ಸಾಗರ | ರಂಗಭೂಮಿಯಿಂದ ಜೀವಪರವಾದ ಸಮರಸ ಸಮಾಜ ಕಟ್ಟಲು ಸಾಧ್ಯ: ಸಚಿವ ಶಿವರಾಜ್ ತಂಗಡಗಿ

Date:

Advertisements

ಪ್ರಸ್ತುತ ಕಾಲಘಟ್ಟದಲ್ಲಿ ರಂಗಭೂಮಿಯ ಜವಾಬ್ದಾರಿ ಬಹಳ ಮಹತ್ವದಾಗಿದ್ದು, ರಂಗಭೂಮಿಯಿಂದ ಜೀವಪರವಾದ ಸಾಮರಸ್ಯದ ಒಳಿತಿನ ಸಮಾಜ ಕಟ್ಟಲು ಸಾಧ್ಯ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್ ತಂಗಡಗಿ ಅವರು ಅಭಿಪ್ರಾಯಪಟ್ಟರು.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೆಗ್ಗೋಡಿಯಲ್ಲಿರುವ ನೀನಾಸಂ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ನವೀಕರಿಸಿರುವ ರಂಗಸಭಾಂಗಣದ ಲೋಕಾರ್ಪಣೆ, ನೀನಾಸಂ ರಂಗ ಶಿಕ್ಷಣ ಕೇಂದ್ರದ ವರ್ಷಾಂತ್ಯದ ನಾಟಕೋತ್ಸವ ಮತ್ತು ಬೇಸಿಗೆ‌ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

“ರಂಗಭೂಮಿ ಒಂದು ಮಾಧ್ಯಮ ಕ್ಷೇತ್ರ ಇದ್ದಂತೆ. ಸಮಾಜಕ್ಕೆ ಹೇಳಬೇಕಾದ್ದನ್ನು ಗಟ್ಟಿಯಾಗಿ ಹೇಳಬಹುದು. ರಂಗಭೂಮಿಯಿಂದ ಸಮಾಜಕ್ಕೆ ಒಳ್ಳೆ ಸಂದೇಶಗಳನ್ನು ನೀಡುವ ಕೆಲಸ ನಡೆಯುತ್ತಿದೆ” ಎಂದು ಹೇಳಿದರು.

Advertisements
ನೀನಾಸಂ ರಂಗಭೂಮಿ

ನೀನಾಸಂ, ಕಲಾವಿದರನ್ನು ತಯಾರಿಸುವ ಫ್ಯಾಕ್ಟರಿ: “ಹೆಗ್ಗೋಡಿನಲ್ಲಿ‌ರುವ ನೀ‌ನಾಸಂ ಕಲಾವಿದರನ್ನು ತಯಾರಿಸುತ್ತಿರುವ ಫ್ಯಾಕ್ಟರಿ ಇದ್ದಂತೆ. ಇಲ್ಲಿಂದ ನೀನಾಸಂ ಸತೀಶ್, ಅಚ್ಯುತ್ ಕುಮಾರ್, ಮಂಡ್ಯ ರಮೇಶ್ ಹೀಗೆ ನೂರಾರು ಮಂದಿ ಕಲಾವಿದರನ್ನು ಈ ಸಂಸ್ಥೆ ನೀಡಿದೆ.‌ ಒಂದು ಸಂಸ್ಥೆಯನ್ನು 75 ವರ್ಷ ಕಟ್ಟಿ ಬೆಳೆಸುವ ಕೆಲಸ‌ ಸುಲಭವಲ್ಲ.‌ ಆದರೆ ನೀನಾಸಂ ಸಂಸ್ಥೆಯ ಕಾರ್ಯ ಶ್ಲಾಘನೀಯ” ಎಂದರು.

“ಪ್ರತಿ ವರ್ಷ ನೀನಾಸಂ ಸಂಸ್ಥೆಗೆ ಅನುದಾನ ನೀಡಲಾಗುತ್ತಿದೆ. ಕಳೆದ ವರ್ಷ 35 ಲಕ್ಷ ರೂ. ಅನುದಾನ ನೀಡಲಾಗಿದ್ದು, ಈ ವರ್ಷ ಹೆಚ್ಚಿನ ಅನುದಾನ ನೀಡಲಾಗುವುದು” ಎಂದು ಸಚಿವರು ಭರವಸೆ ನೀಡಿದರು.‌

ಈ ಸುದ್ದಿ ಓದಿದ್ದೀರಾ? ಮಧುಗಿರಿ | ದಲಿತ ಯುವಕನಿಗೆ ದೇವಾಲಯ ಪ್ರವೇಶ ನಿರಾಕರಣೆ; ವಿಡಿಯೋ ವೈರಲ್

“ಬಿ ವಿ ಕಾರಂತರ ರಂಗಮಂದಿರ ನವೀಕರಣಕ್ಕೆ 75 ಲಕ್ಷ‌ದ ಅಗತ್ಯವಿದೆಯೆಂದು ನನ್ನ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ಸ್ಥಳೀಯ ಶಾಸಕರೊಂದಿಗೆ ಚರ್ಚೆ ನಡೆಸಿ ಅಗತ್ಯದ ಅನುದಾನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ‌ ಬೇಳೂರು ಗೋಪಾಲ ಕೃಷ್ಣ, ಬೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್, ನೀನಾಸಂನ ಸಿದ್ದಾರ್ಥ್ ಭಟ್, ಅಕ್ಷರ ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

ವಿಜಯನಗರ | ಅಲೆಮಾರಿ ಸಮುದಾಯಗಳ ಅಭಿವೃದ್ಧಿಯೇ ನಿಗಮದ ಮುಖ್ಯ ಧ್ಯೇಯ: ಪಲ್ಲವಿ

ಅಲೆಮಾರಿ ಬುಡಕಟ್ಟು ಸಮುದಾಯಗಳನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಮುಂಚೂಣಿಗೆ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

Download Eedina App Android / iOS

X