ಸಾಗರ | ಜ.18ರಿಂದ ಕನ್ನಡದಲ್ಲಿ ಸಾರ್ವಜನಿಕ ಕುರ್‌ಆನ್ ಪ್ರವಚನ ಕಾರ್ಯಕ್ರಮ

Date:

Advertisements

ಜಮಾಅತೆ ಇಸ್ಲಾಮಿ ಹಿಂದ್ ಸಾಗರ ಕುರ್‌ಆನ್ ಪ್ರವಚನದ ಸ್ವಾಗತ ಸಮಿತಿಯಿಂದ ನಗರದ ಗಾಂಧಿ ಮೈದಾನದಲ್ಲಿ ಪ್ರತಿದಿನ ಸಂಜೆ 7ರಿಂದ 9ರವರೆಗೆ ಸಾರ್ವಜನಿಕವಾಗಿ ಕುರ್‌ಆನ್ ಪ್ರವಚನ ಕಾರ್ಯಕ್ರಮವಿರುತ್ತದೆ. ಅದರಂತೆ ಜನವರಿ 18ರ ಶನಿವಾರ ʼಮಾನವನ ಘನತೆʼ ಪ್ರವಚನವನ್ನು ಯಾದಗಿರಿ ಜಿಲ್ಲೆಯ ಕೊಡೆಕಲ್ಲಾ ದುರದುಂಡೇಶ್ವರ ವಿರಕ್ತ ಮಠದ ಶಿವಕುಮಾರ ಸ್ವಾಮೀಜಿ ನಡೆಸಿಕೊಡಲಿದ್ದಾರೆ.

ಬೆಂಗಳೂರಿನ ಶ್ರೀ ಕ್ಷೇತ್ರ ಕಾರ್ತಿಕೇಯ ಪೀಠದ ಯೋಗೇಂದ್ರ ಶ್ರೀಗಳು ಮತ್ತು ಜ ಲಾಲ್ ಹುಸೈನ್ ಕಂದಗಲ್ ಇಳಕಲ್ ಅವರು ಜನವರಿ 19ರ ಭನುವಾರ ಸಂಜೆ 7ರಿಂದ 9ರವರೆಗೆ ʼಜೀವನ ಉದ್ದೇಶʼದ ಕುರಿತು ಪವಿತ್ರ ಕುರ್‌ಆನ್ ಪ್ರವಚನ ನೀಡುವರು.

WhatsApp Image 2025 01 17 at 5.09.44 PM 1

“ಪವಿತ್ರ ಕುರ್‌ಆನ್ ಶಿಷ್ಟಾಚಾರ ಮತ್ತು ನ್ಯಾಯದ ಪ್ರಣಾಳಿಕೆಯಾಗಿದೆ. ಸ್ವಾತಂತ್ರ್ಯದ ಘೋಷಣಾ ಪತ್ರವಾಗಿದೆ. ದೈನಂದಿನ ಜೀವನದಲ್ಲಿ ಸತ್ಯ-ನ್ಯಾಯಗಳ ಶಿಕ್ಷಣ ನೀಡುವ ಕಾನೂನಿನ ಮಹಾನ್ ಗ್ರಂಥವಾಗಿದೆ. ಇನ್ನಾವುದೇ ಧಾರ್ಮಿಕ ಗ್ರಂಥ ಜೀವನದಲ್ಲಿ ಎಲ್ಲ ಸಮಸ್ಯೆಗಳ ವ್ಯಾವಹಾರಿಕ ವ್ಯಾಖ್ಯಾನ ಮತ್ತು ಪರಿಹಾರ ನೀಡುವುದಿಲ್ಲ” ಎಂದು ಸರೋಜಿನಿ ನಾಯ್ಡು ಹೇಳಿದ್ದರು.

Advertisements

ಈ ಸುದ್ದಿ ಓದಿದ್ದೀರ? ಶಿವಮೊಗ್ಗ | ನೆರವಿನ ಹಸ್ತಕ್ಕಾಗಿ ಎದುರು ನೋಡುತ್ತಿದೆ ಬಡ ಕುಟುಂಬ

WhatsApp Image 2025 01 17 at 5.09.45 PM

“ಜನರೇ, ನಾವು ನಿಮ್ಮನ್ನು ಒಬ್ಬ ಪುರುಷ ಮತ್ತು ಒಬ್ಬ ಸ್ತ್ರೀಯಿಂದ ಉಂಟು ಮಾಡಿದೆವು. ತರುವಾಯ ನೀವು ಪರಸ್ಪರ ಪರಿಚಯ ಪಟ್ಟುಕೊಳ್ಳಲಿಕ್ಕಾಗಿ ನಿಮ್ಮ ಜನಾಂಗಗಳನ್ನೂ ಗೋತ್ರಗಳನ್ನೂ ಮಾಡಿದೆವು. ನಿಮ್ಮ ಪೈಕಿ ಅತ್ಯಧಿಕ ಧರ್ಮನಿಷ್ಠನೇ ವಾಸ್ತವದಲ್ಲಿ ಅಲ್ಲಾಹನ ಬಳಿ ಹೆಚ್ಚು ಗೌರವಕ್ಕೆ ಪಾತ್ರನು. ನಿಶ್ಚಯವಾಗಿಯೂ ಅಲ್ಲಾಹನು ಸರ್ವಜ್ಞನೂ ವಿವರಪೂರ್ಣನೂ ಆಗಿರುತ್ತಾನೆ” ಎಂಬುದು ಪವಿತ್ರ ಕು‌ರ್‌ಆನ್‌ನಲ್ಲಿ ಅಡಕವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X