ಬೀದರ್‌ | ಆಸ್ಪತ್ರೆಯಲ್ಲಿ ಮೂಲ ಸೌಕರ್ಯ ಕಲ್ಪಿಸುವಂತೆ ಆರ್‌ಟಿಐ ಕಾರ್ಯಕರ್ತರ ಆಗ್ರಹ

Date:

Advertisements
  • ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು ಹಾಗೂ ಶೌಚಾಲಯ ವ್ಯವಸ್ಥೆ ಮಾಡಬೇಕು
  • ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ಸಂಘದಿಂದ ವೈದಾಧಿಕಾರಿಗಳಿಗೆ ಮನವಿ.

ಹುಮನಾಬಾದ್‌ ತಾಲೂಕು ಆಸ್ಪತ್ರೆಗೆ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ಮೂಲಭೂತ ಸೌಕರ್ಯ ಸೇರಿದಂತೆ ಕಚೇರಿಯ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಾಲೂಕು ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ಸಂಘ ಆಗ್ರಹಿಸಿದೆ.

ಈ ಸಂಬಂಧ ಹುಮನಾಬಾದ್‌ ತಾಲೂಕು ಸಾರ್ವಜನಿಕ ಆಸ್ಪತ್ರೆ ವೈದಾಧಿಕಾರಿಗಳಿಗೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದ ಕಾರ್ಯಕರ್ತರು, ಕಚೇರಿಯ ಸಿಬ್ಬಂದಿಗಳು ಕಡ್ಡಾಯವಾಗಿ ತಮ್ಮ ಐಡಿ ಕಾರ್ಡ್ ಧರಿಸಬೇಕು. ಸಾರ್ವಜನಿಕ ಸೇವೆಗಳ ಸಕಾಲ ಫಲಕವನ್ನು ಅಳವಡಿಸಬೇಕು. ಕಚೇರಿಯಲ್ಲಿ ಆಸನಗಳ ವ್ಯವಸ್ಥೆ ಮಾಡಬೇಕು. ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಹಾಗೂ ಶೌಚಾಲಯ ವ್ಯವಸ್ಥೆ ಮಾಡಬೇಕು” ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಆರ್.ಟಿ.ಇ. ಕಾರ್ಯಕರ್ತರ ಸಂಘದ ತಾಲೂಕಾಧ್ಯಕ್ಷ ವಿಜಯಕುಮಾರ ಜಂಜೀರ್‌ ಉಪಾಧ್ಯಕ್ಷ ಅರವಿಂದ ಮಾಶೆಟ್ಟಿ ಸೇರಿದಂತೆ ಕಾರ್ಯಕರ್ತರಾದ ಮಾಣಿಕ ಹಡಪದ, ಸತೀಷ ಗಡವಂತಿ, ಬಾಬುರಡ್ಡಿ ಕಮ್ಮಾ, ವಿಜಯಕುಮಾರ ಚೆಟ್ಟಿ, ಅಮರನಾಥ ಹಡಪದ, ಸೈಯಾದ್‌ ಯಾಸಿನ್‌ ಅಲಿ , ಶಿವಕುಮಾರ ಮಿತ್ರಾ ಸೇರಿದಂತೆ ಇತರರಿದ್ದರು.

Advertisements

ಬೇಡಿಕೆಗಳು:

1 ಸಾರ್ವಜನಿಕ ಆಸ್ಪತ್ರೆ ಕಚೇರಿಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು.

2.ನಿಗದಿಪಡಿಸಿದ ಸಮಯಕ್ಕಿಂತಲೂ ಹೆಚ್ಚಿನ ಕೆಲಸ ಸಿಬ್ಬಂದಿ ಮಾಡುತ್ತಿದ್ದರೆ ಅವರ ಹಿರಿಯ ಅಧಿಕಾರಿಗಳ ಅನುಮತಿ ಪತ್ರ ಕಡ್ಡಾಯ ನೀಡಿರಬೇಕು.

3. ರೋಗಿಗಳ ತಪಾಸಣೆಗೆ ಟೋಕನ್ ವ್ಯವಸ್ಥೆ ಮಾಡಬೇಕು.

4. ಸಾರ್ವಜನಿಕ ಆಸ್ಪತ್ರೆಯ ಎಲ್ಲ ಸೌಲಭ್ಯಗಳ ದರಪಟ್ಟಿಯ ಫಲಕವನ್ನು ಕನ್ನಡದಲ್ಲಿ ಅಳವಡಿಸಬೇಕು.

5. ಮಹಿಳಾ ಹಾಗೂ ಪುರಷರಿಗೆ ಪ್ರತ್ಯೇಕ ಚುಚ್ಚುಮದ್ದು ಕೋಣೆಗಳು ಮಾಡಬೇಕು.

6. ಸಾರ್ವಜನಿಕ ಆಸ್ಪತ್ರೆಯ ಲ್ಯಾಬ್ ನಲ್ಲಿ ದೊರೆಯುವ ಎಲ್ಲ ಸೌಲಭ್ಯಗಳನ್ನು ಹಾಗೂ ಅವುಗಳ ದರಪಟ್ಟಿ ಕನ್ನಡದಲ್ಲಿ ಫಲಕವನ್ನು ಅಳವಡಿಸಿ 24 ಗಂಟೆ ಸೇವೆಯನ್ನು ಒದಗಿಸಬೇಕು.

7. ಆಸ್ಪತ್ರೆಯ ಎದುರುಗಡೆ ಖಾಸಗಿ ವಾಹನಗಳ ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು.

8. ತಾಯಿ ಮತ್ತು ಮಗುವಿನ ಆಸ್ಪತ್ರೆಯ ವಿವರವನ್ನು ಸಾರ್ವಜನಿಕರಿಗೆ ಸಂಪೂರ್ಣವಾಗಿ ಮಾಹಿತಿ ಒದಗಿಸಬೇಕು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X