ಬಂಟ್ವಾಳ | ಪ್ರಚೋದನಾಕಾರಿ ಹೇಳಿಕೆ ಖಂಡಿಸಿ ಸಂಘಪರಿವಾರ ಪ್ರತಿಭಟನೆ: ಬಿಗಿ ಬಂದೋಬಸ್ತ್‌

Date:

Advertisements

ಮೀಲಾದುನ್ನಬಿ ವಿಚಾರವಾಗಿ ಆರಂಭಗೊಂಡ ಸೋಷಿಯಲ್ ಮೀಡಿಯಾ ವಾಗ್ವಾದದಿಂದಾಗಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ ಸಿ ರೋಡ್‌ನಲ್ಲಿ ಬಿಗುವಿನ ವಾತಾವರಣ ಉಂಟಾಗಿತ್ತು.

ಈದ್ ಮೀಲಾದ್ ಮೆರವಣಿಗೆಗೆ ಸಂಬಂಧಿಸಿದಂತೆ ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಹಾಗೂ ಹಸೈನಾರ್ ಎಂಬವರ ಪ್ರಚೋದನಕಾರಿ ಹೇಳಿಕೆಯಿಂದಾಗಿ ಈ ಬೆಳವಣಿಗೆ ನಡೆದಿದೆ. ಬಿ ಸಿ ರೋಡ್‌ನ ರಕ್ತೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಬೆಳಗ್ಗಿನಿಂದಲೇ ಜಮಾಯಿಸಿದ ಸಂಘಪರಿವಾರದ ಕಾರ್ಯಕರ್ತರು, ಆಡಿಯೋ ಸಂದೇಶ ರವಾನಿಸಿದವರು ತಾಕತ್ತಿದ್ದರೆ ಬರಲಿ ಎಂದು ಸವಾಲು ಹಾಕಿದ್ದರು.

ಅಲ್ಲದೇ, ಪೊಲೀಸ್ ಬ್ಯಾರಿಕೇಡ್‌ಗಳನ್ನು ತಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಮಾಯಿಸಿ ಘೋಷಣೆಗಳನ್ನು ಕೂಗಿದ್ದಾರೆ. ಸದ್ಯ ಪರಿಸ್ಥಿತಿ ಶಾಂತವಾಗಿದ್ದು, ಭದ್ರತೆಗಾಗಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ.

Advertisements

ಈ ಬಗ್ಗೆ ಮಾತನಾಡಿರುವ ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಎನ್.ಯತೀಶ್, ಬಂಟ್ವಾಳದ ಬಿ.ಸಿ ರೋಡ್ ಮತ್ತೆ ಸಹಜ ಸ್ಥಿತಿಗೆ ಮರಳುತ್ತಿದೆ. ದ.ಕ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಕೈಕಂಬ ಮಸೀದಿಯ ಮೀಲಾದ್ ಮೆರವಣಿಗೆಯ ಮಾರ್ಗವನ್ನು ನಾವು ಬದಲಾವಣೆ ಮಾಡಿಲ್ಲ. ಹಿಂದೂ ಸಂಘಟನೆಯವರು ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತೇವೆ ಎಂದಿದ್ದರು. ಹಾಗಾಗಿ, ಬಿ.ಸಿ ರೋಡ್ ಜಂಕ್ಷನ್‌ನಲ್ಲಿ ಅವಕಾಶ ನೀಡಿದ್ದೆವು. ಏನಾದರೂ ಸಮಸ್ಯೆಯಾದರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದೇವೆ” ಎಂದು ತಿಳಿಸಿದರು.

“ಪ್ರಚೋದನಾಕಾರಿ ಆಡಿಯೋ ಹರಿಯಬಿಟ್ಟ ಇಬ್ಬರ ಮೇಲೆಯೂ ಕ್ರಮವಾಗಿದೆ. ಶರೀಫ್ ಹಾಗೂ ಹಸೈನಾರ್ ಇಬ್ಬರನ್ನು ಬಂಧಿಸಿದ್ದೇವೆ. ಗಣೇಶ ಚತುರ್ಥಿ ಹಾಗೂ ಮೀಲಾದುನ್ನಬಿ ಮುನ್ನವೇ ಶಾಂತಿ ಸಭೆ ಮಾಡಿದ್ದೇವೆ. ಈವರೆಗೂ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ಮುಂದೆಯೂ ಅಹಿತಕರ ಘಟನೆಗಳು ಜರುಗದಂತೆ ಕ್ರಮ ಕೈಗೊಳ್ಳುತ್ತೇವೆ. ಪರಿಸ್ಥಿತಿಗೆ ಅನುಗುಣವಾಗಿ ಬಿ.ಸಿ ರೋಡಿನಲ್ಲಿ ಬಂದೋಬಸ್ತ್ ಮುಂದುವರೆಸುತ್ತೇವೆ” ಎಂದು ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X