ಸಾಗರ | ಅಧಿಕಾರ ಕೊಟ್ಟ ಜನರ ಋಣ ತೀರಿಸುತ್ತೇನೆ: ಶಾಸಕ ಗೋಪಾಲಕೃಷ್ಣ ಬೇಳೂರು

Date:

Advertisements

ನನಗೆ ಅಧಿಕಾರ ಕೊಟ್ಟ ಜನರ ಋಣ ತೀರಿಸುತ್ತೇನೆ, ಅದು ನನ್ನ ಕರ್ತವ್ಯ ಕೂಡ ಎಂದು ಸಾಗರ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.

ತಾಲೂಕಿನ ಆನಂದಪುರದಲ್ಲಿ ಆಚಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 11 ಕೋಟಿಗೂ ಅಧಿಕ ಅನುದಾನದಲ್ಲಿ ನಡೆಸಲಾಗುತ್ತಿರುವ ಕಾಮಗಾರಿಕೆಗಳಿಗೆ ಶಂಕುಸ್ಥಾಪನೆ ಮಾಡಿ ಮಾತನಾಡಿದ ಅವರು, “ಬಿಜೆಪಿ ನಾಯಕರು ಕೊರೋನ ಸಮಯದಲ್ಲಿ ಜನರ ಹಣ ಲೂಟಿ ಮಾಡಿದರು. ಅದರಲ್ಲೂ ಸಾಗರ ಭಾಗದಲ್ಲಿ ಹಾಲಪ್ಪನವರು ಒಂದೇ ಒಂದು ಕಟ್ಟಡವನ್ನು ನಿರ್ಮಿಸದೆ ಅಧಿಕಾರವನ್ನು ಕೊನೆಗೊಳಿಸಿದರು. ಹಾಗೆ ತಮ್ಮ ನಾಯಕರ ಮನೆಗೆ ಸೀಮಿತವಾಗಿ ರಸ್ತೆಯನ್ನು ನಿರ್ಮಿಸಿ ಕೊಟ್ಟಿದ್ದಾರೆಯೇ ಹೊರತು ಜನರಿಗೆ ಒಂದು ಅನುಕೂಲವಾಗುವಂತಹ ಕೆಲಸವನ್ನೂ ಮಾಡದೆ ಹೋದರು. ಗ್ಯಾರಂಟಿ ಯೋಜನೆ ಬಗ್ಗೆ ಬಿಜೆಪಿ ಟೀಕೆ ಮಾಡುತ್ತಿರಬಹುದು, ಆದರೆ ಕಡು ಬಡವರ ಮನೆಯಲ್ಲಿ ಬೆಳಕನ್ನು ತರಿಸಿದ್ದು ಗ್ಯಾರೆಂಟಿ ಯೋಜನೆಗಳೇ” ಎಂದರು.

WhatsApp Image 2025 02 20 at 10.00.06 AM 1

10 ವರ್ಷಗಳ ಬಳಿಕ ಜನತೆ ಅಧಿಕಾರ ನೀಡಿದ್ದಾರೆ. ಇದರ ಫಲವಾಗಿ ಯಾವುದೇ ಜಾತಿ, ಧರ್ಮ, ಕುಲ ಮರೆತು ಎಲ್ಲರನ್ನೂ ಸಮಾನರಂತೆ ಕಂಡು ಎಲ್ಲರಿಗೂ ಸೌಲಭ್ಯ ದೊರೆಯುವಂತೆ ಮಾಡುತ್ತೇನೆ. ಕಾಗೋಡು ತಿಮ್ಮಪ್ಪನವರ ಅವಧಿಯಲ್ಲಿ ರೈತರಿಗೆ ಹಕ್ಕು ಪತ್ರಗಳನ್ನು ನೀಡಿದರು ಆದರೆ ಅವರ ಬಳಿಕ ಯಾರು ಸಹ ನೀಡಲಿಲ್ಲ. ಈಗ ನಾವು ಮತ್ತೆ ರೈತರಿಗೆ ಹಕ್ಕು ಪತ್ರ ಕೊಡಿಸುವ ಕೆಲಸ ಮಾಡುತ್ತೇವೆ. ಕ್ಷೇತ್ರದ ಪ್ರತಿಯೊಂದು ಗ್ರಾಮದ ಅಭಿವೃದ್ಧಿಯು ನನ್ನ ಗುರಿಯಾಗಿದೆ ಹಾಗೆ ಬಡ ಜನರಿಗೆ ಅನುಕೂಲಕರವಾಗುವಂತಹ ಅನೇಕ ಕೆಲಸ ಕಾರ್ಯಗಳನ್ನು ಮಾಡುತ್ತಾ ಇದ್ದೇನೆ ಮುಂದೇಯೂ ಮುಂದುವರೆಸಿಕೊಂಡು ಹೋಗುವೆ” ಎಂದು ಭರವಸೆ ನೀಡಿದರು.

Advertisements

ಈ ಸುದ್ದಿ ಓದಿದ್ದೀರಾ?: ಎನ್‌ಎಸ್‌ಯುಐ ಸಾಗರ ತಾಲೂಕು ಘಟಕದ ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ನೇಮಕ

ಈ ವೇಳೆ ಆಚಾಪುರ ಗ್ರಾಮ ಪಂಚಾಯತಿ ಅಧ್ಯಕ್ಷ ಕಲೀಮುಲ್ಲಾ ಖಾನ್, ಮಾಜಿ ತಾಲೂಕು ಪಂಚಾಯತ್ ಸದಸ್ಯ ಸೋಮಶೇಖರ್ ಲಾವಿಗೆರೆ, ಕೆಡಿಪಿ ಸದಸ್ಯ ರಜಾಕ್, ಬಗರ್‌ ಹುಕುಂ ಸದಸ್ಯ ರವಿಕುಮಾರ್, ಹೊಸೂರು ಗ್ರಾಪಂ ಉಪಾಧ್ಯಕ್ಷ ಚೌಡಪ್ಪ, ಲತಾ, ಕೋಮಲ, ಮೇನಕ, ಪುಷ್ಪ, ಅಬ್ದುಲ್ ಘನಿ ಹಾಗೂ ಇತರರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X