ವಿವಾದಿತ ಪಠ್ಯಗಳ ಪರಿಷ್ಕರಣೆಗೆ ರುಪ್ಸಾ ಒತ್ತಾಯ

Date:

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ಬಿಜೆಪಿ ವಿಕೃತಗೊಳಿಸಿದ್ದ ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡಿ, ಸಾಂವಿಧಾನಿ ಮತ್ತು ವೈಜ್ಞಾನಿಕ ವಿಷಯಗಳನ್ನು ಸೇರಿಸುವುದಾಗಿ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿತ್ತು. ಅದರಂತೆ, ಈ ಬಾರಿ, 2023-24ನೇ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳು ಪುನಾರಂಭವಾಗುವ ಮುನ್ನವೇ ಪಠ್ಯಪುಸ್ತಕಗಳನ್ನು ಪರಿಷ್ಕರಿಸಬೇಕೆಂಬ ಒತ್ತಾಯಗಳು ಕೇಳಿಬಂದಿವೆ.

ಬಿಜೆಪಿ ಅಧಿಕಾರದಲ್ಲಿದ್ದಾಗ ಕುವೆಂಪು, ಬಸವಣ್ಣ, ಪಂಪ, ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕಳ ಇತಿಹಾಸವುಳ್ಳ ಪಠ್ಯಗಳನ್ನು ತೆಗೆದು ಹಾಕಿತ್ತು. ಸಾವರ್ಕರ್‌ ಸೇರಿದಂತೆ ಕೋಮುವಾದಿ ವಿಷಯಗಳನ್ನು ಸೇರಿಸಿತ್ತು. ಅದನ್ನು ಪರಿಷ್ಕರಿಸುವಂತೆ ಖಾಸಗಿ ಶಾಲಾ ಒಕ್ಕೂಟ ‘ರುಪ್ಸಾ‘ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಒತ್ತಾಯಿಸಿದ್ದಾರೆ.

ಆದರೆ, ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಬೇಕಿರುವ ಪಠ್ಯಪುಸ್ತಕಗಳು ಮುದ್ರಣವಾಗಿದೆ ಎಂದು ತಿಳಿದುಬಂದಿದೆ. ಶಾಲೆ ಆರಂಭವಾಗುವ ಮೊದಲ ದಿನವೇ ಎಲ್ಲ ಶಾಲೆಗಳಿಗೂ ಪಠ್ಯಪುಸ್ತಕಗಳು ರವಾನೆಯಾಗಲಿವೆ ಎನ್ನಲಾಗಿದೆ. ಶಾಲೆಗಳು ಆರಂಭವಾಗಲು ಇನ್ನು ಕೇವಲ ಆರು ದಿನಗಳಷ್ಟೇ ಬಾಕಿ ಇವೆ. ಹೀಗಾಗಿ, ಈ ವರ್ಷದಲ್ಲೇ ಪಠ್ಯಪುಸ್ತಕಗಳು ಪರಿಷ್ಕರಣೆಯಾಗುವವೇ ಅಥವಾ ಮುಂದಿನ ಶೈಕ್ಷಣಿಕ ವರ್ಷಕ್ಕೆ ಬದಲಾಗುವವೇ ಎಂಬ ಗೊಂದಲ ಸೃಷ್ಟಿಯಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಕನ್ನಡ | ಮೀನಿನ ಆಹಾರ ತಯಾರಿಕಾ ಘಟಕದಲ್ಲಿ ಬೆಂಕಿ; ಕೋಟ್ಯಂತರ ರೂ. ನಷ್ಟ

ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಕೋಳಿ, ಮೀನಿನ ಆಹಾರ...

ವಿಜಯಪುರ | ಕೆಂಪು ಮೆಣಸಿಕಾಯಿಗೆ ಬೆಂಬಲ ಬೆಲೆ ನೀಡಿ ಖರೀದಿಸುವಂತೆ ರೈತ ಸಂಘ ಆಗ್ರಹ

ಕೆಂಪು ಮೆಣಸಿಕಾಯಿಗೆ ಬೆಂಬಲ ಬೆಲೆ ನೀಡಿ ಖರೀದಿಸುವಂತೆ ಕರ್ನಾಟಕ ರಾಜ್ಯ ರೈತ...

ದಾವಣಗೆರೆ | ಕುಟುಂಬ ರಾಜಕಾರಣದ ವಿರುದ್ಧ ನನ್ನ ಹೋರಾಟ: ವಿನಯ್ ಕುಮಾರ್

ಪಾಳೇಗಾರಿಕೆ, ಕುಟುಂಬ ರಾಜಕಾರಣದ ವಿರುದ್ಧ ಹೋರಾಟ ನನ್ನದು. ಸಚಿವ ಎಸ್ ಎಸ್...