ಇದು ಬಡವರು, ಸಂವಿಧಾನದ ಉಳಿವಿಗಾಗಿನ ಹೋರಾಟದ ಚುನಾವಣೆ: ಸಂತೋಷ್ ಲಾಡ್

Date:

Advertisements

ಇದು ಬಡವರ ಹಾಗೂ ಸಂವಿಧಾನದ ಉಳಿವಿಗಾಗಿ ನಡೆಯುತ್ತಿರುವ ಹೋರಾಟದ ಚುನಾವಣೆ ಎಂದು ಕಾರ್ಮಿಕ ಸಚಿವ ಸಂತೋಷ ಜಿ. ಲಾಡ್ ಹೇಳಿದರು.

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ವಿಠ್ಠಲ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. “ನಾವು ಬಿಜೆಪಿ ಹಿಂದು ಅಲ್ಲ, ನಾವು ಛತ್ರಪತಿ ಶಿವಾಜಿ ಮಹಾರಾಜರ ವಂಶಸ್ಥರ ಹಿಂದುಗಳು. ಅವರಿಗೆ ಮುಸ್ಲಿಂ ವಿರೋಧಿ ಭಾಷಣಕ್ಕಾಗಿ ಶಿವಾಜಿ ಬೇಕು. ಮರಾಠರು ನಿಜವಾದ ಶೂರರು. ಬಿಜೆಪಿಗರ ಕೈಗೊಂಬೆಗಳಲ್ಲ. ಬರೀ ಮತ ಬ್ಯಾಂಕ್ ಆಗಿ ನಮ್ಮನ್ನು ಬಳಸಿಕೊಳ್ಳಲಾಗಿದೆ. ನಮಗೆ ಯಾವ ಪ್ರಾತಿನಿಧ್ಯವನ್ನು ಅವರು ನೀಡಲಿಲ್ಲ. ಕಳೆದ ವಿಧಾನಸಭೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮೂವತ್ತಾರು ಜನ ಮರಾಠಿಗರಿಗೆ ಟಿಕೆಟ್ ನೀಡಿದೆ. ಇವರು ನಮಗೆ ಏನು ಮಾಡಿದ್ದಾರೆ” ಎಂದು ಪ್ರಶ್ನಿಸಿದರು.

“ಶಿವಾಜಿ ಮಹಾರಾಜರು ವಿಶ್ವ ನಾಯಕ. ಅದನ್ನು ಬಿಟ್ಟು ಬಿಜೆಪಿಯವರು ಬರೀ ಅವರನ್ನು ಮುಸ್ಲಿಂ ವಿರೋಧಿ ಎಂದು ಸಂಕುಚಿತವಾಗಿ ಬಿಂಬಿಸಿದ್ದಾರೆ. ಶಿವಾಜಿಯವರು ಮುಸ್ಲಿಂ ರಾಜರ ವಿರುದ್ಧ ಹೋರಾಡಿದರೇ ಹೊರತು ಮುಸ್ಲಿಂರ ವಿರೋಧಿಯಲ್ಲ. ಶಿವಾಜಿಯವರ ಸೈನ್ಯದಲ್ಲಿ ಸಾವಿರಾರು ಮುಸ್ಲಿಂ ಸೈನಿಕರಿದ್ದರು. ಇದೆಲ್ಲ ಮರೆಮಾಡಿ ಬೇರೆಯದೇ ಚಿತ್ರವನ್ನು ಆರ್‌ಎಸ್‌ಎಸ್‌ನವರು ದೇಶದ ಜನರಲ್ಲಿ ಬಿತ್ತಿದ್ದಾರೆ. ನಾವೆಲ್ಲ ಈಗ ಜಾಗೃತರಾಗಬೇಕಾಗಿದೆ” ಎಂದರು.

Advertisements

“ಮರಾಠಾ ಸಮುದಾಯದ ಏಳ್ಗೆಗಾಗಿ ತಾವು ಶ್ರಮವಹಿಸುವುದಾಗಿ ಹೇಳಿದ ಲಾಡ್, ನೀವು ಯೋಚನೆ ಮಾಡಿ ಮತ ನೀಡಿ. ಮರಾಠರನ್ನು ಬಿಜೆಪಿಯವರು ಗುತ್ತಿಗೆ ಪಡೆದಂತೆ ಆಡುತ್ತಾರೆ. ಮೋದಿಯವರ ವೈಫಲ್ಯಗಳನ್ನು ನಾವು ಲೆಕ್ಕ ಹಾಕಿ ಮತ ನೀಡಬೇಕು” ಎಂದರು.

“ಇಂದಿರಾಗಾಂಧಿಯಿಂದ ಇಲ್ಲಿಯತನಕ ಕಾಂಗ್ರೆಸ್ ಪಕ್ಷ ಜನತೆಯ ಪರವಿದೆ. ಎಲ್ಲ ಯೋಜನೆಗಳಿಂದ ರಾಜ್ಯದಲ್ಲಿ ಒಂದು ಕುಟುಂಬಕ್ಕೆ ಎಂಟು ಸಾವಿರ ರೂ.ನಷ್ಟು ಹಣ ಬರುತ್ತಿದೆ. ರೈತರ ಸಲುವಾಗಿ ನಾವು ಯಾವತ್ತೂ ಮಿಡಿದಿದ್ದೇವೆ. ಕಪ್ಪುಹಣವಿದೆ ಎಂದು ನೋಟ್ ಬ್ಯಾನ್ ಮಾಡಿ ಉಳ್ಳವರಿಗೆ ಅನುಕೂಲ ಮಾಡಿದರು. ಹಣ ಸಿಗದೇ ಬಡವರು ಸತ್ತರು” ಎಂದರು.

“ಮರಾಠ ಮಹಾರಾಜರು ಅದರಲ್ಲೂ ಶಾಹು ಮಹಾರಾಜರಿಂದ ಕ್ರಾಂತಿಯೇ ಆಗಿದೆ. ಡಾ.ಅಂಬೇಡ್ಕರ್ ಅವರನ್ನು ವಿದೇಶಕ್ಕೆ ಕಳಿಸಿದರು ಅವರು. ಇದು ಮರಾಠರ ಹೆಗ್ಗಳಿಕೆ. ದಶಕಗಳಿಂದ ನಮ್ಮನ್ನು ಬಳಸಿಕೊಂಡು ಬರೀ ‘ಶಿವಾಜಿ ಮಹಾರಾಜ್ ಕೀ ಜೈ..’ ಅನ್ನಿಸಿಕೊಂಡು ನಮ್ಮ ಓಟು ಪಡೆದರು. ಹಿಂದೂ ಹಿಂದೂ ಎಂದು ನಾವು ಜೈಲಿಗೆ ಬೀಳುತ್ತೇವೆ. ಬಿಜೆಪಿ ನಾಯಕರ ಮಕ್ಕಳು ವಿದೇಶದಲ್ಲಿ ಓದುತ್ತಾರೆ” ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಮಾತನಾಡಿ, “ಇದು ನಿರ್ಣಾಯಕ ಚುನಾವಣೆ. ಈ ಸಲ ಬದಲಾವಣೆ ಆಗಬೇಕು. ಸತತ ಮೂರು ಬಾರಿ ಆರಿಸಿ ಬಂದು ಯಾವೊಂದು ಮುತುವರ್ಜಿ ವಹಿಸದ ಜಿಗಜಿಣಗಿಯವರನ್ನು ನೀವೆಲ್ಲ ತಿರಸ್ಕರಿಸಿ” ಎಂದು ಕೋರಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

Download Eedina App Android / iOS

X