ಬಂಟ್ವಾಳ | ಮುಸ್ಲಿಂ ವ್ಯಾಪಾರಿಗಳು ಪ್ರಯಾಣಿಸುತ್ತಿದ್ದ ರಿಕ್ಷಾದ ಮೇಲೆ ಮುಗಿಬಿದ್ದ ಸಂಘಪರಿವಾರದ ಕಾರ್ಯಕರ್ತರು!

Date:

Advertisements

ರೌಡಿಶೀಟರ್ ಸುಹಾಸ್ ಶೆಟ್ಟಿ ಎಂಬಾತನನ್ನು ದುಷ್ಕರ್ಮಿಗಳ ಗುಂಪು ಮಂಗಳೂರಿನ ಬಜಪೆಯಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಹತ್ಯೆಗೈದ ಬೆನ್ನಲ್ಲೇ ಮುಸ್ಲಿಮರು ಪ್ರಯಾಣಿಸುತ್ತಿದ್ದ ಆಟೋವೊಂದರ ಮೇಲೆ ಸಂಘಪರಿವಾರದ ಕಾರ್ಯಕರ್ತರು ಮುಗಿಬಿದ್ದು ದಾಂಧಲೆ ನಡೆಸಿದ ಘಟನೆ ಶುಕ್ರವಾರ ಮಧ್ಯಾಹ್ನ ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡಿನಲ್ಲಿ ನಡೆದಿದೆ.

ಸುಹಾಸ್ ಶೆಟ್ಟಿ ಅವರ ಶರೀರವನ್ನು ಮಂಗಳೂರಿನ ಏ.ಜೆ. ಆಸ್ಪತ್ರೆಯಿಂದ ಅವರ ಹುಟ್ಟೂರಾದ ಬಂಟ್ವಾಳ ತಾಲೂಕಿನ ಕಾರಿಂಜಕ್ಕೆ ಪೊಲೀಸ್ ಬಂದೋಬಸ್ತಿನಲ್ಲಿ ಕೊಂಡೊಯ್ಯುವುದಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ನಡುವೆ ಸುಹಾಸ್ ಶೆಟ್ಟಿಯವರ ಮೃತದೇಹದ ಅಂತಿಮ ದರ್ಶನಕ್ಕೆಂದು ಬಿ.ಸಿ.ರೋಡಿನಲ್ಲಿ ಸಂಘಪರಿವಾರದ ಕಾರ್ಯಕರ್ತರು ರಸ್ತೆ ಬದಿಯಲ್ಲಿ ಕಾಯುತ್ತಿದ್ದರು. ಈ ನಡುವೆ ಬೀಡಿಯ ಕಟ್ಟನ್ನು ತುಂಬಿಕೊಂಡು ಮೂರು ಮಂದಿ ಮುಸ್ಲಿಂ ಬೀಡಿ ವ್ಯಾಪಾರಸ್ಥರು ತುಂಬೆಯಿಂದ ಪಾಣೆಮಂಗಳೂರು ಕಡೆಗೆ ರಸ್ತೆ ಬದಿ ನಿಂತಿದ್ದ ಸಂಘಪರಿವಾರದ ಕಾರ್ಯಕರ್ತರ ನಡುವೆಯೇ ಸಾಗುತ್ತಿದ್ದರು.

WhatsApp Image 2025 05 02 at 4.44.07 PM
ರೌಡಿಶೀಟರ್ ಸುಹಾಸ್ ಶೆಟ್ಟಿ ಮೃತದೇಹ

ಮುಸ್ಲಿಂ ವ್ಯಾಪಾರಸ್ಥರು ಶುಕ್ರವಾರವಾದ್ದರಿಂದ ಬಿಳಿ ಅಂಗಿ, ಪಂಚೆ ಧರಿಸಿದ್ದನ್ನು ಗಮನಿಸಿದ ಕೆಲವು ಕಿಡಿಗೇಡಿಗಳು, ಆಟೋ ರಿಕ್ಷಾದ ಮೇಲೆ ಮುಗಿಬಿದ್ದಿದ್ದಾರೆ. ಒಬ್ಬಾತ ಎದುರಿನಿಂದ ತನ್ನ ಕೈ ಪ್ರಯೋಗಿಸಿ ರಿಕ್ಷಾದ ಮುಂದಿನ ಗಾಜನ್ನು ಒಡೆದು ಹಾಕಿದ್ದಾನೆ. ಇನ್ನು ಕೆಲವರು ಹಿಂಬದಿಯಿಂದ ದಾಳಿ ನಡೆಸಿದ್ದಾರೆ. ಇದನ್ನು ಕೂಡಲೇ ಗಮನಿಸಿದ ಘಟನಾ ಸ್ಥಳದಲ್ಲಿ ಬಂದೋಬಸ್ತಿನಲ್ಲಿದ್ದ ಕೆಲವು ಪೊಲೀಸ್ ಅಧಿಕಾರಿಗಳು, ರಿಕ್ಷಾದಲ್ಲಿದ್ದವರಿಗೆ ಹಲ್ಲೆ ನಡೆಸುವುದನ್ನು ತಪ್ಪಿಸಿದ್ದಾರೆ.

Advertisements

ಸಂಘಪರಿವಾರದ ಕಿಡಿಗೇಡಿಗಳ ದಾಂಧಲೆಯಿಂದ ರಿಕ್ಷಾದ ಮುಂಭಾಗದ ಗಾಜು ಹಾಗೂ ಹಿಂಬದಿಯ ಟಾಪ್ ಕವರನ್ನು ಹರಿದು ಹಾಕಿದ್ದಾರೆ. ಅಲ್ಲದೇ, ಮೂವರು ವ್ಯಾಪಾರಿಗಳ ಪೈಕಿ ಓರ್ವ ವೃದ್ಧ ವ್ಯಾಪಾರಸ್ಥರಿಗೆ ಕಾಲಿನಿಂದ ಒದ್ದಿರುವುದಾಗಿ ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ಮಂಗಳೂರು | ಬೊಬ್ಬೆ ಹೊಡೆದು ಮುಸ್ಲಿಂ ಮೀನು ವ್ಯಾಪಾರಿಯನ್ನು ದುಷ್ಕರ್ಮಿಗಳಿಂದ ಕಾಪಾಡಿದ ಹಿಂದೂ ಮಹಿಳೆ

ಘಟನೆಯ ಬಗ್ಗೆ ಈದಿನ ಡಾಟ್‌ ಕಾಮ್ ಜೊತೆಗೆ ಮಾತನಾಡಿದ ಹೆಸರು ಹೇಳಲಿಚ್ಛಿಸದ ರಿಕ್ಷಾ ಚಾಲಕರು, “ನಾವು ನಮ್ಮಷ್ಟಕ್ಕೆ ತುಂಬೆಯಿಂದ ಪಾಣೆಮಂಗಳೂರು ಕಡೆಗೆ ಬೀಡಿಯ ಕಟ್ಟನ್ನು ತುಂಬಿಕೊಂಡು ಬರುತ್ತಿದ್ದೆವು. ರಸ್ತೆ ಬದಿಯಲ್ಲಿ ನಿಂತಿದ್ದವರು ಒಮ್ಮೆಲೆ ರಿಕ್ಷಾದ ಮೇಲೆ ಮುಗಿಬಿದ್ದಿದ್ದಾರೆ. ರಿಕ್ಷಾದಲ್ಲಿದ್ದ ವೃದ್ಧ ವ್ಯಾಪಾರಿಗೆ ಕಾಲಿನಲ್ಲಿ ತುಳಿದಿದ್ದಾರೆ. ನನ್ನ ರಿಕ್ಷಾದ ಮುಂಭಾಗದ ಗಾಜು ಹಾಗೂ ಹಿಂಬದಿಯ ಟಾಪ್ ಕವರನ್ನು ಹರಿದು ಹಾಕಿದ್ದಾರೆ” ಎಂದು ತಿಳಿಸಿದರು.

WhatsApp Image 2025 05 02 at 3.53.00 PM 1

ರಿಕ್ಷಾದಲ್ಲಿ ಮುಸ್ಲಿಂ ಮಹಿಳೆಯರು ಇದ್ದರು ಎಂಬ ಮಾಹಿತಿ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿರುವ ಬಗ್ಗೆ ಕೇಳಿದಾಗ “ಇಲ್ಲ. ನಮ್ಮ ರಿಕ್ಷಾದಲ್ಲಿ ಮಹಿಳೆಯರು ಇರಲಿಲ್ಲ. ಮೂವರು ಬೀಡಿ ವ್ಯಾಪಾರಸ್ಥರು ಹಾಗೂ ನಾನು ಸೇರಿ 4 ಮಂದಿ ಇದ್ದೇವಷ್ಟೇ” ಎಂದು ರಿಕ್ಷಾ ಚಾಲಕ ಈದಿನ ಡಾಟ್‌ ಕಾಮ್‌ಗೆ ಸ್ಪಷ್ಟನೆ ನೀಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X