ಸಾಗರ | ಸಿಗಂದೂರು ದೇಗುಲ ಮುಳುಗಿಸಲು ಯತ್ನಿಸಿದವರಿಂದ ಧರ್ಮಸ್ಥಳ ಯಾತ್ರೆ, : ಶಾಸಕ ಬೇಳೂರು ಗರಂ

Date:

Advertisements

ಸಾಗರ, ಹಿಂದುಳಿದ ವರ್ಗದವರ ಸಿಗಂದೂರು ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ಸೇರಿಸುವಂತೆ ಪತ್ರ ಬರೆದಿದ್ದ ಯಡಿಯೂರಪ್ಪ, ವಿಜಯೇಂದ್ರ, ಹರತಾಳು ಹಾಲಪ್ಪ ಅವರಿಗೆ ಧರ್ಮಸ್ಥಳ ಯಾತ್ರೆ ಮಾಡುವ ನೈತಿಕತೆ ಇಲ್ಲ. ವೋಟ್ ಬ್ಯಾಂಕ್‌ಗಾಗಿ ಯಾತ್ರೆ ನಡೆಸುತ್ತಿದ್ದಾರೆ ಎಂದು ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಸಿಗಂದೂರು ದೇವಸ್ಥಾನವನ್ನು ಮುಳುಗಿಸಲು ಪ್ರಯತ್ನ ಮಾಡಿದವರು ಈಗ ಧರ್ಮಸ್ಥಳ ಉಳಿಸಿ ಯಾತ್ರೆ ಮಾಡುತ್ತಿದ್ದಾರೆ.

ಎಸ್‌ಐಟಿ ರಚನೆಯಾದಾಗ ಯಡಿಯೂರಪ್ಪ, ವಿಜಯೇಂದ್ರ ಸೇರಿ ಎಲ್ಲರು ಸ್ವಾಗತಿಸಿದ್ದರು. ಈಗ ಎನ್‌ಐಎ ತನಿಖೆಗೆ ವಹಿಸಿ ಎಂದು ಆಗ್ರಹಿಸುತ್ತಿದ್ದಾರೆ. ಇದು ಬಿಜೆಪಿಯ ಇಬ್ಬಗೆಯ ನೀತಿ ತೋರಿಸುತ್ತದೆ.ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿದ್ದರಿಂದ ಧರ್ಮಸ್ಥಳದ ವಿರುದ್ಧದ ಷಡ್ಯಂತ್ರ ಬಯಲಿಗೆ ಬಂದಿದೆ. ಪಿತೂರಿ ನಡೆಸಿದವರು ಒಬ್ಬೊಬ್ಬರಾಗಿ ಜೈಲುಗೆ ಹೋಗತ್ತಿದ್ದಾರೆ.

ಇನ್ನಷ್ಟು ಪ್ರಮುಖರ ಮುಖವಾಡ ಬಯಲಿಗೆ ಬರಲಿದೆ ಎಂದ ಅವರು, ಭಾರಿ ಮಳೆಯಿಂದಾಗಿ ಮಲೆನಾಡಿನ ಅಡಿಕೆ ಬೆಳೆಗಾರರಿಗೆ ತೀವ್ರ ಸಮಸ್ಯೆಯಾಗಿದೆ. ಬೆಳೆಗಾರರಿಗೆ ನೆರವಾಗಲು ವಿಶೇಷ ಪ್ಯಾಕೇಜ್ ಘೋಷಿಸುವಂತೆ ಸದನದಲ್ಲಿ ಸರ್ಕಾರವನ್ನು ಒತ್ತಾಯಿಸಿದ್ದೇವೆ. ಮಲೆನಾಡು ಭಾಗದ ಶಾಸಕರು ಮುಖ್ಯಮಂತ್ರಿ ಭೇಟಿಯಾಗಿ ವಿಶೇಷ ಅನುದಾನಕ್ಕೆ ಮನವಿ ಮಾಡಲಿದ್ದೇವೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

Download Eedina App Android / iOS

X