಾಣೆಗಳ ರೌಡಿಶೀಟರ್‌ಗಳ ಪರೇಡ್ ನಡೆಸಿ ಮುಂಬರುವ ಗಣೇಶ ಚತುರ್ಥಿ ಹಾಗೂ ಮೀಲಾದುನ್ನಬಿ ಹಬ್ಬದಲ್ಲಿ ಶಾಂತಿ ಸುರಕ್ಷತೆ ಉಂಟು ಮಾಡುವ ಉದ್ದೇಶದಿಂದ ಶಾಂತಿ ಕದಡದಂತೆ ರೌಡಿಶೀಟರ್‌ಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಸಮರ: ಕಕ್ಷೆಯಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ...

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ ದಿನಗಳಲ್ಲಿ ಸಂಪರ್ಕ, ಹವಾಮಾನ ಮುನ್ಸೂಚನೆ, ವಿಮಾನ ಮತ್ತು ಹಡಗುಗಳ ಜಿಪಿಎಸ್ (GPS), ತುರ್ತು ಸೇವೆಗಳು ಮತ್ತು ಆರ್ಥಿಕ ಜಾಲಗಳು ಸಂಪೂರ್ಣವಾಗಿ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...
WhatsApp Image 2024 09 02 at 4.26.51 PM

ಈ ಪರೇಡ್‌ನಲ್ಲಿ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಒಟ್ಟು 862 ಜನ ರೌಡಿಶೀಟರ್ ಹಾಜರಾಗಿದ್ದರು ಮತ್ತು ಒಟ್ಟು 8 ರೌಡಿಶೀಟರ್ ಗಳನ್ನು ಈಗಾಗಲೇ ಗಡಿಪಾರು ಮಾಡಲಾಗಿದೆ. 295 ರೌಡಿಶೀಟರ್‌ಗಳ ವಿರುದ್ಧ ಮುಚ್ಚಳಿಕೆ ಪತ್ರ ಬರೆಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗಿದೆ.

15 ಜನ ರೌಡಿಶೀಟರ್‌ಗಳ ವಾರೆಂಟ್ ಇರುತ್ತವೆ. ಈಗಾಗಲೇ ಎಲ್ಲ ರೌಡಿಶೀಟರ್‌ಗಳ ಮೇಲೆ ನಿಗಾ ವಹಿಸಿದ್ದು ಸಾರ್ವಜನಿಕರ ಶಾಂತಿ ನೆಮ್ಮದಿ ಮತ್ತು ಕಾನೂನು ಸುವ್ಯವಸ್ಥೆ ಹಾಳು ಮಾಡುವಂತಹ ಯಾವುದೇ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.

ಇದನ್ನು ಓದಿದ್ದೀರಾ? ಹಾಸನ | ಲಂಚ ಪಡೆದಿದ್ದ ಅಪರಾಧ ಸಾಬೀತು: ಸರ್ಕಾರಿ ಕೆಲಸದಿಂದ ಉಪ ನೋಂದಣಾಧಿಕಾರಿ ವಜಾ

ಒಂದು ವೇಳೆ ಅಂತಹ ಚಟುವಟಿಕೆಗಳಲ್ಲಿ ತೊಡಗಿದ್ದರ ಬಗ್ಗೆ ಕಂಡುಬಂದಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ರೌಡಿಸಂ ಚಟುವಟಿಕೆಗಳನ್ನು ಬಿಟ್ಟು ಮುಖ್ಯವಾಹಿನಿಗೆ ಬಂದು ಸುಧಾರಣೆ ಆಗುತ್ತೇವೆಂದು ಮನವಿ ನೀಡಿದವರ ಬಗ್ಗೆ ಪರಿಶೀಲನೆ‌ ಮಾಡುತ್ತೇವೆ ಎಂದು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಕುಮಧ್ವತಿ ನದಿಯ ನೀರು ಸಂಗ್ರಹಿಸಲು ರೈತರು ಪ್ರತಿಭಟನೆ

"ಕುಮಧ್ವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಕಂ ಬ್ಯಾರೇಜ್‌ಗಳಿಗೆ ಬರಗಾಲದ ಹಿನ್ನೆಲೆಯಲ್ಲಿ...

ಉತ್ತರ ಕನ್ನಡ | ಎಸ್‌ಐಆರ್‌: 65,248 ನೋಟಿಸ್‌; 18,904 ಪ್ರಕರಣಗಳ ವಿಚಾರಣೆ ಪೂರ್ಣ

ಉತ್ತರ ಕನ್ನಡ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026ರ ಭಾಗವಾಗಿ...

ಬಾಗಲಕೋಟೆ | ಕುರಿ ಸಂಗೋಪನೆ ಸಂಘಗಳಿಗೂ ಶೂನ್ಯ ಬಡ್ಡಿದರ ಸಾಲಕ್ಕೆ ಆಗ್ರಹ

ಕುರಿ ಸಂಗೋಪನೆ ಹಾಗೂ ಉಣ್ಣೆ ಉತ್ಪಾದಕ ಸಹಕಾರ ಸಂಘಗಳಿಗೆ ಸಾಲ ಸೇರಿದಂತೆ...

ರಾಯಚೂರು | ಅವ್ಯವಹಾರ ದೂರು ನೀಡಿದ್ದಕ್ಕೆ ಡಿಡಿಪಿಐ ಬೆದರಿಕೆ: ಚನ್ನಬಸವ ಅರೋಲಿ ಆರೋಪ

ಮಾನ್ವಿ ತಾಲೂಕಿನ ಅರೋಲಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ...