ಕೊಪ್ಪಳ | ಶಾಲಾ ಕೊಠಡಿ ಶಿಥಿಲ : ಆತಂಕದಲ್ಲಿ ಮಕ್ಕಳ ಕಲಿಕೆ

Date:

Advertisements

ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಆನೆಗುಂದಿ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡ ಸಂಪೂರ್ಣ ಶಿಥಿಲಗೊಂಡ ಪರಿಣಾಮ ವಿದ್ಯಾರ್ಥಿಗಳ ಕಲಿಕೆಗೆ ತೀವ್ರ ತೊಂದರೆಯಾಗುತ್ತಿದ್ದು, ಮಳೆ ಬಂದರೆ ಬಯಲಲ್ಲೇ ಕುಳಿತು ಪಾಠ ಕೇಳಬೇಕಾದ ಪರಿಸ್ಥಿತಿ ಇದೆ.

ಶಾಲೆಯಲ್ಲಿ 1ರಿಂದ 5ನೇ ತರಗತಿವರೆಗೆ ಒಟ್ಟು 87 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಒಟ್ಟು 2 ಕೋಣೆಗಳಿದ್ದು, ಅದರಲ್ಲಿ ಒಂದು ಕೋಣೆ ಸಂಪೂರ್ಣ ಶಿಥಿಲಗೊಂಡಿದರೆ, ಇರುವ ಇನ್ನೊಂದು ಹೊಸ ಕೋಣೆ ಬಿಸಿಯೂಟ ರೇಷನ್ ಶೇಖರಣೆಗೆ, ಮುಖ್ಯಗುರುಗಳ ಕಾರ್ಯಾಲಯವಾಗಿದ್ದು, ಅದೇ ಕೋಣೆಯಲ್ಲಿ ಎಲ್ಲ ತರಗತಿಯ ಮಕ್ಕಳನ್ನು ಕೂರಿಸಿ ಬೋಧನೆ ನಡೆಯುತ್ತಿದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

ಶಿಥಿಲಗೊಂಡ ಕೋಣೆಗಳು ಸ್ವಲ್ಪ ಮಳೆಯಾದರೂ ಸೋರುತ್ತದೆ, ಕೋಣೆಯಲ್ಲಿ ಮಳೆ ನೀರು ಸಂಗ್ರಹವಾಗುವುದರಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅಡ್ಡಿಯಾಗುತ್ತಿದೆ. ಅಲ್ಲದೇ ಶಾಲೆಯ ಮೇಲ್ಛಾವಣಿ ಬಿರುಕು ಬಿಟ್ಟು ಕಬ್ಬಿಣದರ ಸರಳುಗಳು ತೇಲಿವೆ, ಇಂತಹ ಅವ್ಯವಸ್ಥೆಯಲ್ಲಿ ಕುಳಿತು ಪಾಠ ಕೇಳುವ ವಿದ್ಯಾರ್ಥಿಗಳಿಗೆ ಛಾವಣಿ ಯಾವಾಗ ಕುಸಿಯುತ್ತದೋ ಎಂಬ ಆತಂಕ ಕಾಡುತ್ತಿದೆ.

Advertisements
WhatsApp Image 2024 09 02 at 9.05.22 AM 1

ಶಾಲೆಯ ಶಿಕ್ಷಕ ರುದ್ರಗೌಡ ಪಾಟೀಲ್ ಮಾತನಾಡಿ, ʼಶಾಲೆಯಲ್ಲಿ 87 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಾರೆ. ಒಂದು ಹಳೆ ಕಟ್ಟಡ, ಒಂದು ಹೊಸ ಕಟ್ಟಡ ಸೇರಿ ಎರಡು ಕೋಣೆಗಳಿವೆ. ಇನ್ನುಳಿದ ಕೊಠಡಿ ಸಂಪೂರ್ಣ ಶಿಥಿವಾಸ್ಥೆಗೆ ತಲುಪಿದೆ. ಕೂಡಿಸುವುದಕ್ಕೆ ಭಯವಾಗುತ್ತದೆ. ಈ ಕುರಿತು ಮೇಲಾಧಿಕಾರಿಗಳಿಗೆ, ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆʼ ಎಂದು ತಿಳಿಸಿದರು.

ʼಮಕ್ಕಳಿಗೆ ಸೂಕ್ತ ಕೊಠಡಿ ವ್ಯವಸ್ಥೆ ಇಲ್ಲದ ಕಾರಣ ಆತಂಕದಲ್ಲೇ ಪಾಠ, ಪ್ರವಚನ ನಡೆಯುತ್ತಿದೆ. ಇದರಿಂದ ಶಾಲೆಗೆ ಮಕ್ಕಳನ್ನು ಕಲಿಸಲು ನಮಗೂ ಭಯವಾಗುತ್ತಿದೆ. ಜನಪ್ರತಿನಿಧಿಗಳು , ಶಿಕ್ಷಣ ಇಲಾಖೆಯ ಅಧಿಕಾರಿಗಳು ಕೂಡಲೇ ಎಚ್ಚೆತುಕೊಂಡು ಹೊಸ ಕೊಠಡಿ ನಿರ್ಮಿಸಲು ಅಗತ್ಯ ಕ್ರಮ ಕೈಗೊಂಡು ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲ ಮಾಡಿಕೊಡಬೇಕುʼ ಎಂದು ಪೋಷಕರು ಆಗ್ರಹಿಸಿದರು.

mdrafi
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X