ಬಾಗೇಪಲ್ಲಿ | ಶಾಲಾ ವಾಹನಕ್ಕೆ ಲಾರಿ ಢಿಕ್ಕಿ ; ಹಲವು ಮಕ್ಕಳಿಗೆ ಗಾಯ

Date:

Advertisements

ಖಾಸಗಿ ಶಾಲಾ ವಾಹನಕ್ಕೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಹಲವು ಮಂದಿ ಶಾಲಾ ಮಕ್ಕಳು ಗಾಯಗೊಂಡಿರುವ ಘಟನೆ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಬಳಿಯ ಸುಂಕಲಮ್ಮ ದೇವಾಲಯದ ಬಳಿ ಬುಧವಾರ ಬೆಳಗ್ಗೆ ನಡೆದಿದೆ.

ಹೇಮಂತ್, ಸುಷ್ಮಿತಾ, ವರ್ಷಿಕಾ, ಸುದೀಪ್, ಹೆಚ್.ಎನ್.ಹಿಮಬಿಂದು, ಸಾನ್ವಿಕಾ, ಲಿಖಿತ, ಶರಣ್ಯ, ಅಶ್ವಿನ್ ಕುಮಾರ್, ಅಶ್ವಿನ್, ತೇಜಸ್, ನಿಹಾನ್ ಅಪಘಾತದಲ್ಲಿ ಗಾಯಗೊಂಡಿರುವ ಸತ್ಯಸಾಯಿ ಶಾಲೆಯ ವಿದ್ಯಾರ್ಥಿಗಳು.

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪೂಲವಾರಪಲ್ಲಿ ಕಡೆಯಿಂದ ಬಂದ ಸತ್ಯಸಾಯಿ ಶಾಲಾ ವಾಹನವು ರಸ್ತೆ ದಾಟುವ ವೇಳೆ ವೇಗವಾಗಿ ಬಂದ ಲಾರಿ ಢಿಕ್ಕಿ ಹೊಡೆದಿದೆ. ಢಿಕ್ಕಿ ಪರಿಣಾಮ ಶಾಲಾ ವಾಹನದಲ್ಲಿದ್ದ ಹತ್ತಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ. ಶಾಲಾ ವಾಹನ ಚಾಲಕನ ಅಜಾಗರೂಕ ಚಾಲನೆಯಿಂದ ಘಟನೆ ಸಂಭವಿಸಿದೆ ಎಂದು ಆರೋಪಿಸಲಾಗಿದೆ. ಗಾಯಾಳು ಮಕ್ಕಳಿಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Advertisements

ಬಿಇಓ ವೆಂಕಟೇಶಪ್ಪ, ಶಿಕ್ಷಣ ಸಮನ್ವಯಾಧಿಕಾರಿ ಆರ್.ವೆಂಕಟರಾಮ್, ದೈಹಿಕ ಶಿಕ್ಷಣ ಪರಿವೀಕ್ಷಕ ಆರ್.ರಂಗನಾಥ್, ಆರಕ್ಷಕ ವೃತ್ತ ನಿರೀಕ್ಷಕ ಪ್ರಶಾಂತ್ ಆರ್ ವರ್ಣಿ, ತಾಲೂಕು ಆರೋಗ್ಯಾಧಿಕಾರಿ ಡಾ.ಸತ್ಯನಾರಾಯಣರೆಡ್ಡಿ ಸ್ಥಳಕ್ಕೆ ಭೇಟಿ ನೀಡಿದ್ದು, ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಈದಿನ ಸಹಾಯವಾಣಿ ಬಿಡುಗಡೆಗೊಳಿಸಿದ ಸಚಿವ ಎಂ.ಸಿ.ಸುಧಾಕರ್

ಸರ್ವೀಸ್ ರಸ್ತೆ ನಿರ್ಮಿಸಲು ಒತ್ತಾಯ : ಘಟನೆಯನ್ನು ಕುರಿತು ಪ್ರತಿಕ್ರಿಯಿಸಿದ ಎಸ್ಎಫ್ಐ ಜಿಲ್ಲಾಧ್ಯಕ್ಷ ಸೋಮಶೇಖರ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಹೆದ್ದಾರಿ ಪಕ್ಕದ ಶಾಲೆ, ಗ್ರಾಮಗಳಿಗೆ ಸರ್ವೀಸ್ ರಸ್ತೆ ವ್ಯವಸ್ಥೆ ಕಲ್ಪಿಸಬೇಕಿತ್ತು. ಆದರೆ ಈ ಭಾಗದಲ್ಲಿ ಸರ್ವೀಸ್‌ ರಸ್ತೆ ನಿರ್ಮಿಸದೆ ನಿರ್ಲಕ್ಷ್ಯಿಸಲಾಗಿದ್ದು, ಇಂತಹ ಅವಘಡಗಳಿಗೆ ಕಾರಣವಾಗುತ್ತಿದೆ. ಕೂಡಲೇ ಸರ್ವೀಸ್‌ ರಸ್ತೆ ನಿರ್ಮಾಣಕ್ಕೆ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X