ರಾಯಚೂರು | ಶಾಲಾ ಬಸ್‌-ಸಾರಿಗೆ ಬಸ್‌ ಡಿಕ್ಕಿ : ಇಬ್ಬರು ವಿದ್ಯಾರ್ಥಿಗಳು ಸಾವು; ಹಲವರಿಗೆ ಗಾಯ

Date:

Advertisements

ಖಾಸಗಿ ಶಾಲಾ ಬಸ್ ಹಾಗೂ ಸಾರಿಗೆ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿ, 15 ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಹೊರವಲಯದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.

ಮಾನ್ವಿಯಿಂದ ರಾಯಚೂರಿಗೆ ಹೊರಟಿದ್ದ ಸಾರಿಗೆ ಬಸ್ ಹಾಗೂ ಶಾಲೆಯ ಮಕ್ಕಳನ್ನು ಕರೆದುಕೊಂಡು ಮಾನ್ವಿ ಕಡೆಗೆ ತೆರಳುತ್ತಿದ್ದ ಬಸ್ ಮಧ್ಯೆ ಡಿಕ್ಕಿ ಹೊಡೆದು ಈ ದುರ್ಘಟನೆ ಜರುಗಿದೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿರುವ ವಿದ್ಯಾರ್ಥಿಗಳನ್ನು ಸಮರ್ಥ ಅಮರೇಶ(7) ಹಾಗೂ ಶ್ರೀಕಾಂತ್ ಮಾರೇಶ(12) ಎಂದು ಗುರುತಿಸಲಾಗಿದೆ. 15 ವಿದ್ಯಾರ್ಥಿಗಳಿಗೆ ಗಾಯಗಳಾಗಿದೆ. ಶಾಲಾ ಬಸ್ ಚಾಲಕ ಹಾಗೂ ಓರ್ವ ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದೆ.

Advertisements

ಇದನ್ನು ಓದಿದ್ದೀರಾ? ತುಮಕೂರು | ಗೃಹ ಸಚಿವರ ಜಿಲ್ಲೆಯಲ್ಲಿ ಜೀತಪದ್ದತಿ ಇನ್ನೂ ಜೀವಂತ: 36 ಕೂಲಿ ಕಾರ್ಮಿಕರ ರಕ್ಷಣೆ

ಮಾನ್ವಿ ಪಟ್ಟಣದ ಲೋಯೋಲಾ ಎಂಬ ಖಾಸಗಿ ಶಾಲೆಗೆ ಸೇರಿದ ಬಸ್ ಇದಾಗಿದ್ದು, ಘಟನೆಯಲ್ಲಿ ಕೆಲವು ವಿದ್ಯಾರ್ಥಿಗಳು ಕೈ ಕಾಲು ಮುರಿದಿರುವುದಾಗಿ ವರದಿಯಾಗಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಸಾರ್ವಜನಿಕರ ಸಹಾಯದಿಂದ ರಿಮ್ಸ್ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಶಾಲೆ 10

ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕೆ, ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಮಕ್ಕಳ ಆರೋಗ್ಯ ವಿಚಾರಿಸಿದರು. ಮೃತಪಟ್ಟ ವಿದ್ಯಾರ್ಥಿಗಳ ಪೋಷಕರಿಗೆ ಸಾಂತ್ವನ ಹೇಳಿದರಲ್ಲದೇ, ಕುಟುಂಬಕ್ಕೆ ಸಾರಿಗೆ ಸಂಸ್ಥೆ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಐದು ಲಕ್ಷ ರೂ ಪರಿಹಾರ ಕೊಡಿಸುವ ಭರವಸೆ ನೀಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X