ಮಂಗಳೂರು | ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ: 5ಕ್ಕೂ ಹೆಚ್ಚು ಆರೋಪಿಗಳು ಪೊಲೀಸ್ ವಶಕ್ಕೆ?

Date:

Advertisements

ಮಂಗಳೂರು ನಗರದ ಬಜಪೆಯಲ್ಲಿ ಗುರುವಾರ ರಾತ್ರಿ ದುಷ್ಕರ್ಮಿಗಳ‌ ಗುಂಪಿನಿಂದ ಕೊಲೆಗೀಡಾದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು 5ಕ್ಕೂ ಅಧಿಕ ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿದು ಬಂದಿದೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಹಿಂದೂಗಳು ಕೂಡ ಭಾಗಿಯಾಗಿರುವುದಾಗಿ ಬೆಳಕಿಗೆ ಬಂದಿದೆ ಎಂಬ ಮಾಹಿತಿ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ‌.

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಮಂಗಳೂರು ಪೊಲೀಸರ ತಂಡ ಈಗಾಗಲೇ ಐದಕ್ಕೂ ಅಧಿಕ ಮಂದಿ ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಲ್ಲಿ ಇಬ್ಬರು ಹಿಂದೂಗಳು ಇದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಪೊಲೀಸರು ಇನ್ನೂ ಅಧಿಕೃತ ಮಾಹಿತಿ ನೀಡಿಲ್ಲ.

Advertisements

ಸುಹಾಸ್‌ ಶೆಟ್ಟಿ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದ ಹೊರ ಜಿಲ್ಲೆಯ ಇಬ್ಬರು ಹಿಂದೂಗಳನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ. ಬಂಧಿತರು ಅಪರಾಧ ಹಿನ್ನೆಲೆಯವರು ಎನ್ನಲಾಗುತ್ತಿದೆ.

ಮತೀಯ ಕಾರಣಕ್ಕೆ ಸುಹಾಸ್ ಶೆಟ್ಟಿ ಕೊಲೆ ನಡೆದಿದೆ ಎಂದು ಬಿಜೆಪಿ ಮತ್ತು ಸಂಘಪರಿವಾರದ ನಾಯಕರು ಆರೋಪಿಸಿದ್ದರು.

ಫಾಝಿಲ್ ಕೊಲೆಗೆ ಪ್ರತೀಕಾರವಾಗಿ ಸುಹಾಸ್ ಶೆಟ್ಟಿ ಹತ್ಯೆ ನಡೆದಿದೆ ಎಂಬ ಅನುಮಾನಗಳು ವ್ಯಕ್ತವಾಗಿತ್ತು. ಸುಹಾಸ್‌ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ಇಂದು ನಡೆದ ದಕ್ಷಿಣ ಕನ್ನಡ ಜಿಲ್ಲೆ ಬಂದ್‌ ವೇಳೆ ಮುಸ್ಲಿಮರಿಗೆ ಚೂರಿ ಇರಿತ ಆಗಿದ್ದು, ಮುಸ್ಲಿಮರ ಮೇಲೆ ಹಲ್ಲೆ ನಡೆದಿರುವುದು ವರದಿಯಾಗಿದೆ.

ಇದೀಗ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಹಿಂದೂಗಳ ಬಂಧನ ನಡೆದಿದೆ ಎಂದು ತಿಳಿದುಬಂದಿದ್ದು, ಕೊಲೆ ಕೃತ್ಯಕ್ಕೆ ಬೇರೆ ಆಯಾಮ ಇದೆ ಎನ್ನಲಾಗುತ್ತಿದೆ. ಅಪರಾಧ ಜಗತ್ತಿನ ವೈಯಕ್ತಿಕ ದ್ವೇಷದ ಕಾರಣಕ್ಕೆ ಕೊಲೆ ನಡೆದಿರುವ ಶಂಕೆ ಇದೆ. ರೌಡಿಶೀಟರ್ ಸುಹಾಸ್‌ ಶೆಟ್ಟಿ ಗ್ಯಾಂಗ್‌ವಾರ್‌ಗೆ ಬಲಿಯಾಗಿರುವ ಅನುಮಾನ ವ್ಯಕ್ತವಾಗಿದೆ.

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸಿರುವ ಬಗ್ಗೆ ಪೊಲೀಸರು ಈವರೆಗೆ ಅಧಿಕೃತ ಮಾಹಿತಿ ನೀಡಿಲ್ಲ. ಮಂಗಳೂರು ನಗರ ಪೊಲೀಸ್‌ ಆಯುಕ್ತರು ಶೀಘ್ರದಲ್ಲಿಯೇ ಈ ಬಗ್ಗೆ ಮಾಹಿತಿ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

”ವೈಯಕ್ತಿಕವಾದ ದ್ವೇಷಕ್ಕಾಗಿ ನಡೆದಿರುವ ಘಟನೆ” ಎಂದಿದ್ದ ಸ್ಪೀಕರ್ ಯು ಟಿ ಖಾದರ್

ಫಾಝಿಲ್ ತಂದೆ ಹಾಗೂ ಸಹೋದರರು ಮಾತನಾಡಿದ್ದಾರೆ. ಸುಹಾಸ್ ಕೊಲೆಗೂ ನಮಗೂ ಯಾವುದೇ ಸಂಬಂಧ ಇಲ್ಲ ನಮಗೂ ಈ ಕೃತ್ಯಕ್ಕೂ ಯಾವುದೇ ಸಂಬಂಧ ಇಲ್ಲ. ಇಂತಹ ಪ್ರತಿಕಾರದ ಆಲೋಚನೆಯನ್ನು ನಾವು ಮಾಡಿಯೂ ಇಲ್ಲ. ನಾವು ಎಲ್ಲವನ್ನೂ ಅಂದೇ ದೇವರ ಪಾಲಿಗೆ ಬಿಟ್ಟಿದ್ದೇವೆ ಎಂದಿದ್ದಾರೆ ಎಂದು ಸ್ಪೀಕರ್ ಯು ಟಿ ಖಾದರ್ ಶುಕ್ರವಾರ ಮಧ್ಯಾಹ್ನ ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದರು.

WhatsApp Image 2025 05 02 at 4.44.07 PM

“ಇದೆಲ್ಲವೂ ವೈಯಕ್ತಿಕವಾದ ದ್ವೇಷಕ್ಕಾಗಿ ನಡೆದಿರುವ ಘಟನೆಯಾಗಿದೆ. ಧರ್ಮ ಧರ್ಮದ ದ್ವೇಷ ಅಲ್ಲ” ಇದು ಎಂದು ಯುಟಿ ಖಾದ‌ರ್ ತಿಳಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X