ಸಾಗರ | ನಮ್ಮ ನಡೆ ವಿಜ್ಞಾನದ ಕಡೆ ಸಾಗಬೇಕು: ಹುಲಿಕಲ್ ನಟರಾಜ್

Date:

Advertisements

ಕಾಣದ ದೆವ್ವಗಳು ಈ ಜಗತ್ತಿನಲ್ಲಿಲ್ಲ ಬದಲಾಗಿ ಕಾಡುವ ದೆವ್ವಗಳು ಮನುಷ್ಯ ರೂಪದಲ್ಲಿದೆ ಎಂದು ಪವಾಡ ಬಯಲು ಖ್ಯಾತಿಯ ಹುಲಿಕಲ್ ನಟರಾಜ್ ಅಭಿಪ್ರಾಯಪಟ್ಟರು.

ಸಾಗರ ತಾಲೂಕು ಆನಂದಪುರ ಸಮೀಪದ ಎಡೇಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಮಹಿಳಾ ಗ್ರಾಮ ಸಭೆಯಲ್ಲಿ ಮೂಢನಂಬಿಕೆ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಿಳೆಯರಿಗೆ ಇದೆ ಮೊಟ್ಟ ಮೊದಲ ಬಾರಿಗೆ ವೈಜ್ಞಾನಿಕ ವಿಚಾರಧಾರೆಗಳನ್ನು ಮೂಡಿಸುತ್ತಿರುವುದು ಶ್ಲಾಘನೀಯ. ಈಗಿನ ಕಾಲದಲ್ಲಿ ತಂತ್ರಜ್ಞಾನ ಬಹಳಷ್ಟು ಮುಂದುವರಿಯುತ್ತಿದೆ. ಆದರೆ ನಾವುಗಳು ಇನ್ನು ಮೌಢ್ಯದ ಸಂಕೋಲೆಯಲ್ಲಿ ಜೀವಂತವಾಗಿ ಸಾಯುತ್ತಾ ಇದ್ದೇವೆ. ಇದರಿಂದ ನಾವುಗಳು ಹೊರಬರಬೇಕು, ಮೊದಲು ಮಹಿಳೆಯರು ಜಾಗೃತರಾಗಬೇಕು ಇದರಿಂದ ಇಡೀ ಕುಟುಂಬ ಜಾಗೃತವಾಗಲು ಸಾಧ್ಯವಾಗುತ್ತದೆ. ಪೊಳ್ಳು ಜ್ಯೋತಿಷಿಗಳು ಭವಿಷ್ಯ ಹೇಳುತ್ತಾರೆ. ಅವರ ಭವಿಷ್ಯ ಅವರ ಕೈಯಲ್ಲಿ ಇರುವುದಿಲ್ಲ, ಇನ್ನು ನಮ್ಮ ಭವಿಷ್ಯ ಹೇಳುತ್ತಾರಂತೆ. ನಾವು ಪಂಚಾಂಗದ ಕಡೆ ಗಮನ ಹರಿಸದೆ ಪಂಚ ಅಂಗಗಳ ಕಡೆ ಗಮನ ಹರಿಸಬೇಕು. ಯಾರು ಯಾರ ಹಣೆಬರ ಬರೆಯಲು ಸಾಧ್ಯವಿಲ್ಲ. ನಮ್ಮ ಭವಿಷ್ಯ ನಾವೇ ರೂಪಿಸಿಕೊಳ್ಳಬೇಕು. ಮೌಢ್ಯವನ್ನು ಬುಡ ಸಮೇತ ಕಿತ್ತೊಗೆಯಬೇಕು. ವಿಜ್ಞಾನದ ಕಡೆ ನಮ್ಮ ನಡೆ ಸಾಗಬೇಕು” ಎಂದು ಕರೆ ನೀಡಿದರು.

Advertisements
WhatsApp Image 2025 03 08 at 1.12.50 PM

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಜ್ಯೋತಿ, ಉಪಾಧ್ಯಕ್ಷರು ಮತ್ತು ಸದಸ್ಯರು ಹಾಗೂ ಅಭಿವೃದ್ಧಿದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಮತ್ತು ಸುತ್ತಮುತ್ತಲಿನ ಊರಿನ ಮಹಿಳೆಯರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X